ದಾವಣಗೆರೆ | ರೈತರ ದಾರಿಗೆ ಪ್ರಭಾವಿಗಳ ಅಡ್ಡಿ: ಸೂಕ್ತ ದಾರಿ ಗುರುತಿಸುವಂತೆ ರೈತ ಸಂಘ ಒತ್ತಾಯ

Date:

ರೈತರು ಜಮೀನಿಗೆ ಬರಲು 70-80 ವರ್ಷಗಳಿಂದ ಬಳಸುತ್ತಿದ್ದ ದಾರಿಗೆ ಖಾಸಗಿ ಮತ್ತು ಪ್ರಭಾವಿ ವ್ಯಕ್ತಿಗಳು ಈಗ ಅಡ್ಡಿಪಡಿಸುತ್ತಿದ್ದು, ಕಂದಾಯ ಇಲಾಖೆ ಮತ್ತು ದಾವಣಗೆರೆ ಜಿಲ್ಲಾಡಳಿತ ಕೂಡಲೇ ರೈತರ ಹೊಲಗಳಿಗೆ ದಾರಿಯನ್ನು ಗುರುತಿಸಿ ದಾರಿ ಬಿಡಿಸಿಕೊಡಬೇಕೆಂದು ಒತ್ತಾಯಿಸಿ ಜಗಳೂರು ತಾಲೂಕಿನ ಭರಮಸಮುದ್ರ ಗ್ರಾಮದ ನೂರಾರು ರೈತರು, ರಾಜ್ಯ ರೈತ ಸಂಘದ(ವಾಸುದೇವ ಮೇಟಿ) ನೇತೃತ್ವದೊಂದಿಗೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿಯವರಿಗೆ ಮನವಿ ಸಲ್ಲಿಸಿದರು.

ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಕುಮಾರ್ ಭರಮಸಮುದ್ರ ಮಾತನಾಡಿ, “70-80 ವರ್ಷಗಳಿಂದ ರಿ. ಸರ್ವೇ ನಂ. 15, 16, 19, 65, 66ರಿಂದ 99ರವರೆಗಿನ ನೂರಾರು ಎಕರೆ ಕೃಷಿ ಜಮೀನುಗಳಿಗೆ ಓಡಾಡಲು ಬಳಸುತ್ತಿದ್ದ ದಾರಿಗೆ ಈಗ ಸ.ನಂ. 87ರ ಮಾಲೀಕರಾದ ನಾಗರತ್ನಮ್ಮ ಕೋಂ ರಾಮಚಂದ್ರ ರೆಡ್ಡಿ ಅಡ್ಡಿಪಡಿಸುತ್ತಿದ್ದಾರೆ. ರೈತರಿಗೆ ಓಡಾಡಲು ಬಿಡುತ್ತಿಲ್ಲ. ಅದೇ ದಾರಿಯಲ್ಲಿ 70-80 ವರ್ಷಗಳ ಹಿಂದಿನಿಂದಲೂ ಇದೇ ರೈತರು ಸಂಚಾರ ಮಾಡುತ್ತಿದ್ದಾರೆ. ಈಗ ಕಟಾವಿನ ಕಾಲವಾಗಿರುವುದರಿಂದ ಪ್ರತಿನಿತ್ಯ ಓಡಾಡಲು ರೈತರಿಗೆ ತೊಂದರೆಯಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

1002801986

“ಈ ಹಿಂದೆ ಅಡ್ಡಿಪಡಿಸಿದ ಕಾರಣಕ್ಕಾಗಿ ಸೂಕ್ತ ದಾರಿಯನ್ನು ಪರಿಶೀಲಿಸಿ ಗುರುತಿಸಿ ಸಂಚಾರಕ್ಕೆ ಅನುವು ಮಾಡಿಕೊಡಲು ತಾಲೂಕು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದು, ಅವರು ಅಧಿಕಾರಿಗಳಿಗೆ ನಿರ್ದೇಶಿಸಿದ್ದರು. ಸರ್ವೆ ಸ್ಕೆಚ್, ಹಿಂಬರಹ, ಸರ್ವೆ ನೋಟಿಸ್ ಈ ರೀತಿಯ ಕಾರ್ಯಗಳು ನಡೆದಿದ್ದವು. ಆದರೆ ಕೆಳಗಿನ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಸರ್ವೆ ಸ್ಕೆಚ್, ದಾರಿ ಗುರುತಿಸುವ ಕಾರ್ಯವಾಗದೇ ವಿಳಂಬವಾಗುತ್ತಿದೆ. ಈಗ ಕಟಾವಿನ ಕಾಲವಾಗಿರುವುದರಿಂದ ಬೆಳೆದ ಬೆಳೆಯನ್ನು ಮನೆಗೆ ತರಲು ರೈತರಿಗೂ ಕೂಡ ತೊಂದರೆಯಾಗುತ್ತಿದೆ. ತಾವುಗಳು ಕೂಡಲೇ ಮಧ್ಯಪ್ರವೇಶಿಸಿ ಸೂಕ್ತ ದಾರಿಯನ್ನು ಗುರುತಿಸಿ ರೈತರ ಓಡಾಟಕ್ಕೆ ಅನುಕೂಲ ಮಾಡಿಕೊಡಬೇಕಾಗಿದೆ” ಎಂದು ರೈತರ ಸಂಘದ ಕಾರ್ಯಕರ್ತರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ನೀಡುವ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಮತ್ತು ರೈತರಾದ ಶಿವಶಂಕರಪ್ಪ ಅಂಜಿನಪ್ಪ, ಬಸವರಾಜ ,ವಾಗೀಶ, ರಮೇಶ್, ಅನಿಲ್ ಕುಮಾರ, ಶ್ರೀನಿವಾಸ ರೆಡ್ಡಿ, ಸುನಿಲ್, ಮಲ್ಲಿಕಾರ್ಜುನ, ಮಲ್ಲೇಶ್ ಪೂಜಾರ, ಲೋಕೇಶ್ ದೊಣ್ಣೆಹಳ್ಳಿ ಮಧು ಕ ಎಸ್, ಎಚ್ ಸಿ ಶರಣಪ್ಪ, ಬಿ ಎಲ್ ಶ್ರೀನಿವಾಸ ರೆಡ್ಡಿ, ಕೃತಿಕ, ನಾಡಿಗರ ಮಹಾಲಿಂಗಪ್ಪ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...