ಬಿಸಿಸಿಐ, ದುಬೈ ಕಾನ್ಸುಲೇಟ್ ಜಂಟಿಯಾಗಿ ಸಮುದಾಯ ಜಾಗೃತಿ ಕಾರ್ಯಕ್ರಮ; ಸತೀಶ್ ಶಿವನ್ ಸಲಹೆ

Date:

ದುಬೈನಲ್ಲಿ ಇತ್ತೀಚೆಗೆ ನಡೆದ ಬ್ಯಾರಿ ಮೇಳ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಕಾನ್ಸುಲ್ ಜನರಲ್ ಆಫ್ ಇಂಡಿಯಾ ಸತೀಶ್ ಶಿವನ್ ಅವರ ವಿಶೇಷ ಆಹ್ವಾನದ ಮೇರೆಗೆ ದುಬೈನ ಕಾನ್ಸುಲೇಟ್ ಕಚೇರಿಗೆ ಭೇಟಿ ನೀಡಿದ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ಯುಎಇ ಕಾರ್ಯಕಾರಿ ಸಮಿತಿ ಸದಸ್ಯರು ಸಮುದಾಯದ ಹಾಗೂ ಅನಿವಾಸಿಗಳ ಹಲವಾರು ವಿಷಯಗಳ ಕುರಿತು ಮುಕ್ತವಾಗಿ ಚರ್ಚಿಸಿದರು.

ಇತ್ತೀಚೆಗೆ ಪದೇ ಪದೇ ಕರ್ನಾಟಕದವರು ಎದುರಿಸುತ್ತಿರುವ ವೀಸಾ ಸಮಸ್ಯೆ ಬಗ್ಗೆ ಬಿಸಿಸಿಐ ಅಧ್ಯಕ್ಷ ಹಿದಾಯತ್ ಅಡ್ಡೂರು ಗಮನಸೆಳೆದಾಗ ಉತ್ತರಿಸಿದ ಕಾನ್ಸುಲ್ ಜನರಲ್, “ಕಳೆದ ವರ್ಷ ಘೋಷಿಸಿದ್ದ ಅಮ್ನೆಸ್ಟಿ ಹಾಗೂ ಅದರ ನಂತರ ಯುಎಇ ಸರ್ಕಾರದ ಕೆಲವು ಕಠಿಣ ವಿಸಾ ನಿಲುವಿನಿಂದಾಗಿ ಈ ಬದಲಾವಣೆ ಕಂಡುಬರುತ್ತಿದೆ. ಇದು ಕೇವಲ ಒಂದು ರಾಜ್ಯ, ಸಮುದಾಯ, ಪ್ರದೇಶಕ್ಕೆ ಸೀಮಿತವಾದ ವಿಚಾರವಲ್ಲ, ದೇಶದ ಎಲ್ಲಾ ರಾಜ್ಯದಲ್ಲೂ ಇದೇ ರೀತಿಯ ಬೆಳವಣಿಗೆ ಕಂಡುಬರುತ್ತಿದ್ದು, ಮುಂದಿನ ದಿನಗಳಲ್ಲಿ ಸಾಮಾನ್ಯ ಸ್ಥಿತಿಗೆ ಬರಲಿದೆ” ಎಂದು ಆಶಾವಾದ ವ್ಯಕ್ತಪಡಿಸಿದರು.

“ಏಜೆಂಟ್‌ಗಳ ಮೋಸಕ್ಕೆ ಬಲಿಯಾಗಬಾರದು. ಕೆಲಸದ ಆಮಿಷ ಒಡ್ಡಿ ವಿಸಿಟ್ ವೀಸಾದಲ್ಲಿ ಕಾರ್ಮಿಕರನ್ನು ಕರೆತಂದು ಅತಂತ್ರ ಸ್ಥಿತಿಯಲ್ಲಿ ಸಮಸ್ಯೆಗೆ ಸಿಲುಕಿಸುವವರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಬಿಸಿಸಿಐ ಹಾಗೂ ದುಬೈ ಕಾನ್ಸುಲೇಟ್ ಜಂಟಿಯಾಗಿ ಮಾಡಬೇಕು. ಕೆಲಸ ಅರಸಿ ವಿಸಿಟ್ ವೀಸಾದಲ್ಲಿ ಬಂದವರು ವೀಸಾ ಅವಧಿ ಮುಗಿದ ಮೇಲೂ ಹಿಂತಿರುಗಿದೇ ಇದ್ದರೆ ಅವರಿಂದ ನಮ್ಮ ದೇಶಕ್ಕೆ ಕೆಟ್ಟ ಹೆಸರು. ಕೆಲಸಕ್ಕಾಗಿ ಬರುವವರು ಕೆಲಸದ ವರ್ಕ್ ಪರ್ಮಿಟ್ ವೀಸಾ ರೆಸಿಡೆನ್ಸ್ ವೀಸಾದಲ್ಲೇ ಬರಲಿ ಎಂಬುದೇ ನನ್ನ ನಿಲುವು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾರಿ ಮೇಳದಲ್ಲಿ ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ್ದ ಬ್ಯಾರಿ ಸಮುದಾಯದ ಜನರ ಒಗ್ಗಟ್ಟು, ಶಿಸ್ತು ಕಂಡು ಹಾಗೂ ಬ್ಯಾರಿಗಳ ಸಾಧನೆಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದ ಕಾನ್ಸುಲ್ ಜನರಲ್ ಸತೀಶ್, “ದುಬೈ ಕಾನ್ಸುಲೇಟ್ ನಲ್ಲಿ ಮುಂದೆ ನಡೆಯುವ ಎಲ್ಲಾ ಬ್ಯುಸಿನೆಸ್ ಸಮ್ಮಿಟ್ ಗೆ ಬಿಸಿಸಿಐಗೆ ಆಹ್ವಾನ ನೀಡುವುದಾಗಿ ತಿಳಿಸಿದರು. ಅಲ್ಲದೇ ಬಿಸಿಸಿಐ ನಡೆಸುವ ಎಲ್ಲಾ ವೃತ್ತಿಪರ, ಸಮುದಾಯದ ಪರ, ಬ್ಯಾರಿ ಕಾರ್ಯಕ್ರಮಗಳಲ್ಲಿ ತಾನು ಸಕ್ರಿಯವಾಗಿ ಭಾಗವಹಿಸುವೆನು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ?: ಹೊಸ ನಿಯಮ | ಭಾರತೀಯರ ಪ್ರವಾಸಿ ವೀಸಾ ರದ್ದುಪಡಿಸುತ್ತಿರುವ ದುಬೈ

ಈ ಸಂದರ್ಭದಲ್ಲಿ ಬಿಸಿಸಿಐ ಉಪಾಧ್ಯಕ್ಷ ಬಶೀರ್ ಕಿನ್ನಿಂಗಾರ್, ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೇನ್, ಮುಸ್ತಾಕ್ ಕದ್ರಿ, ಇಮ್ರಾನ್ ಖಾನ್ ಎರ್ಮಾಳ್ ಹಾಗೂ ಏಮ್ ಇಂಡಿಯಾ ಫೋರಂ ಸ್ಥಾಪಕ ಶೇಕ್ ಮುಝಫರ್, ನಿಯಾಝ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...