ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ದೆಹಲಿಯ ಸಾಕೇತ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ಆದೇಶ ಪ್ರಕಟಿಸಿದೆ. ಅಲ್ಲದೇ, ಅಪರಾಧಿಗಳಿಗೆ 5 ಲಕ್ಷ ರೂಪಾಯಿ ದಂಡವನ್ನೂ ಹಾಕಲಾಗಿದೆ. ಮತ್ತೊಬ್ಬ ಅಪರಾಧಿ ಅಜಯ್ ಸೇಥಿ ಎಂಬಾತನಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ದೆಹಲಿಯಲ್ಲಿ 2008ರ ಸೆಪ್ಟೆಂಬರ್ 30ರಂದು ಬೆಳಗಿನ ಜಾವ 3:30ರ ಸುಮಾರಿಗೆ ಕಚೇರಿಯಿಂದ ಮನೆಗೆ ಹಿಂದಿರುಗುವಾಗ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದೀಗ 15 ವರ್ಷಗಳ ಬಳಿಕ ತೀರ್ಪು ಹೊರ ಬಂದಿದೆ.
4 Killers Of Journalist Soumya Vishwanathan Sentenced To Life https://t.co/ux8hpYvRrr
Shubhang Singh Thakur reports pic.twitter.com/T0Xzz2IEdk
— NDTV (@ndtv) November 25, 2023
ಅಪರಾಧಿಗಳಾದ ರವಿ ಕಪೂರ್, ಅಜಯ್ ಕುಮಾರ್, ಅಮಿತ್ ಶುಕ್ಲಾ ಮತ್ತು ಬಲ್ಮೀತ್ ಮಲಿಕ್ ಎಂಬುವವರೇ ಜೀವಾವಧಿ ಶಿಕ್ಷೆಗೆ ಗುರಿಯಾದವರು. ಕಳೆದ ಅಕ್ಟೋಬರ್ 18ರಂದು ಸಾಕೇತ್ ನ್ಯಾಯಾಲಯವು ಈ ಎಲ್ಲ ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು.
Delhi Court Sentences Four Men To Life Imprisonment In Journalist Soumya Vishwanathan Murder Casehttps://t.co/tObaDqs7pb
— Live Law (@LiveLawIndia) November 25, 2023
‘ಈ ನಾಲ್ವರು ಆರೋಪಿಗಳನ್ನು ಮಹಾರಾಷ್ಟ್ರದ ಕಠಿಣ ಕಾನೂನಾದ ಎಂಸಿಒಸಿಎ (ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ಕಾಯ್ದೆ ಅಡಿ ಸೆಕ್ಷನ್ 3 (1) (i)ರ ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿತ್ತು. ಐದನೇ ಅಪರಾಧಿ ಅಜಯ್ ಸೇಥಿಗೆ ಅಪರಾಧಿಗಳಿಗೆ ಸಹಾಯ ಮಾಡಿದ್ದಕ್ಕಾಗಿ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.
ಈ ತೀರ್ಪು ನನಗೆ ತೃಪ್ತಿ ತಂದಿಲ್ಲ: ಸೌಮ್ಯಾ ತಾಯಿ
ಇನ್ನು 15 ವರ್ಷಗಳ ಬಳಿಕ ತೀರ್ಪು ಹೊರಬಿದ್ದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸೌಮ್ಯಾ ತಾಯಿ, ‘ಈ ತೀರ್ಪು ನನಗೆ ತೃಪ್ತಿ ತಂದಿಲ್ಲ, ಆದರೆ ಆದರೆ ನಾನು ಅದನ್ನು ಒಳ್ಳೆಯದು ಎಂದು ಹೇಳಬಲ್ಲೆ. ನೀವು ಏನು ಮಾಡುತ್ತಿದ್ದೀರಿ ಎಂಬುದರ ಪರಿಣಾಮಗಳನ್ನು ನೀವು ಎದುರಿಸಬೇಕಾಗುತ್ತದೆ ಎಂದು ಸಮಾಜಕ್ಕೆ ಸಂದೇಶ ನೀಡಲಾಗಿದೆ ಅಷ್ಟೇ. ಮಗಳನ್ನು ಕಳೆದುಕೊಂಡು ಒಂದು ರೀತಿಯಲ್ಲಿ ನಾವೂ ಕೂಡ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದೇವೆ’ ಎಂದಿದ್ದಾರೆ.
#WATCH | Delhi: On Saket Court awarding life imprisonment to all four accused involved in 2008 TV journalist Soumya Vishwanathan’s murder case, the mother of Soumya Vishwanathan says, “I am not satisfied, but I can say it is a good thing… A message has been given to society… pic.twitter.com/ajGIoUkZZM
— ANI (@ANI) November 25, 2023
ಪ್ರಕರಣದ ಹಿನ್ನೆಲೆ:
ದೆಹಲಿಯಲ್ಲಿ ಹೆಡ್ಲೈನ್ಸ್ ಟುಡೆ ಸುದ್ದಿ ವಾಹಿನಿಯಲ್ಲಿ ಪತ್ರಕರ್ತೆಯಾಗಿದ್ದ ಸೌಮ್ಯಾ ವಿಶ್ವನಾಥನ್ 2008ರ ಸೆಪ್ಟೆಂಬರ್ 30ರಂದು ಕೆಲಸ ಮುಗಿಸಿಕೊಂಡು ಮನೆಗೆ ತೆರಳಿದ್ದರು. ಈ ವೇಳೆ ಹಿಂಬಾಲಿಸಿಕೊಂಡು ಬಂದಿದ್ದ ಐವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ, ಸೌಮ್ಯಾ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಇದಾದ ಬಳಿಕ ಹಂತಕರು ತಮ್ಮ ಕೃತ್ಯ ಬಯಲಾಗದಂತೆ ಮಾಡಲು ರಸ್ತೆ ಅಪಘಾತ ಎಂಬಂತೆ ಬಿಂಬಿಸಿದ್ದರು.
ಅಂತೆಯೇ, ಆರಂಭದಲ್ಲಿ ಕಾರು ದುರಂತ ಎಂಬಂತೆ ಕಂಡುಬಂದಿತ್ತು. ಆದರೆ, ವಿಧಿವಿಜ್ಞಾನ ವರದಿಗಳಲ್ಲಿ ಸೌಮ್ಯಾ ತಲೆಗೆ ಗುಂಡೇಟು ತಗುಲಿ ಸಾವನ್ನಪ್ಪಿದ್ದಾರೆ ಎಂದು ಬಹಿರಂಗವಾಗಿತ್ತು. ಇದರಿಂದ ಇದೊಂದು ಕೊಲೆ ಎಂದು ಸ್ಪಷ್ಟವಾಗಿ, ಇದರ ಆಧಾರದ ಮೇಲೆ ದೆಹಲಿ ಪೊಲೀಸರು ತನಿಖೆ ಪ್ರಾರಂಭಿಸಿದ್ದರು.
#WATCH | On TV journalist Soumya Vishwanathan’s murder case verdict, Special Commissioner of Police Delhi, HGS Dhaliwal says, “This case took almost 15 years. The incident happened on 30 September 2008 & we are in November 2023. Even though the trial took a lot of time,… pic.twitter.com/L0hNNl6EPB
— ANI (@ANI) November 25, 2023
ತನಿಖೆಯ ಭಾಗವಾಗಿ ಘಟನೆ ನಡೆದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳಿಗಳ ಪರಿಶೀಲನೆಯಲ್ಲಿ ಸೌಮ್ಯಾ ಅವರನ್ನು ಕಾರೊಂದು ಹಿಂಬಾಲಿಸಿದ್ದು ಬಯಲಿಗೆ ಬಂದಿತ್ತು. ನಂತರ 2009ರಲ್ಲಿ ಪೊಲೀಸರು ರವಿ ಕಪೂರ್ ಮತ್ತು ಅಮಿತ್ ಶುಕ್ಲಾನನ್ನು ಬಂಧಿಸಿದ್ದರು. ಅದಾದ ಬಳಿಕ ತನಿಖೆಯು ಮಹತ್ವದ ತಿರುವು ಪಡೆದುಕೊಂಡು, ಈ ಇಬ್ಬರೂ ಇನ್ನೊಂದು ಕೊಲೆ ಕೇಸ್ನಲ್ಲಿ ಭಾಗಿಯಾಗಿದ್ದು ಪತ್ತೆಯಾಗಿತ್ತು. ಅಲ್ಲದೆ, ಎರಡೂ ಕೊಲೆಗಳಿಗೆ ಒಂದೇ ಕಾರನ್ನು ಬಳಸಿದ್ದು ಕಂಡು ಬಂದಿತ್ತು.
ಇದಾದ ಬಳಿಕ ಈ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ 2010ರಲ್ಲಿ ಇತರ ಮೂವರು ಆರೋಪಿಗಳಾದ ಬಲ್ಮೀತ್ ಮಲಿಕ್, ಅಜಯ್ ಕುಮಾರ್ ಮತ್ತು ಅಜಯ್ ಸೇಥಿಯನ್ನು ಬಂಧಿಸಿ, ಐವರ ವಿರುದ್ಧ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಲಾಗಿತ್ತು. 2010ರ ನವೆಂಬರ್ 16ರಂದು ಸಾಕೇತ್ ನ್ಯಾಯಾಲಯದಲ್ಲಿ ವಿಚಾರಣೆಯು ಪ್ರಾರಂಭವಾಗಿತ್ತು. 2016ರ ಜುಲೈ 19ರಂದು ನ್ಯಾಯಾಲಯವು ಪ್ರಕರಣದ ವಿಚಾರಣೆ ಮುಕ್ತಾಯಗೊಳಿಸಿ ತೀರ್ಪು ಕಾಯ್ದಿರಿಸಿತ್ತು.





