ಚಿಕ್ಕಮಗಳೂರು | ಪಂಚ ಗ್ಯಾರಂಟಿ ಯೋಜನೆ: ಶೇ. 98ರಷ್ಟು ಪ್ರಗತಿ; ಜಿಲ್ಲೆ ಪ್ರಥಮ; ಎಂ.ಸಿ ಶಿವಾನಂದ ಸ್ವಾಮಿ

Date:

2023ರ ಚುನಾವಣೆ ಮೊದಲು ಕಾಂಗ್ರೆಸ್ ಪಕ್ಷವು ರಾಜ್ಯದ ಜನರಿಗೆ ನೀಡಿದ ಭರವಸೆಗಳಾದ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಕೊಟ್ಟ ವಚನದಂತೆ ನಡೆದುಕೊಂಡಿದೆ. ಸರ್ಕಾರ ಮಾರ್ಗದರ್ಶನದಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಯಶಸ್ವಿಯಾಗಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರು ಎಂ.ಸಿ ಶಿವಾನಂದಸ್ವಾಮಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ಜೂನ್-2023 ರಿಂದ ಜನವರಿ-2024 ರವರೆಗೆ ಪಂಚ ಗ್ಯಾರಂಟಿಗಳಾದ ಶಕ್ತಿ, ಅನ್ನಭಾಗ್ಯ ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಜಿಲ್ಲೆಯ 10.00 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಒಂದಿಲ್ಲೊಂದು ಯೋಜನೆಗಳ ಮೂಲಕ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯು ಪ್ರತಿ ತಿಂಗಳು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸುವುದರ ಮೂಲಕ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಈ ಯೋಜನೆ ತಲುಪುವಂತೆ ನೋಡಿಕೊಳ್ಳುತ್ತಿದೆ. ಜಿಲ್ಲೆಯ 9 ತಾಲ್ಲೂಕುಗಳಲ್ಲಿ ಇರುವ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಗಳೊಂದಿಗೆ ಸೇರಿ ಫಲಾನುಭವಿಗಳೊಂದಿಗೆ ಸಂವಾದ, ಕಾರ್ಯಾಗಾರ, ಉದ್ಯೋಗ ಮೇಳ ಸೇರಿದಂತೆ ಹಲವು ಚಟುವಟಿಕೆಗಳನ್ನು ನಡೆಸುತ್ತಾ ಬಂದಿರುತ್ತದೆ. ಜಿಲ್ಲೆಯಲ್ಲಿ ಶೇಕಡಾ 98.00 ರಷ್ಟು ಪ್ರಗತಿ ಇರುವ ಕಾರಣ, ರಾಜ್ಯ ಗ್ಯಾರಂಟಿ ಸಮಿತಿಯು ಅನುಷ್ಠಾನ ವಿಚಾರದಲ್ಲಿ ಪ್ರಥಮ ಎಂದು ಹೇಳಿರುವುದು ನಮ್ಮ ಹೆಗ್ಗಳಿಕೆಯಾಗಿರುತ್ತದೆ.

ಶಕ್ತಿ ಯೋಜನೆ ಜೂನ್-2023ರಿಂದ ರಾಜ್ಯದ ರಸ್ತೆ ಸಾರಿಗೆ ಬಸ್ಸುಗಳಲ್ಲಿ ರಾಜ್ಯದ ಮಹಿಳೆಯರು ಉಚಿತವಾಗಿ ಪ್ರವಾಸ ಮಾಡುವ ಈ ಯೋಜನೆ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿದೆ. ಉದ್ಯೋಗಸ್ತರು, ಕಾರ್ಮಿಕರು, ಪ್ರವಾಸಿಗರು ಹಾಗೂ ಧಾರ್ಮಿಕ ಪ್ರವಾಸಿಗರು ಇದರ ಲಾಭವನ್ನು ಪಡೆದುಕೊಳ್ಳುತ್ತಿದ್ದು, ಸಾರಿಗೆ ಸಂಸ್ಥೆಯ ಚಿಕ್ಕಮಗಳೂರು ವಿಭಾಗದ ಚಿಕ್ಕಮಗಳೂರು, ಕಡೂರು ಹಾಗೂ ಮೂಡಿಗೆರೆ ಘಟಕಗಳ ಬಸ್ಸುಗಳಲ್ಲಿ ಯೋಜನೆ ಆರಂಭವಾದಗಿನಿಂದ ಈವರೆಗೆ 5.48. ಕೋಟಿ ಟ್ರಿಪ್‌ಗಳಲ್ಲಿ ಮಹಿಳೆಯರು ಪ್ರವಾಸ ಮಾಡಿದ್ದು, ಈ ಸಂಬಂಧ ರಾಜ್ಯ ಸರ್ಕಾರ 216.00 ಕೋಟಿ ರೂ.ಗಳನ್ನು ವ್ಯಯಿಸಿದೆ. ಅನ್ನಭಾಗ್ಯ: ಜುಲೈ-2023ರಿಂದ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿ ಒಬ್ಬರಿಗೆ ಉಚಿತವಾಗಿ 5 ಕೆಜಿ ಅಕ್ಕಿ ನೀಡಬೇಕಾಗಿದ್ದು ಅಕ್ಕಿ ಲಭ್ಯವಿಲ್ಲದ ಕಾರಣ ಜನವರಿ 2025ರವರೆಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಜಿಲ್ಲೆಯ 2,44,353 ಪಡಿತರ ಚೀಟಿಗಳ 8,05,042 ಫಲಾನುಭವಿಗಳಿಗೆ 226.00 ಕೋಟಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು, 2025ರ ಫೆಬ್ರವರಿಯಿಂದ ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದ್ದು, ಇದಕ್ಕಾಗಿ ರೂ. 99.00 ಕೋಟಿಗಳು ಒಟ್ಟಾರೆ ರೂ. 325.00 ಕೋಟಿಗಳನ್ನು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೃಹಜ್ಯೋತಿ ಆಗಸ್ಟ್-2023ರಿಂದ ಜಾರಿಗೊಂಡಿರುವ 200 ಯೂನಿಟ್ ವರೆಗಿನ ಈ ಉಚಿತ ಯೋಜನೆಯಿಂದ ಜಿಲ್ಲೆಯಲ್ಲಿ 3,06,735 ಆರ್ ಆರ್ ಸಂಖ್ಯೆಗಳ (ಕನಿಷ್ಠ 10.00 ಲಕ್ಷ ಫಲಾನುಭವಿಗಳು) ವಿದ್ಯುತ್ ಬಿಲ್ಲನ್ನು ಸರ್ಕಾರ ಭರಿಸುತ್ತಿದೆ. ಈವರೆಗೆ 304.00 ಕೋಟಿ ರೂ.ಗಳನ್ನು ವ್ಯಯಿಸಿದ. ಇದರಿಂದ ಕುಟುಂಬದ ಯಜಮಾನರ ಆರ್ಥಿಕ ಶಕ್ತಿ ಹೆಚ್ಚಾಗಿದ್ದು ವಿದ್ಯುತ್ ಚೂಕ್ತಗಾಗಿ ಭರಿಸುತ್ತಿದ್ದ ಹಣವನ್ನು ಉಳಿತಾಯವು ಸೇರಿದಂತೆ ಹಲವು ಕಾರ್ಯಗಳಿಗೆ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಗೃಹಲಕ್ಷ್ಮಿ ಆಗಸ್ಟ್-2023ರಿಂದ ಆರಂಭಗೊಂಡಿರುವ ಗೃಹಲಕ್ಷ್ಮಿ ಯೋಜನೆಯ ಮೂಲಕ ಜಿಲ್ಲೆಯ 2,62,862 ಯಜಮಾನಿಯರಿಗೆ ಮಾಸಿಕ ರೂ.2000.00 ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಈವರೆಗೆ 24 ಕಂತುಗಳ ಮೂಲಕ 1,261.00 ಕೋಟಿ ರೂ.ಗಳನ್ನು ನೀಡಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಆರ್ಥಿಕ ಸಂಚಲನ ಉಂಟಾಗಿದ್ದು, ಮಹಿಳೆಯರು ಸ್ವಉದ್ಯೋಗದತ್ತ ಮುಖ ಮಾಡಿದ್ದಾರೆ. ಅಂದರೆ ಹಲವರು ಕುರಿ, ಮೇಕೆ, ಹಸುಗಳನ್ನು ಕೊಂಡು ಹೈನುಗಾರಿಕೆ ಉದ್ಯೋಗ ಆರಂಭಿಸಿದ್ದಾರೆ. ಟೈಲರಿಂಗ್, ಜಿಗ್‌ಜಾಗ್ ಮಿಷಿನ್ ಯಂತ್ರಗಳ ಖರೀದಿಗಳ ಮೂಲಕ ಟೈಲರಿಂಗ್ ಉದ್ಯೋಗವನ್ನು ಆರಂಭಿಸಿದ್ದು, ಇನ್ನೂ ಹಲವರು ಹೂ-ಹಣ್ಣು ವ್ಯಾಪಾರ, ಪಾನಿಪುರಿ ಅಂಗಡಿ, ಸಣ್ಣ ಕ್ಯಾಂಟಿನ್‌ಗಳನ್ನು ತೆರೆದಿದ್ದರೆ, ಕೃಷಿ ಮಹಿಳೆಯರು ಬೋರ್‌ವೆಲ್ ಕೊರೆಸಲು ಈ ಹಣ ಉಪಯೋಗಿಸಿಕೊಳ್ಳುತ್ತಿದ್ದಾರೆ.

ಯುವನಿಧಿ ಜನವರಿ-2024 ರಿಂದ ಆರಂಭಗೊಂಡಿರುವ ಪದವೀಧರ ಹಾಗೂ ಡಿಪ್ಲೊಮೊ ನಿರುದ್ಯೋಗಿಗಳಿಗೆ ಯುವನಿಧಿ ಯೋಜನೆ ಮೂಲಕ ರೂ.3000.00 ಹಾಗೂ ರೂ.1,500.00 ನೀಡಲಾಗುತ್ತಿದ್ದು, ಈವರೆಗೆ ಜಿಲ್ಲೆಯ 5161 ಪದವಿಧರರು 59 ಡಿಪ್ಲೊಮೋ ಪದವೀಧರರಿಗಾಗಿ 13.00 ಕೋಟಿ ರೂ.ಗಳನ್ನು ಸರ್ಕಾರ ಭರಿಸಿದೆ. ವಿದ್ಯಾವಂತ ನಿರುದ್ಯೋಗಿಗಳು ಉದ್ಯೋಗ ಉಡುಕುವ ಮತ್ತು ಸ್ವರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸುವುದು ಸೇರಿದಂತೆ ಆನ್‌ಲೈನ್ ಕೋಚಿಂಗ್ ಮೂಲಕ ಉನ್ನತ ವ್ಯಾಸಾಂಗಕ್ಕೆ ಸದ್ಬಳಕೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟಾರೆ ರೂ.2,110.00 ಕೋಟಿಗಳನ್ನು ಕೊಡಲಾಗುತ್ತಿದೆ. ಈ ವೇಳೆ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಮಂಜುನಾಥ್ ಮಲ್ಲೇಶ ಸ್ವಾಮಿ ಬಸವರಾಜು ಅನ್ಸರ್ ಅಲಿ ನಾಗರಾಜ್ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...