ಗದಗ | ಕೆಂಪು ಮೆಣಸಿನಕಾಯಿ ಬೆಲೆ ಏರಿಕೆ; ಹೆಚ್ಚಾದ ಕಳ್ಳರ ಹಾವಳಿ

Date:

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಕೆಂಪು ಮೆಣಸಿನಕಾಯಿ ಕಳ್ಳತನ ಹೆಚ್ಚಾಗಿದ್ದು, ರೈತರು ಬೇಸತ್ತು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್‌ಗಳಿಗೆ ತಾಡಪತ್ತಿ ಕಟ್ಟಿ ಜಮೀನಿನಲ್ಲಿಯೇ ಬಿಡಾರ ಹೂಡಿದ್ದಾರೆ. ಈ ನಡುವೆ ಮೆಣಸಿನಕಾಯಿ ಕದ್ದು ಸಿಕ್ಕಿ ಬಿದ್ದಿರುವ ಇಬ್ಬರು ಕಳ್ಳರನ್ನು ಕಂಬಕ್ಕೆ ಕಟ್ಟಿ ಥಳಿಸಿ, ಮೆಣಸಿನಕಾಯಿ ಮೂಟೆ ಹೊರಿಸಿ ಊರೆಲ್ಲಾ ಮೆರವಣಿಗೆ ಮಾಡಿಸಿದ ಘಟನೆ ನಡೆದಿದೆ.

ತಾಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ಕೆಂಪು ಮೆಣಸಿನಕಾಯಿ ಕಳ್ಳತನ ಹೆಚ್ಚಾಗಿದ್ದು, ರೈತರ ಹೊಲಗಳಿಗೆ ನುಗ್ಗುವ ಕಳ್ಳರು ದುಬಾರಿ ಮೆಣಸಿನ ಕಾಯಿ ಕದ್ದು ಪರಾರಿಯಾಗುತ್ತಿದ್ದಾರೆ. ಇಂತಹ ಸುದ್ದಿಯನ್ನು ಕೇಳಿ ಎಚ್ಚೆತ್ತ ರೈತರು ಮುನ್ನೆಚ್ಚರಿಕೆಯಾಗಿ ರಾತ್ರಿಯಿಡೀ ತಮ್ಮ ಹೊಲದಲ್ಲಿಯೇ ಠಿಕಾಣಿ ಹೂಡಿದ್ದಾರೆ.

ಕೆಂಪು ಮೆಣಸಿನಕಾಯಿ ಬೀಜಕ್ಕೆ ಭಾರೀ ಬೇಡಿಕೆ; ಕೆಜಿಗೆ ಬರೋಬ್ಬರಿ ₹2000 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರು ವಾಸ್ತವ್ಯ ಹೂಡಲು ಎತ್ತಿನ ಚಕ್ಕಡಿ ಹಾಗೂ ಟ್ರ್ಯಾಕ್ಟರ್‌ ಟೈಲರ್‌ನಲ್ಲಿ ಕೊಲ್ಲಾರಿ ಕಟ್ಟಿಕೊಂಡು ಅಲ್ಲಿಯೇ ಅಡುಗೆ ಮಾಡಿಕೊಳ್ಳಲು ಒಲೆಯನ್ನು ಹಾಕಿದ್ದಾರೆ. ಕೈಯಲ್ಲಿ ಬ್ಯಾಟರಿ ಮತ್ತೊಂದು ಕೈಯಲ್ಲಿ ಕೋಲು ಹಿಡಿದ ರೈತರು ರಾತ್ರಿ ಪೂರ್ತಿ ಜಮೀನು ಸುತ್ತ ಕಳ್ಳರನ್ನು ಕಾಯುವ ಕಾರ್ಯದಲ್ಲಿ ತೊಡಗಿದ್ದಾರೆ.

ಒಂದು ಕ್ವಿಂಟಲ್‌ ಕೆಂಪು ಮೆಣಸಿನಕಾಯಿಗೆ ₹40,000 ರಿಂದ ₹45,000ಕ್ಕೇ ಬೆಲೆ ಏರಿಕೆಯಾಗಿರುವುದರಿಂದ ಮೆಣಸಿನಕಾಯಿ ಕಳ್ಳತನ ಜೋರಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಬಟ್ಟೂರು, ಕುಂದ್ರಳ್ಳಿ, ರಾಮಗೇರಿ, ಯತ್ನಳ್ಳಿ, ಯಳವತ್ತಿ, ಗೋಜನೂರು, ಬಸಾಪುರ, ಮಾಡಳ್ಳಿ, ಶಿಗ್ಲಿಸೇರಿ ಸುತ್ತಲಿನ ಕೆಲವು ಗ್ರಾಮಗಳಲ್ಲಿ ಮೆಣಸಿನಕಾಯಿ ಬೆಳೆದ ಜಮೀನುಗಳಲ್ಲಿ ರೈತರು ಬೀಡು ಬಿಟ್ಟಿದ್ದಾರೆ.

ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ಬರಗಾಲದಿಂದ ಉಳಿದ ಬೆಳೆ ಹಾಳಾಗಿ ಹೋಗಿದೆ. ಇರುವುದರಲ್ಲಿಈ ಮೆಣಸಿಕಾಯಿ ಅಲ್ಪಸ್ವಲ್ಪ ಮಟ್ಟಿಗೆ ಉಳಿದಿದೆ. ಇದರಿಂದ ಈ ಬೆಳೆ ಮೇಲೆಯೇ ಕಳ್ಳರ ಕಣ್ಣು ಬಿದ್ದಿದೆ ಎನ್ನಲಾಗಿದೆ.

ಹೊಲದಿಂದ ಮೆಣಸಿನಕಾಯಿ ಕದ್ದು ಸಿಕ್ಕಿಬಿದ್ದ ಇಬ್ಬರು ಕಳ್ಳರನ್ನು ಗ್ರಾಮಸ್ಥರು ದೇವಸ್ಥಾನದ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ಲಕ್ಷ್ಮೇಶ್ವರ ತಾಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಂಬದಲ್ಲಿ ಒಬ್ಬ ಆರೋಪಿಯನ್ನು ನಿಲ್ಲಿಸಿ ಆತನ ಹೆಗಲ ಮೇಲೆ ಮತ್ತೊಬ್ಬನನ್ನು ಕಟ್ಟಿದ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮಾತ್ರವಲ್ಲದೆ ಖದೀಮರಿಗೆ ಮೆಣಸಿನಕಾಯಿ ಮೂಟೆ ಹೊರಿಸಿ ಊರಿಡೀ ಮೆರವಣಿಗೆ ಮಾಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...