ದಕ್ಷಿಣ ಕನ್ನಡ | ಕಾವೂರು ಕೆರೆ ಪುನರುಜ್ಜೀವನ ಕಾಮಗಾರಿ ಪೂರ್ಣ; ಶೀಘ್ರದಲ್ಲೇ ಉದ್ಘಾಟನೆ

Date:

  • ಕೆರೆಯ ಬಳಿ ಮನರಂಜನಾ ಪ್ರದೇಶ ನಿರ್ಮಾಣ
  • 300 ಜಾತಿಯ ಪಕ್ಷಿಗಳು ಕೆರೆಗೆ ಭೇಟಿ

ಮಂಗಳೂರಿನ ಕಾವೂರು ಕೆರೆ ಪುನರುಜ್ಜೀವನದ ಬಹುತೇಕ ಕಾಮಗಾರಿಗಳನ್ನು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ (ಎಂಎಸ್‌ಸಿಎಲ್) ಪೂರ್ಣಗೊಳಿಸಿದೆ. ಮುಂದಿನ ವಾರ ಲೋಕಾರ್ಪಣೆ ಮಾಡುವ ನಿರೀಕ್ಷೆಯಿದೆ. 8.3 ಎಕರೆ ವಿಸ್ತೀರ್ಣವಿರುವ ಕೆರೆಯು ಅಂತರ್ಜಲ ಹೆಚ್ಚಳಕ್ಕೆ ಸಹಕಾರಿಯಾಗಲಿದೆ.

ಗುಜ್ಜರಕೆರೆಯ ನಂತರ ಎಂಎಸ್‌ಸಿಎಲ್‌ನ ಎರಡನೇ ಕೆರೆ ಅಭಿವೃದ್ಧಿ ಯೋಜನೆ ಇದಾಗಿದೆ. 2020ರಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡ ಕೆರೆಯ ಪುನರುಜ್ಜೀವನ ಕಾರ್ಯಗಳು ಪ್ರಾರಂಭವಾಗಿದ್ದವು. ಆದರೆ, ಕೊರೊನಾ ಕಾರಣದಿಂದಾಗಿ ಕಾಮಗಾರಿ ಸ್ಥಗಿತಗೊಂಡಿತ್ತು. ಅಲ್ಲದೆ, ಅತಿಕ್ರಮಣಗಳು ಸೇರಿದಂತೆ ಹಲವು ಸಮಸ್ಯೆಗಳು ಕಾಮಗಾರಿ ವಿಳಂಬಕ್ಕೆ ಕಾರಣವಾಗಿದ್ದವು. ರಾಜ್ಯ ಸರ್ಕಾರದ ಕೆರೆ ಅಭಿವೃದ್ಧಿ ಸಮಿತಿಯೂ ಕೂಡ ಕೆರೆಗೆ ಭೇಟಿ ನೀಡಿ ಪರಿಶೀಲಿಸಿತ್ತು. ಇದಾದ ಬಳಿಕ ಕೆರೆ ಅಭಿವೃದ್ಧಿ ಕಾಮಗಾರಿ ಪುನರಾರಂಭಗೊಂಡಿತ್ತು.

“ಮಳೆನೀರು ಕೊಯ್ಲು ಯೋಜನೆಯ ಭಾಗವಾಗಿ ಕೆರೆಯ ಸುಧಾರಣೆ ಮತ್ತು ಉನ್ನತೀಕರಣವನ್ನು ಕೈಗೆತ್ತಿಕೊಳ್ಳಲಾಗಿದೆ. ಸುತ್ತಮುತ್ತಲಿನ ಪ್ರದೇಶದ ಸಾಮಾಜಿಕ-ಸಾಂಸ್ಕೃತಿಕ ಮೌಲ್ಯವನ್ನು ಸುಧಾರಿಸುವುದು ಮತ್ತು ಮನರಂಜನಾ ಪ್ರದೇಶವಾಗಿ ಪುನರಾಭಿವೃದ್ಧಿ ಮಾಡುವುದು ಇದರ ಉದ್ದೇಶವಾಗಿದೆ” ಎಂದು ಎಂಎಸ್‌ಸಿಎಲ್ ಜನರಲ್ ಮ್ಯಾನೇಜರ್ (ತಾಂತ್ರಿಕ) ಅರುಣ್ ಪ್ರಭಾ ಕೆ.ಎಸ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“827 ಮೀಟರ್ ಉದ್ದದ ನಿರಂತರ ವಾಕಿಂಗ್ ಮತ್ತು ಜಾಗಿಂಗ್ ಟ್ರ್ಯಾಕ್, ಔಟ್‌ಲೆಟ್‌ನಲ್ಲಿ ಅಸ್ತಿತ್ವದಲ್ಲಿರುವ ಸ್ಲೂಯಿಸ್ ಗೇಟಿನ ಆಧುನೀಕರಣ, ನವೀಕರಣ, ಆಸನ ಮತ್ತು ಮನರಂಜನಾ ಪ್ರದೇಶದ ನಿರ್ಮಾಣ ಹಾಗೂ ಕರೆಯ ಸುತ್ತ ಸುರಕ್ಷತೆಗಾಗಿ ಒಳ ಅಂಚಿನಲ್ಲಿ ಚೈನ್ ಲಿಂಕ್ ಬೇಲಿಯನ್ನು ನಿರ್ಮಿಸಲಾಗಿದೆ. ನಾಲ್ಕು ಚಕ್ರದ ವಾಹನ ಮತ್ತು ದ್ವಿಚಕ್ರ ವಾಹನ ನಿಲುಗಡೆ ಪ್ರದೇಶವನ್ನೂ ಕೂಡ ಅಭಿವೃದ್ಧಿಪಡಿಸಲಾಗಿದೆ” ಎಂದು ಅರುಣ್ ಪ್ರಭಾ ಕೆ.ಎಸ್ ತಿಳಿಸಿದ್ದಾರೆ.

“ಮೇರಿಹಿಲ್, ಬೊಂದೆಲ್ ಮತ್ತು ಕಾವೂರು ಸೇರಿದಂತೆ ಮೂರು ಪ್ರಮುಖ ಸ್ಥಳಗಳಿಂದ ಕೆರೆಗೆ ಒಳಹರಿವು ಬರುತ್ತದೆ. ಈ ಸರೋವರವು ಐತಿಹಾಸಿಕ ಮಹತ್ವವನ್ನು ಹೊಂದಿದೆ. ಈ ಹಿಂದೆ, ಮಳೆ ಬೀಳುತ್ತಿದ್ದ ಸಮಯದಲ್ಲಿ ತ್ಯಾಜ್ಯವು ಕೆರೆಯಲ್ಲಿ ಸಂಗ್ರಹವಾಗುತ್ತಿತ್ತು. ಯುಜಿಡಿ ಚರಂಡಿಗಳಿಂದ ಸೋರುವಿಕೆಯಿಂದ ತ್ಯಾಜ್ಯನೀರು ಕೆರೆಗೆ ಸೇರುತ್ತಿತ್ತು. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗಿದೆ” ಎಂದು ಅವರು ಹೇಳಿದರು.

“ಕೆರೆಯು ಈಗಾಗಲೇ ವಲಸೆ ಹಕ್ಕಿಗಳನ್ನು ಆಕರ್ಷಿಸುತ್ತಿದೆ. ಕನಿಷ್ಠ 300 ಜಾತಿಯ ಪಕ್ಷಿಗಳು ಕೆರೆಗೆ ಭೇಟಿ ನೀಡಲು ಪ್ರಾರಂಭಿಸಿವೆ. ಇದು ಪಕ್ಷಿ ವೀಕ್ಷಕರಿಗೆ ಸಂತೋಷವನ್ನುಂಟು ಮಾಡಿದೆ. ರಾತ್ರಿ ವೇಳೆ ಕೆರೆಯ ನೋಟವು ಅದ್ಭುತವಾಗಿ ಕಾಣುತ್ತದೆ. ಕಾರಂಜಿಗಳನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ. ಇದರಿಂದ ಕೆರೆಯ ಸೌಂದರ್ಯ ಮತ್ತಷ್ಟು ಹೆಚ್ಚಲಿದೆ” ಎಂದು ಹೇಳಿದರು.

“ನೀರಿನ ಗುಣಮಟ್ಟವು ಸುಧಾರಿಸುತ್ತಿದ್ದು, ಅದನ್ನು ಅಪೇಕ್ಷಣೀಯ ಮಟ್ಟಕ್ಕೆ ತರುವ ಪ್ರಯತ್ನಗಳು ನಡೆಯುತ್ತಿವೆ. ಇದರ ನಡುವೆ ಎನ್ಐಟಿಕೆ ಸುರತ್ಕಲ್ ಮತ್ತು ಎಜೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕೂಡ ಸರೋವರದ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡುತ್ತಿವೆ” ಎಂದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...