ರೈಲ್ವೆ ಪ್ರಯಾಣಿಕನಿಗೆ ಮನಬಂದಂತೆ ಹಲ್ಲೆಗೈದ ಟಿಟಿಇ: ವಿಡಿಯೋ ವೈರಲ್

Date:

ಕೆಲದಿನಗಳ ಹಿಂದೆ ವಿಮಾನ ಪ್ರಯಾಣ ವಿಳಂಬವಾಯಿತೆಂದು ಆಕ್ರೋಶಗೊಂಡ ಪ್ರಯಾಣಿಕನೋರ್ವ ಇಂಡಿಗೋ ವಿಮಾನದ ಪೈಲಟ್‌ ಮೇಲೆ ಹಲ್ಲೆ ನಡೆಸಿದ ಘಟನೆ ಮಾಸುವ ಮುನ್ನವೇ, ರೈಲ್ವೆ ಪ್ರಯಾಣಿಕನೋರ್ವನಿಗೆ ಮನಬಂದಂತೆ ಟಿಕೆಟ್ ಪರಿಶೀಲನಾ ಅಧಿಕಾರಿ(ಟಿಟಿಇ)ಯೋರ್ವ ಹಲ್ಲೆಗೈದ ಘಟನೆ ನಡೆದಿದೆ.

ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ ವ್ಯಕ್ತವಾಗಿದೆ.

ರೈಲ್ವೆ ಗಾಡಿ ಸಂಖ್ಯೆ 15203 ಬರೌನಿ-ಲಕ್ನೋ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈ ಘಟನೆ ನಡೆದಿದ್ದು, ರಾಜೇಶ್ ಸಾಹು ಎಂಬ ನೆಟ್ಟಿಗ ಈ ವಿಡಿಯೋವನ್ನು ಪೋಸ್ಟ್ ಮಾಡಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋದಲ್ಲಿ ಪ್ರಯಾಣಿಕನಿಗೆ ಮಾತ್ರವಲ್ಲದೇ, ಹಲ್ಲೆ ಮಾಡುತ್ತಿದ್ದ ಬಗ್ಗೆ ವಿಡಿಯೋ ಮಾಡುತ್ತಿದ್ದವನಿಗೂ ಹಲ್ಲೆಗೆ ಯತ್ನಿಸಿರುವುದು ದಾಖಲಾಗಿದೆ.

ವಿಡಿಯೋ ಹಂಚಿಕೊಂಡು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಇಲಾಖೆಗೆ ಟ್ಯಾಗ್ ಮಾಡಿರುವ ರಾಜೇಶ್ ಸಾಹು, “ಪ್ರಯಾಣಿಕರ ಮೇಲೆ ಟಿಟಿಇಯವರಿಗೆ ಹೀಗೆ ಹೊಡೆಯುವ ಸ್ವಾತಂತ್ರ್ಯವಿದೆಯೇ? ಗೂಂಡಾಗಳಿಗೆ ಟಿಟಿ ಎಂಬ ಹೆಸರಿದೆಯೇ? ಇಂತಹ ವ್ಯವಸ್ಥೆಯಲ್ಲಿ ಇಂಥವರು ಯಾಕಿದ್ದಾರೆ?” ಎಂದು ಪ್ರಶ್ನಿಸಿದ್ದು, ”ವಿಡಿಯೋದಲ್ಲಿ ಸ್ಪಷ್ಟವಾದ ದಾಖಲೆ ಇದೆ. ಕ್ರಮ ಕೈಗೊಳ್ಳಿ. ಜನರನ್ನು ಕೀಟಗಳೆಂದು ಪರಿಗಣಿಸುವುದನ್ನು ನಿಲ್ಲಿಸಿ” ಎಂದು ಆಗ್ರಹಿಸಿದ್ದಾರೆ.

ಈ ವಿಡಿಯೋ ಈಗ ವೈರಲಾಗಿದ್ದು, ಟಿಟಿಇಯನ್ನು ಸೇವೆಯಿಂದಲೇ ವಜಾಗೊಳಿಸಿ ಎಂಬ ಆಗ್ರಹ ಕೇಳಿಬಂದಿದೆ.

ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೈಲ್ವೆ ಅಧಿಕಾರಿಗಳು, “ಪ್ರಯಾಣಿಕನ ಮೇಲೆ ಟಿಟಿಇ ಹಲ್ಲೆಗೈದಿರುವ ಘಟನೆಯ ವಿಡಿಯೋ ನಮ್ಮ ಗಮನಕ್ಕೆ ಬಂದಿದೆ. ತಪ್ಪಿತಸ್ಥ ಅಧಿಕಾರಿಯನ್ನು ಈಗಾಗಲೇ ಸೇವೆಯಿಂದ ಅಮಾನತು ಮಾಡಲಾಗಿದೆ. ತನಿಖೆಗೆ ಆದೇಶಿಸಿದ್ದೇವೆ. ಎಲ್ಲ ರೀತಿಯ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನು ಈ ಘಟನೆಯ ವಿಡಿಯೋವನ್ನು ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ, ಆಮ್ ಆದ್ಮಿ ಪಕ್ಷದ ವಕ್ತಾರೆ ಸ್ವಾತಿ ಮಲಿವಾಲ್ ಕೂಡ ಹಂಚಿಕೊಂಡಿದ್ದು, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಟ್ಯಾಗ್ ಮಾಡಿ, ”ದಯವಿಟ್ಟು ವಿಷಯದ ಬಗ್ಗೆ ಗಮನಹರಿಸಿ ಮತ್ತು ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...