ಉತ್ತರ ಪ್ರದೇಶ | ಭೀಕರ ಅಪಘಾತ; ಕೆರೆಗೆ ಉರುಳಿದ ಟ್ರ್ಯಾಕ್ಟರ್ ಟ್ರ್ಯಾಲಿ: 8 ಮಕ್ಕಳು ಸೇರಿ 22 ಮಂದಿ ಮೃತ್ಯು

Date:

ಮಾಘ ಪೂರ್ಣಿಮೆಯ ಗಂಗಾ ಸ್ನಾನಕ್ಕೆಂದು ಭಕ್ತರನ್ನು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್ ಟ್ರ್ಯಾಲಿ ನಿಯಂತ್ರಣ ತಪ್ಪಿ ಕೆರೆಯೊಂದಕ್ಕೆ ಉರುಳಿಬಿದ್ದ ಪರಿಣಾಮ 8 ಮಕ್ಕಳು ಸೇರಿದಂತೆ 22 ಮಂದಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಪಟಿಯಾಲಿ-ದರಿಯಾವ್‌ಗಂಜ್ ರಸ್ತೆಯಲ್ಲಿರುವ ಕೆರೆಯೊಂದಕ್ಕೆ ಬಿದ್ದಿದ್ದು, ಕೆರೆಗೆ ಬಿದ್ದ ನಂತರ ಟ್ರ್ಯಾಕ್ಟರ್ ಟ್ರ್ಯಾಲಿ ಪಲ್ಟಿಯಾಗಿದೆ. ಹೀಗಾಗಿ ಹೆಚ್ಚಿನ ಭಕ್ತರು ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ಕಾಸ್ಗಂಜ್ ಎಂಬಲ್ಲಿ ಈ ಭೀಕರ ದುರಂತ ಸಂಭವಿಸಿದ್ದು, ಉರುಳಿ ಬಿದ್ದ ಟ್ರ್ಯಾಲಿಯಲ್ಲಿ ಒಟ್ಟು 40 ಮಂದಿ ಇದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೇತುವೆ ಮೇಲೆ ಹೋಗುತ್ತಿದ್ದ ವೇಳೆ ಏಕಾಏಕಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿದ ಬಳಿಕ ಕೆರೆಗೆ ಮಗುಚಿ ಬಿದ್ದಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಬಂದು ಸ್ಥಳೀಯರು ನೀರಿನಲ್ಲಿದ್ದವರನ್ನ ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೂ ಕೂಡ 8 ಮಕ್ಕಳು ಸೇರಿ 15 ಮಂದಿ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರ ಪೈಕಿ ಎಂಟು ಮಂದಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯ ವೈದ್ಯಾಧಿಕಾರಿ ಡಾ.ರಾಜೀವ್ ಅಗರ್ವಾಲ್, “ಇದುವರೆಗೆ 22 ಜನರ ಸಾವು ದೃಢಪಟ್ಟಿದೆ. ಪಟಿಯಾಲಿಯ ಸಿಎಚ್‌ಸಿಯಲ್ಲಿ ಏಳು ಮಕ್ಕಳು ಮತ್ತು ಎಂಟು ಮಹಿಳೆಯರು ಮೃತಪಟ್ಟಿದ್ದಾರೆ. 10 ಮಂದಿ ಗಾಯಾಳುಗಳಾಗಿದ್ದಾರೆ” ಎಂದು ಹೇಳಿದ್ದಾರೆ.

kaj

ಘಟನೆ ನಡೆದ ಸ್ಥಳದಿಂದ ಜಿಲ್ಲಾ ಆಸ್ಪತ್ರೆಯವರೆಗೆ ಸರಿಯಾದ ರಸ್ತೆಯ ವ್ಯವಸ್ಥೆ ಇಲ್ಲದ ಕಾರಣದಿಂದ ಘಟನಾ ಸ್ಥಳಕ್ಕೆ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಲುಪಲು ತಡವಾಯಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಜಿಲ್ಲಾಧಿಕಾರಿ ಸುಧಾ ವರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಪರ್ಣಾ ರಜತ್ ಕೌಶಿಕ್ ಸೇರಿದಂತೆ ಹಲವು ಮಂದಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

ಸತ್ತವರಲ್ಲಿ ಒಂದೇ ಕುಟುಂಬದ ಅನೇಕ ಜನರು ಸೇರಿದ್ದಾರೆ ಎಂದು ತಿಳಿದು ಬಂದಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮೃತರೆಲ್ಲರೂ ಇಟಾ ಜಿಲ್ಲೆಯ ಜೈತಾರಾ ಪ್ರದೇಶದವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ನೀಡುವಂತೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...