ಪಶ್ಚಿಮ ಬಂಗಾಳ | ಇಟ್ಟಿಗೆ ಕಾರ್ಖಾನೆಯ ಚಿಮಿಣಿ ಕುಸಿದು ನಾಲ್ವರು ಮೃತ್ಯು; 30ಕ್ಕೂ ಹೆಚ್ಚು ಜನರಿಗೆ ಗಾಯ

Date:

ಪಶ್ಚಿಮ ಬಂಗಾಳದಲ್ಲಿ ಬೃಹತ್ ಚಿಮಿಣಿಯ ಒಂದು ಪಾರ್ಶ್ವದ ಇಟ್ಟಿಗೆಗಳು ಕುಸಿದು ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಉತ್ತರ 24 ಪರಗಣ ಜಿಲ್ಲೆಯ ಬಸಿರ್ಹತ್ ಪ್ರದೇಶದ ಧಲ್ತಿತಾ ಗ್ರಾಮದಲ್ಲಿ ಈ ಘಟನೆ ನಡೆದಿರುವುದಾಗಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಬುಧವಾರ ಸಂಜೆ ಬಸಿರ್‌ಹತ್‌ನ ಧಾಲ್ತಿತಾ ಗ್ರಾಮದಲ್ಲಿ ಒಂದು ವರ್ಷದಿಂದ ಮುಚ್ಚಿದ್ದ ಇಟ್ಟಿಗೆ ಗೂಡು ಪುನರಾರಂಭಿಸಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಬ್ಬರು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಸಾವನ್ನಪ್ಪಿದ್ದಾರೆ. ಎರಡು ಶವಗಳು ಅವಶೇಷಗಳ ಅಡಿಯಲ್ಲಿ ಕಂಡುಬಂದಿವೆ. ಅವರೆಲ್ಲರೂ ಇಟ್ಟಿಗೆ ಗೂಡಿನ ಕಾರ್ಮಿಕರಾಗಿದ್ದರು” ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಧಾರ್ಮಿಕ, ಸಾರ್ವಜನಿಕ ಸ್ಥಳದಲ್ಲಿ ಧ್ವನಿವರ್ಧಕ ನಿಷೇಧಿಸಿದ ನೂತನ ಸಿಎಂ!

ಮೃತಪಟ್ಟವರಲ್ಲಿ ಇಬ್ಬರು ಉತ್ತರ ಪ್ರದೇಶದ ಫೈಜಾಬಾದ್‌ ಮೂಲದ ಜೇತುರಾಮ್ ಮತ್ತು ರಾಕೇಶ್ ಕುಮಾರ್ ಎಂದು ಗುರುತಿಸಲಾಗಿದ್ದರೆ, ಮತ್ತೊಬ್ಬನನ್ನು ಸ್ಥಳೀಯ ಹಫೀಜುಲ್ ಮೊಂಡಲ್ ಎಂದು ಗುರುತಿಸಲಾಗಿದೆ. ನಾಲ್ಕನೇ ವ್ಯಕ್ತಿಯನ್ನು ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆಯ ಸಂದರ್ಭ 60 ಮಂದಿ ಕಾರ್ಮಿಕರು ಇಟ್ಟಿಗೆ ಜೋಡಣೆಯ ಕಾರ್ಯದಲ್ಲಿ ನಿರತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಚಿಮಿಣಿ ಕುಸಿತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪಶ್ಚಿಮ ಬಂಗಾಳ ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...