ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಳೆಯ ಆರ್ಭಟ: ಉಕ್ಕಿ ಹರಿಯುತ್ತಿರುವ ತುಂಗಾ ನದಿ

Date:

ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿದ ಪರಿಣಾಮ ಕೆಲವು ಭಾಗಗಳಲ್ಲಿ ನೆರೆ ಬಂದಿದೆ. ಹಾಗೆಯೇ, ಮಳೆಯಿಂದ ಶೃಂಗೇರಿ ತಾಲೂಕಿನ ಗಾಂಧಿ ಮೈದಾನ, ನೆಮ್ಮಾರ್, ಕೆರೆಕಟ್ಟೆ, ಕುರಬಕೇರಿ, ಭಾರತೀತೀರ್ಥ ರಸ್ತೆ, ವಿದ್ಯಾರಣ್ಯಪುರ ರಸ್ತೆ, ಕಿಕ್ರೆ ಹಳ್ಳ ಸೇತುವೆ ಮೇಲೆ, ಕೆರೆಕಟ್ಟೆಯ ಗುಲುಗುಂಜಿ ಮನೆ ರಸ್ತೆ ನೀರಿನಿಂದ ತುಂಬಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ.

Screenshot 2025 08 18 10 13 43 23 40deb401b9ffe8e1df2f1cc5ba480b12

ತಾಲ್ಲೂಕಿನ 49 ಗ್ರಾಮಗಳಲ್ಲಿ ಶಿರ್ಲು, ಹಾದಿ, ಕೆರೆ, ಸುಂಕದಮಕ್ಕಿ, ನಿಲಂದೂರು, ಕುಂಬ್ರಗೋಡು, ಕೂಗೋಡು ಮೊದಲಾದ ಗ್ರಾಮಗಳು ಪಟ್ಟಣದಿಂದ 25 ರಿಂದ 30 ಕಿಲೋಮೀಟರ್ ದೂರವಿದ್ದು, ಇಲ್ಲಿನ ರಸ್ತೆಗಳು ಹದಗೆಟ್ಟಿರುವುದರಿಂದ ಅನಾರೋಗ್ಯ, ಅಪಘಾತ ಸಂಭವಿಸಿದರೆ ಆಸ್ಪತ್ರೆಗೆ ಬರಲು ಅಲ್ಲಿನ ಜನ ಹರಸಾಹಸ ಪಡಬೇಕಿದೆ.

Screenshot 2025 08 18 10 28 27 82 7352322957d4404136654ef4adb64504
ಶೃಂಗೇರಿಯಲ್ಲಿ ರಸ್ತೆಗೆ ಉಕ್ಕಿ ಹರಿಯುತ್ತಿರುವ ತುಂಗಾ ನದಿ

ಶೃಂಗೇರಿಯಲ್ಲಿ 132 ಮಿ.ಮೀ, ಕಿಗ್ಗಾದಲ್ಲಿ 152.8 ಮಿ.ಮೀ, ಕೆರೆಕಟ್ಟೆ 154 ಮಿ.ಮೀ ಮಳೆಯಾಗಿದೆ. 2 3,475 ಒಟ್ಟು 3,475 ಮಿ.ಮೀ ಮಳೆಯಾಗಿದೆ. ಈ ಭೀಕರ ಮಳೆಯಿಂದ ಶೃಂಗೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರ ನೆಮ್ಮಾರಲ್ಲಿ ರಸ್ತೆ ಜಲಾವೃತಗೊಂಡು ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಶೃಂಗೇರಿಯ ಭಾರತೀತೀರ್ಥ ರಸ್ತೆ ನೀರಿನಿಂದ ಆವೃತಗೊಂಡಿದೆ. ಕುರುಬಕೇರಿ ರಸ್ತೆ ನೀರಿನಿಂದ ಆವೃತಗೊಂಡು ರಸ್ತೆಯ 2 ಕಡೆ ನೀರಿನಿಂದ ತುಂಬಿದ್ದು ಮಧ್ಯೆ ದ್ವೀಪದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮಲೆನಾಡಿನಲ್ಲಿ ಕಾಡಾನೆ ಹಾವಳಿ: ಜನರಲ್ಲಿ ಭಯದ ವಾತಾವರಣ

ಅತಿಯಾದ ಮಳೆಯ ಕಾರಣ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಾಲಾ ಸೋಮವಾರ(ಆ.18) ರಜಾ ಘೋಷಿಸಲಾಗಿದೆ. ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಸಾರ್ವಜನಿಕರು ಹೆಚ್ಚರದಿಂದ ಇರಬೇಕಾಗುತ್ತದೆ. ಹಾಗೆಯೇ, ವಾಹನ ಸವಾರರು ಸುರಕ್ಷತೆಯಿಂದ ಪ್ರಯಾಣ ಮಾಡಬೇಕಿದೆ.

Screenshot 2025 08 18 10 30 35 09 7352322957d4404136654ef4adb64504
ಕುಂಚೆಬೈಲು ಜಾಗದಾಳು ಸೇತುವೆ ಮೇಲೆ ನೀರು

ಮಳೆಯಿಂದ ಕೆಲವು ಪ್ರದೇಶಗಳಲ್ಲಿ ಮರ ಧರೆಗೆ ಉರುಳುವುದು, ಮನೆ ಕುಸಿಯುವುದು, ರಸ್ತೆ ಕುಸಿತ ಹಾಗೂ ಅನೇಕ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಯಾರು ಆತಂಕ ಪಡಬಾರದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...