ಚಿಕ್ಕಬಳ್ಳಾಪುರ | ಸೈಬರ್ ವಂಚನೆ; ಅಧಿಕ ಲಾಭದ ನೆಪದಲ್ಲಿ ₹1.85 ಲಕ್ಷ ಕಳೆದುಕೊಂಡ ಯುವತಿ

Date:

ಸೈಬರ್ ವಂಚಕರು ಅಧಿಕ ಲಾಭದ ನೆಪದಲ್ಲಿ ವಂಚಿಸಿ ₹1.85 ಲಕ್ಷ ಲಪಟಾಯಿಸಿದ್ದಾರೆಂದು ಆರೋಪಿಸಿ ಯುವತಿಯೋರ್ವರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಸಿಇಎನ್ ಪೊಲೀಸ್ ಠಾಣೆಗೆ ಶನಿವಾರ ದೂರು ನೀಡಿದ್ದಾರೆ.

ಚಿಂತಾಮಣಿ ನಗರದ ಅಬ್ಬುಗುಂಡು ಹಿಂಭಾಗ ರಸ್ತೆಯ ನಿವಾಸಿ ಸಿವಿಲ್ ಎಂಜಿನಿಯರ್ ಕೆ ಎನ್ ಐಶ್ವರ್ಯ ಹಣ ಕಳೆದುಕೊಂಡು ದೂರು ನೀಡಿರುವ ಸಂತ್ರಸ್ತೆ.

ಸಂತ್ರಸ್ತೆ ಐಶ್ವರ್ಯ ಬೆಂಗಳೂರಿನ ಯಲಹಂಕದಲ್ಲಿ ಕಂಪನಿಯೊಂದರಲ್ಲಿ ಸಿವಿಲ್ ಎಂಜಿನಿಯರ್ ಆಗಿದ್ದಾರೆ. ಬೆಂಗಳೂರಿನ ಮಾರುತಹಳ್ಳಿಯ ಎಸ್‌ಬಿಐ ಶಾಖೆ, ನಗರದ ಕರ್ನಾಟಕ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದಾರೆ. ಪೋನ್ ಪೇ, ಗೂಗಲ್ ಪೇ ವ್ಯಾಲೆಟ್ ಬಳಸಿಕೊಂಡು ದೈನಂದಿನ ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಜನವರಿ 17ರಂದು ಅವರಿಗೆ ಮೇಘಾ ಎಂಬುವವರಿಂದ ಮೆಸೇಜ್ ಬಂದಿದೆ. ಯುಟ್ಯೂಬ್ ರಿವ್ಯೂ ಮಾಡಿದರೆ ಒಂದಕ್ಕೆ ₹50 ಕೊಡುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆ ಎನ್ ಐಶ್ವರ್ಯ ಅವರನ್ನು ಟೆಲಿಗ್ರಾಂ ಗ್ರೂಪ್‌ಗೆ ಸೇರಿಸಿಕೊಂಡಿದ್ದಾರೆ. ಮೊದಲು ₹2,000 ಹೂಡಿಕೆ ಮಾಡುವಂತೆ ತಿಳಿಸಿದಾಗ ನಿರಾಕರಿಸಿದ್ದಾರೆ. ನಂತರ ಟೆಲಿಗ್ರಾಂ ಹೂಡಿಕೆದಾರರ ಪರಿಚಯ ಮಾಡಿಸಿ ಅದರಲ್ಲಿ ಹೂಡಿಕೆ ಮಾಡುತ್ತಿರುವವರಿಗೆ ಬರುತ್ತಿರುವ ಲಾಭದ ಅಮಿಷ ಒಡ್ಡಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಬಿಲ್ಕಿಸ್‌ ಬಾನೊ ಪ್ರಕರಣ: ಗೋಧ್ರಾ ಜೈಲಿನ ಅಧಿಕಾರಿಗಳಿಗೆ ಶರಣಾದ ಎಲ್ಲ 11 ಅಪರಾಧಿಗಳು

ಮೊದಲಿಗೆ ₹5,000 ಅವರು ಸೂಚಿಸಿದ ಖಾತೆಗೆ ವರ್ಗಾವಣೆ ಮಾಡುವ ಮೂಲಕ ಹೂಡಿಕೆ ಮಾಡಿದ್ದಾರೆ. ಅದಕ್ಕೆ ಲಾಭವಾಗಿ ಅವರ ಖಾತೆಗೆ ₹6 ಸಾವಿರ ಜಮಾ ಆಗಿದೆ. ಹೆಚ್ಚಿನ ಲಾಭದ ಆಸೆ ತೋರಿಸಿ ಹಂತಹಂತವಾಗಿ ಒಟ್ಟು ₹1,85,800 ಹೂಡಿಕೆ ಮಾಡಿಸಿಕೊಂಡಿದ್ದಾರೆ.

ಹೂಡಿಕೆ ಮಾಡಿದ ಹಣವನ್ನು ಹಣವನ್ನು ವಾಪಸ್ ಪಡೆಯಲು ಅವಕಾಶ ನೀಡಿಲ್ಲ. ವಾಪಸ್ ನೀಡುವಂತೆ ಅನೇಕ ಬಾರಿ ಕೇಳಿದರೂ ನೀಡದೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...