ಚಿಕ್ಕಮಗಳೂರು l ಕಾಡಾನೆ ಕೊಂದು ದಂತ ಕಳ್ಳತನ, ಇಬ್ಬರೂ ಅರಣ್ಯ ಸಿಬ್ಬಂದಿಗಳು ಅಮಾನತು 

Date:

ಚಿಕ್ಕಮಗಳೂರು ಭದ್ರಾ ಅಭಯಾರಣ್ಯ ಹುಲಿ ಮೀಸಲು ವ್ಯಾಪ್ತಿಯ ಲಕ್ಕವಳ್ಳಿ ವಲಯದ ಹಿನ್ನೀರು ಪ್ರದೇಶವಾಗಿರುವ, ಭೈರಾಪುರ ಅರಣ್ಯ ವಲಯದಲ್ಲಿ ಆನೆಯನ್ನು ಕೊಂದು ದಂತ ಅಪಹರಣ ಮಾಡಿರುವ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿಯೇ ಭಾಗಿಯಾಗಿರುವ ಆರೋಪದ ಮೇರೆಗೆ, ಫಾರೆಸ್ಟ್ ಗಾರ್ಡ್ ದೇವರಾಜ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ಕುಮಾರ್ ನಾಯಕ್ ಅವರನ್ನು ಅಮಾನತು ಮಾಡಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಅವರು ಆದೇಶಿಸಿದ್ದಾರೆ.

ಪ್ರಕರಣದ ತನಿಖೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಭಾಗಿಯಾಗಿರುವುದು ಖಚಿತವಾದ ಹಿನ್ನೆಲೆಯಲ್ಲಿ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ ಜೂನ್ 2024ರಲ್ಲಿ ಆನೆ ಕಳೇಬರ ಅಲ್ಲಿನ ಬೀಟ್ ಸಿಬ್ಬಂದಿಗೆ ಸಿಕ್ಕಿದೆ. ಆಗ ಅದರಲ್ಲಿ ದಂತ ಇರುವುದು ಕಂಡುಬಂದಿದೆ. ಇದನ್ನು ಮೇಲಾಧಿಕಾರಿಗಳಿಗೆ ತಿಳಿಸದೇ ದಂತ ಕಳವು ಮಾಡಿರುವ ಸಾಧ್ಯತೆ ಇರುವುದು ಮೇಲ್ನೋಟಕ್ಕೆ ಖಚಿತವಾಗಿದೆ. ಆನೆ ಕಳೇಬರದ ಮರಣೋತ್ತರ ಪರೀಕ್ಷೆಯನ್ನು ಕಾಟಾಚಾರಕ್ಕೆ ಮಾಡಿಸಿ ಹೆಣ್ಣು ಆನೆ ಎಂದು ಮುಚ್ಚಿ ಹಾಕುವ ವ್ಯವಸ್ಥಿತ ಹುನ್ನಾರ ಮಾಡಿದ ಆರೋಪವೂ ಕೇಳಿ ಬಂದಿದೆ.

ಇದರಲ್ಲಿ ಸರಕಾರೇತರ ಸಂಸ್ಥೆಯ ಸದಸ್ಯರೊಬ್ಬರು ಭಾಗಿ ಆಗಿ ಸಿಬ್ಬಂದಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎನ್ನಲಾಗಿದ್ದು, ಸರಕಾರಿ ಪಶು ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸದೇ ಇಲಾಖೆಯ ಗುತ್ತಿಗೆ ವೈದ್ಯರೇ ಮರಣೋತ್ತರ ಪರೀಕ್ಷೆ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ನಕ್ಸಲರು ಭೂಗತರಾಗದೇ, ಸಮಾಜದ ಮುಖ್ಯವಾಹಿನಿಗೆ ಬರಬೇಕು; ಎಸ್ಪ್ ವಿಕ್ರಮ್ ಅಮಟೆ ಮನವಿ

ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಳಪಡಿಸಬೇಕು ಎಂದು ದೂರುದಾರ ಸಾಮಾಜಿಕ ಪರಿಸರ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಒತ್ತಾಯ ಮಾಡಿ ಅಧಿಕಾರಿಗಳು ತನಿಖೆ ಮಾಡಿ ಎಷ್ಟೇ ಪ್ರಭಾವಿಗಳು ಇದರಲ್ಲಿ ಇದ್ದರೂ ರಕ್ಷಿಸದೆ ತನಿಖೆ ಮಾಡಬೇಕು ಎಂದು ಮುಖ್ಯಮಂತ್ರಿ ಮತ್ತು ಅರಣ್ಯ ಸಚಿವರಿಗೆ ಮನವಿಯನ್ನು ಸಲ್ಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...