ಹಿಂದುಳಿದ ವರ್ಗಗಳ (ಬಿಸಿಎಂ) ಹಾಸ್ಟೆಲ್ಗಳಿಗೆ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದಿದ್ದ ಪ್ರಕರಣದಲ್ಲಿ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಲಾಗಿದೆ. ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತ ಕೆ.ಎ ದಯಾನಂದ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ತುಮಕೂರು ತಾಲೂಕಿನಲ್ಲಿರುವ ಬಿಸಿಎಂ ಹಾಸ್ಟೆಲ್ಗಳಿಗೆ 2023ರ ಅಕ್ಟೋಬರ್ನಿಂದ 2024ರ ಮಾರ್ಚ್ವರೆಗೆ ಹಾಸ್ಟೆಲ್ಗಳಿಗೆ ಹಂಚಿಕೆಯಾಗಿದ್ದ ಅಕ್ಕಿ ಮತ್ತು ಗೋಧಿಯನ್ನು ಎತ್ತುವಳಿ ಮಾಡಿ, ವಿದ್ಯಾರ್ಥಿ ನಿಲಯಗಳಿಗೆ ಸರಬರಾಜು ಮಾಡುವಲ್ಲಿ ಅಧಿಕಾರಿ ಲೋಪವೆಸಗಿದ್ದಾರೆ. ನಿಯಮಬಾಹಿರವಾಗಿ ಸಿದ್ಧಗಂಗಾ ಮಠದಿಂದ ಅಕ್ಕಿ ಸಾಲ ಪಡೆದಿರುವುದು ಸಾಬೀತಾಗಿದೆ ಎಂದು ಅಮಾನತು ಆದೇಶದಲ್ಲಿ ವಿವರಿಸಿದ್ದಾರೆ.



