ಮತಪತ್ರದಲ್ಲಿ ನೀವು ಟಿಕ್ ಹಾಕಿದ್ದೇಕೆ? ಚಂಡೀಗಢ ಮೇಯರ್ ಚುನಾವಣಾಧಿಕಾರಿಯ ಬೆವರಿಳಿಸಿದ ಸುಪ್ರೀಂ; ವಿಡಿಯೋ ವೈರಲ್

Date:

ದೇಶಾದ್ಯಂತ ವ್ಯಾಪಕ ಚರ್ಚೆಗೀಡಾಗಿರುವ ಚಂಡೀಗಢ ಮೇಯರ್ ಚುನಾವಣೆಯಲ್ಲಿನ ಅಕ್ರಮದ ವಿಚಾರಣೆಯ ವೇಳೆ ಮತಪತ್ರಗಳನ್ನು ತಿರುಚಿರುವುದರ ಬಗ್ಗೆ ಚುನಾವಣಾಧಿಕಾರಿ ಅನಿಲ್ ಮಾಸಿಹ್, ಸುಪ್ರೀಂ ಕೋರ್ಟಿನಲ್ಲಿ ತಪ್ಪೊಪ್ಪಿಕೊಂಡಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್‌ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಮತಪತ್ರವನ್ನು ವಿರೂಪಗೊಳಿಸಿದ ಚುನಾವಣಾಧಿಕಾರಿ (ರಿಟರ್ನಿಂಗ್‌ ಆಫೀಸರ್‌) ಅನಿಲ್ ಮಾಸಿಹ್ ಅವರನ್ನು ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.

ಸುಪ್ರೀಂ ಕೋರ್ಟ್‌ ಮತ ಎಣಿಸಬೇಕಿದ್ದ ಅಧಿಕಾರಿ ಮತಪತ್ರಗಳಲ್ಲಿ ಟಿಕ್‌ ಮತ್ತು ಇಂಟೂ ಮಾರ್ಕ್‌ಗಳನ್ನು ಹಾಕಿದ್ದು ಏಕೆ ಎಂದು ಪ್ರಶ್ನಿಸಿತ್ತು. ಸೋಮವಾರದ ವಿಚಾರಣೆಯ ಬಳಿಕ, ಹೊಸದಾಗಿ ಚುನಾವಣೆಯ ನಡೆಸುವ ಬದಲು, ಮರು ಮತ ಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಆದೇಶದ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ನಲ್ಲಿಂದು ನಡೆದ ವಿಚಾರಣೆಯು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಲಾಗಿತ್ತು. ಚುನಾವಣಾಧಿಕಾರಿ ಅನಿಲ್ ಮಾಸಿಹ್ ಅವರನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನೇರವಾಗಿ ಪ್ರಶ್ನಿಸಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಅನಿಲ್ ಮಾಸಿಹ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, “ಮತ ಎಣಿಸಬೇಕಿದ್ದ ನೀವು ಮತಪತ್ರಗಳಲ್ಲಿ ಟಿಕ್‌ ಮತ್ತು ಇಂಟೂ ಮಾರ್ಕ್‌ಗಳನ್ನು ಹಾಕಿದ್ದು ಏಕೆ? ಎಂದು ನೇರವಾಗಿ ಪ್ರಶ್ನಿಸಿದರು.

“ಒಂದು ವೇಳೆ ನೀವು(ಅನಿಲ್ ಮಾಸಿಹ್) ನ್ಯಾಯಾಲಯಕ್ಕೆ ಸುಳ್ಳು ಹೇಳಲು ಯತ್ನಿಸಿದರೆ ಕ್ರಮ ಕೈಗೊಳ್ಳುತ್ತೇವೆ. ಮತ ಎಣಿಕೆ ವೇಳೆ ನೀವು ನಡೆದುಕೊಂಡ ರೀತಿಯ ಸಿಸಿಟಿವಿ ಕ್ಯಾಮೆರಾದ ದೃಶ್ಯವನ್ನು ನಾವು ಕಳೆದ ವಿಚಾರಣೆಯಲ್ಲಿ ನೋಡಿದ್ದೇವೆ. ಹಾಗಾಗಿ, ಸತ್ಯ ಹೇಳಬೇಕು. ಇದು ಬಹಳ ಗಂಭೀರ ವಿಷಯ. ಸುಳ್ಳು ಹೇಳಿದರೆ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ನೀವು ಕ್ಯಾಮೆರಾವನ್ನು ನೋಡುತ್ತಾ ಮತಪತ್ರಗಳಲ್ಲಿ ಏಕೆ ಗುರುತು ಹಾಕುತ್ತಿದ್ದದ್ದು ಯಾಕೆ?” ಎಂದು ಸಿಜೆಐ ಚಂದ್ರಚೂಡ್ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಲು ಯತ್ನಿಸಿದ ಅನಿಲ್ ಮಾಸಿಹ್, “ವಿರೂಪಗೊಂಡ ಮತಪತ್ರಗಳನ್ನು ಗುರುತು ಮಾಡುತ್ತಿದ್ದೆ. ಈ ವೇಳೆ ಕೆಲವು ಕೌನ್ಸಿಲರ್‌ಗಳು ಕ್ಯಾಮರಾ, ಕ್ಯಾಮರಾ ಎಂದು ಗಲಾಟೆ ಮಾಡುತ್ತಿದ್ದರು. ಹಾಗಾಗಿ, ಸಿಸಿಟಿವಿ ಕ್ಯಾಮೆರಾವನ್ನು ನಾನು ನೋಡಿದೆ” ಎಂದು ಸಮಜಾಯಿಷಿ ನೀಡಲು ಯತ್ನಿಸಿದರು.

ಇದರಿಂದ ಕುಪಿತಗೊಂಡ ಸಿಜೆಐ ಚಂದ್ರಚೂಡ್, “ನೀವು ಮತಪತ್ರಗಳಿಗೆ ಸಹಿ ಹಾಕಬಹುದು. ಆ ಮತಪತ್ರಗಳಲ್ಲಿ X ಗುರುತನ್ನು ಹಾಕುತ್ತಿದ್ದದ್ದು ಏಕೆ? ಆ ಮತಪತ್ರಗಳಲ್ಲಿ ನೀವು ಟಿಕ್ ಅಥವಾ X ಅನ್ನು ಹಾಕಬಹುದು ಎಂದು ಯಾವ ನಿಯಮ ಹೇಳುತ್ತದೆ? ನಿಮ್ಮನ್ನು(ಮಾಸಿಹ್) ವಿಚಾರಣೆಗೆ ಒಳಪಡಿಸಬೇಕು. ಚುನಾವಣಾ ಪ್ರಜಾಪ್ರಭುತ್ವದಲ್ಲಿ ಇದನ್ನು ಅನುಮತಿಸಲಾಗುವುದಿಲ್ಲ” ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಬಳಿಕ ಎಷ್ಟು ಬ್ಯಾಲೆಟ್ ಪೇಪರ್‌ಗಳ ಮೇಲೆ ಮಾರ್ಕ್‌ ಮಾಡಿದ್ದೀರಿ ಎಂದು ಕೇಳಿದ ಸಿಜೆಐ, “ಕೆಲವೊಂದು ಅಸಿಂಧು ಮತಗಳಿತ್ತು. ಹಾಗಾಗಿ, ಬೇರ್ಪಡಿಸಲೆಂದಷ್ಟೇ ಎಂಟು ಬ್ಯಾಲೆಟ್ ಪೇಪರ್‌ಗಳ ಮೇಲೆ ಮಾರ್ಕ್‌ ಮಾಡಿದ್ದೇನೆ” ಎಂದು ತಿಳಿಸಿದರು. ಚುನಾವಣಾಧಿಕಾರಿ ವಿವರಣೆಯಿಂದ ಸಿಜೆಐ ತೃಪ್ತರಾಗಲಿಲ್ಲ.

ಈ ವೇಳೆ ಮಧ್ಯ ಪ್ರವೇಶಿಸಿದ ಚಂಡೀಗಢ ಆಡಳಿತದ ಪರವಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸಾಧ್ಯವಾದರೆ ಹಿಂದಿಯಲ್ಲಿ ಮಾತನಾಡಿ ಎಂದು ಸೂಚಿಸಿದರು. ಬಳಿಕ ಮತದಾನ ಪ್ರಕ್ರಿಯೆ ವೇಳೆ ನಡೆದ ಘಟನೆಯನ್ನು ಚುನಾವಣಾಧಿಕಾರಿ ಅನಿಲ್ ಮಾಸಿಹ್ ವಿವರಿಸಿದರು.

“ನಿಮ್ಮ ಕೆಲಸವೇನು? ಕೇವಲ ಸಹಿ ಹಾಕಿ, ಲೆಕ್ಕ ಹಾಕುವುದು ಮಾತ್ರವಲ್ಲವೇ? ನಾವು ಎಲ್ಲ ವಿಡಿಯೋವನ್ನು ಕೂಲಂಕುಷವಾಗಿ ನೋಡಿದ್ದೇವೆ. ಅವರು ಮಾರ್ಕ್‌ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಸರ್ಕಾರದ ಪರ ವಾದಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಲ್ಲಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳುತ್ತಿರುವ ಸುಮಾರು 4 ನಿಮಿಷದ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ ಚುನಾವಣಾ ಫಲಿತಾಂಶಕ್ಕೆ ತಕ್ಷಣ ತಡೆ ನೀಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ ಪಾಲಿಕೆ ಸದಸ್ಯ ಕುಲದೀಪ್ ಕುಮಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

cji
ಫೋಟೋ ಕೃಪೆ: ಬಾರ್ & ಬೆಂಚ್

ಅರ್ಜಿಯನ್ನು ಸಿಜೆಐ ಡಿವೈ ಚಂದ್ರಚೂಡ್ ಅವರಲ್ಲದೆ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್‌ ಮಿಶ್ರಾ ಅವರನ್ನೊಳಗೊಂಡ ಪೀಠ ಕೂಡ ವಿಚಾರಣೆ ನಡೆಸುತ್ತಿದೆ.

ಮರು ಮತ ಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ಚುನಾವಣಾಧಿಕಾರಿ ಅನಿಲ್ ಮಾಸಿಹ್ ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ, ಹೊಸದಾಗಿ ಚುನಾವಣೆಯ ನಡೆಸುವ ಬದಲು, ಮರು ಮತಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಇದನ್ನು ಓದಿದ್ದೀರಾ? ಚಂಡೀಗಢ ಮೇಯರ್ ಚುನಾವಣೆ: ಮರು ಮತ ಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ಚಂಡೀಗಢ ಮೇಯರ್ ಚುನಾವಣೆಯ ಫಲಿತಾಂಶದ ಬಗ್ಗೆ ಹೊಸದಾಗಿ ಚುನಾವಣೆಗೆ ಆದೇಶಿಸುವ ಬದಲು ಪ್ರಸ್ತುತ ಬ್ಯಾಲೆಟ್ ಪೇಪರ್‌ಗಳ ಆಧಾರದ ಮೇಲೆ ಘೋಷಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದ್ದು, ಮತ ಪತ್ರಗಳನ್ನು ನಾಳೆ ಬೆಳಗ್ಗೆ 10.30ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...