ಗುಬ್ಬಿ | ಎಸ್ಸಿ ಎಸ್ಟಿ ದೌರ್ಜನ್ಯ ತಡೆ, ಪಿಟಿಸಿಎಲ್ ಹಾಗೂ ಮಲ ಹೊರುವ ನಿಷೇಧ ಕಾಯಿದೆ ಬಗ್ಗೆ ಅರಿವು ಜಾಗೃತಿ ಕಾರ್ಯಾಗಾರ.

Date:

ತುಳಿತಕ್ಕೆ ಒಳಗಾದ ಹಾಗೂ ಶೋಷಣೆಗೆ ಒಳಗಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಲ್ಲಿ ಅಗತ್ಯ ಕಾನೂನು ಅರಿವು ಮೂಡಿಸುವ ನಿಟ್ಟಿನಲ್ಲಿ ಸ್ಲಂ ಜನಾಂದೋಲನ ಕರ್ನಾಟಕ, ಪರ್ಯಾಯ ಕಾನೂನು ವೇದಿಕೆ ಹಾಗೂ ಅದಿಜಾಂಬವ ಯುವ ಬ್ರಿಗೇಡ್ ಸಹಯೋಗದಲ್ಲಿ ಎಸ್ಸಿ ಎಸ್ಟಿ ದೌರ್ಜನ್ಯ ತಡೆ, ಪಿಟಿಸಿಎಲ್ ಹಾಗೂ ಮಲ ಹೊರುವ ನಿಷೇಧ ಕಾಯಿದೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಾಗಾರ ನಡೆಸಲಾಯಿತು.

ಪಟ್ಟಣದ ಹರಿಜನ ಆದಿ ಜಾಂಬವ ಸಂಘದ ಭವನದಲ್ಲಿ ಆಯೋಜಿಸಿದ್ದ ಕಾನೂನು ಜಾಗೃತಿ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ವೀಣಾ ಮುಗ್ಧ ದಲಿತ ಸಮುದಾಯಕ್ಕೆ ಕಾನೂನು ಅರಿವು ಅತ್ಯಗತ್ಯವಿದೆ. ಸಮಾಜ ಕಲ್ಯಾಣ ಇಲಾಖೆ ಸಮಾಜದಲ್ಲಿ ತುಳಿತಕ್ಕೆ ಒಳಗಾದ ದಲಿತ ಸಮುದಾಯದ ಪರ ಕೆಲಸ ಮಾಡುತ್ತಿದೆ. ಸಂವಿಧಾನ ಬದ್ಧ ಕೆಲಸ ಮಾಡಲು ನಾವು ಸಿದ್ಧವಿದ್ದು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತು ಒದಗಿಸಿ ಮುಖ್ಯವಾಹಿನಿಗೆ ತರುವ ಕೆಲಸ ಮಾಡಲಿದ್ದೇವೆ ಎಂದರು.

1001028338

ಜಿಪಂ ಮಾಜಿ ಸದಸ್ಯ ಜಿ.ಎಚ್.ಜಗನ್ನಾಥ್ ಮಾತನಾಡಿ ಶೋಷಿತರ ಪರ ರಚಿತ ಕಾಯಿದೆಗಳ ಬಗ್ಗೆ ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕಿದೆ. ತಿಳುವಳಿಕೆ ಇಲ್ಲದ ಜನರಿಗೆ ತಿಳಿ ಹೇಳಿ ಕಾಯಿದೆ ಬಳಕೆ ಬಗ್ಗೆ ಮಾಹಿತಿ ನೀಡಬೇಕು. ಅನಗತ್ಯ, ದುರುದ್ದೇಶದಲ್ಲಿ ಕಾಯಿದೆ ದುರ್ಬಳಕೆ ಮಾಡದಂತೆ ಮೊದಲು ಅರಿವು ಮೂಡಿಸಬೇಕು. ಜಾತಿ ನಿಂದನೆ ಕೇಸು ದುರುಪಯೋಗ ಆಗದಂತೆ ಪ್ರಜ್ಞಾವಂತರು ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೆಡ್ಸ್ ಸಂಸ್ಥೆ ಜಿಲ್ಲಾ ಸಂಚಾಲಕ ರಂಗಯ್ಯ ಮಾತನಾಡಿ ಪಿಟಿಸಿಎಲ್ ಕಾಯಿದೆ ಭೂಮಿ ಕಳೆದುಕೊಂಡ ಮುಗ್ಧ ದಲಿತರಿಗೆ ಮರಳಿ ಕೃಷಿ ಭೂಮಿ ನೀಡಿ ಬದುಕು ಕಟ್ಟಿಕೊಡುವ ಕಾಯಿದೆ ಸರಿಯಾಗಿ ಬಳಕೆ ಆಗಬೇಕಿದೆ. ಪರಿಣಾಮಕಾರಿ ಜಾರಿಗೆ ಸರ್ಕಾರಗಳು ಬೆಂಬಲ ಸೂಚಿಸಿಲ್ಲ. ನ್ಯಾಯಾಲಯ ಮೆಟ್ಟಿಲೇರಿರುವ ಈ ಕಾಯಿದೆ ದಲಿತರಿಗೆ ಮರು ಜೀವ ತರಲು ಜಾರಿಗೆ ಒತ್ತಡ ತರಲು ಮೊದಲು ಕಾಯಿದೆ ಬಗ್ಗೆ ತಿಳಿಯಬೇಕು ಎಂದು ಹೇಳಿದರು.

ಪರ್ಯಾಯ ಕಾನೂನು ವೇದಿಕೆ ವಕೀಲರಾದ ನರಸಿಂಹಪ್ಪ ಹಾಗೂ ಬಸವ ಪ್ರಸಾದ್ ಕುನಾಲೆ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯಿದೆ ಬಗ್ಗೆ ತಿಳಿಸಿದರು. ಕಾನೂನು ಪರ್ಯಾಯ ವೇದಿಕೆ ಸಂಶೋಧಕ ಸಿದ್ದಾರ್ಥ್ ಜೋಶಿ ಮಲ ಹೊರುವ ಪದ್ಧತಿ ನಿಷೇಧ ಬಗ್ಗೆ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಆಯೋಜಕ ಮನೋಜ್ ಕುಮಾರ್, ಮುಖಂಡರಾದ ಜಿ.ವಿ.ಮಂಜುನಾಥ್, ಚೇಳೂರು ಶಿವನಂಜಪ್ಪ, ಕೆಂಪರಾಜು, ಮನೋಹರ್, ಸವಿತಾ ಸಮಾಜದ ಪಾಪಣ್ಣ, ಆದಿ ಜಾಂಬವ ಯುವ ಬ್ರಿಗೇಡ್, ಭಾರತ್ ಭೀಮ ಸೇನೆ, ಮಾದಿಗ ದಂಡೋರ ಸಮಿತಿಯ ಪದಾಧಿಕಾರಿಗಳು ಇದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...