ಗದಗ | ಮೂರ್ತಿ ಸ್ಥಾಪನೆಗೆ ಮುಂದಾಗದಿದ್ದಲ್ಲಿ ಉಗ್ರ ಹೋರಾಟ; ದಲಿತ ಮುಖಂಡರು ಎಚ್ಚರಿಕೆ

Date:

“ಬಂಡಾಯದ ನಾಡು ನರಗುಂದ ಪಟ್ಟಣದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರ ಮೂರ್ತಿ ಸ್ಥಾಪನೆ ಇಂದಿಗೂ ಆಗದೇ ಇರುವುದು ದುರಂತದ ಸಂಗತಿ. ನಮ್ಮ ಹೋರಾಟಕ್ಕೆ ಸ್ಪಂದಿಸಿ ಮೂರ್ತಿ ಸ್ಥಾಪನೆಗೆ ಮುಂದಾಗಬೇಕು. ಉಗ್ರ ಸ್ವರೂಪ ಹೋರಾಟ ಮಾಡುತ್ತೇವೆ” ಎಂದು ದಲಿತ ಮುಖಂಡರು ಆಗ್ರಹಿಸಿದರು.

ಗದಗ ಜಿಲ್ಲೆಯ ನರಗುಂದ ಪಟ್ಟಣದ ಪುರಸಭೆ ಎದುರು ಸರ್ವ ಜನಾಂಗದ ಸಂಘ ಸಂಸ್ಥೆಗಳ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರ ಮೂರ್ತಿ ಸ್ಥಾಪನೆಗಾಗಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ.

“ಮೇಲ್ವರ್ಗದ ಜನರ ಮೂರ್ತಿ ಸಮುದಾಯ ಭವನಗಳನ್ನು ನಿರ್ಮಿಸಲು ಅಧಿಕಾರಿಗಳು, ಜನಪ್ರತಿನಿಧಿಗಳು ಮುಂದಾಗುತ್ತಾರೆ. ಆದರೆ ಸಂವಿಧಾನ ರಚಿಸಿದ ಡಾ. ಬಿ‌.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರ ಮೂರ್ತಿ ಸಮುದಾಯ ಭವನಗಳನ್ನು ನಿರ್ಮಿಸಲು ಜನಪ್ರತಿನಿಧಿಗಳು ಮುಂದಾಗುತ್ತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನಪ್ರತಿನಿಧಿಗಳಂತೆ ಅಧಿಕಾರಿಗಳು ಆಶ್ವಾಸನೆ ನೀಡುತ್ತಾ ಬಂದಿದ್ದಾರೆ. ನಾವು ಶಾಂತಿ ರೀತಿಯಲ್ಲಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಬೇಡಿಕೆಗೆ ಈಡೇರುವವರೆಗೂ ಹೋರಾಟ ಮುಂದುವರೆಯುತ್ತದೆ.  ಹೆದ್ದಾರಿಯನ್ನು ಬಂದ್ ಮಾಡಲು ಮುಂದಾಗುತ್ತೇವೆ. ಮುಂದಿನ ಅನಾಹುತಗಳಿಗೆ ಅಧಿಕಾರಿಗಳೇ ಕಾರಣರಾಗುವರು” ಎಂದು ಮುಖಂಡರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ದತ್ತು ಜೋಗಣ್ಣವರ, ಮುತ್ತು ಸುರುಕೋಡ, ರವಿ ಚಿಂತಲ್, ಗುರುನಾಥ ಕೆಂಗಾರಕರ, ರತ್ನಪ್ಪ ಜವಳಿ, ಕಿರಣ್ ಜೋಗಣ್ಣವರ, ನವಿಸಾಬ್ ಕಿಲ್ಲೆದಾರ, ಶಿವಾನಂದ ಹರಿಜನ, ಮಾಂತೇಶ್ ಪೂಜಾರ, ವಿಜಯ್ ಚಲವಾದಿ, ಮೈಲಾರಪ್ಪ ಹಿರೇಮನಿ, ಯಶ್ವಂತ್ ಚಲವಾದಿ, ವೆಂಕಟೇಶ್ ಕಾನಪೇಟೆ, ಚೆನ್ನು ನಂದಿ, ಬಸು ಜೋಗನ್ನವರ, ವಿಕ್ರಮ ಹೊನಕೇರಿ,ಖಾಜಿಸಾಬ್ ಕಿಲ್ಲೆದಾರ, ಮುತ್ತು ಪೂಜಾರ್, ನಿಂಗಪ್ಪ ಕೆಳಗೇರಿ, ಇನೂ ಮುಂತಾದವರು ಉಪಸ್ಥಿತರಿದ್ದರು

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...