ಐವರನ್ನು ಥಳಿಸಿದ್ದ ನಾಲ್ವರು ಪೊಲೀಸರನ್ನು ಜೈಲಿಗಟ್ಟಿದ ಹೈಕೋರ್ಟ್‌

Date:

ಗುಜರಾತ್‌ನ ಹಳ್ಳಿಯೊಂದರಲ್ಲಿಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಐವರನ್ನು ಥಳಿಸಿದ್ದ ನಾಲ್ವರು ಪೊಲೀಸರಿಗೆ ಗುಜರಾತ್ ಹೈಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. 14 ದಿನಗಳ ಕಾಲ ಸರಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಖೇಡಾ ಜಿಲ್ಲೆಯಲ್ಲಿ ಘಟನೆ ನಡೆದಿತ್ತು. ಜಿಲ್ಲೆಯ  ಉಂಧೇಲಾ ಗ್ರಾಮದಲ್ಲಿ ನವರಾತ್ರಿ ಆಚರಣೆಯ ವೇಳೆ ಜನಸಮೂಹದ ಮೇಲೆ ಕಲ್ಲು ಎಸೆದ ಆರೋಪ ಕೇಳಿಬಂದಿತ್ತು. ಆ ವೇಳೆ, ಕಲ್ಲು ಎಸೆದಿದ್ದಾರೆಂಬ ಆರೋಪದ ಮೇಲೆ ಐವರನ್ನು ಕಂಬಕ್ಕೆ ಕಟ್ಟಿ ಪೊಲೀಸರು ಥಳಿಸಿದ್ದರು.

ಖೇಡಾದ ಮಟರ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಎ ವಿ ಪರ್ಮಾರ್, ಪಿಎಸ್‌ಐ ಡಿ ಬಿ ಕುಮಾವತ್, ಹೆಡ್ ಕಾನ್‌ಸ್ಟೆಬಲ್ ಕೆ.ಎಲ್ ದಾಭಿ ಮತ್ತು ಕಾನ್‌ಸ್ಟೆಬಲ್ ರಾಜು ದಾಭಿ ಅವರು ಶಿಕ್ಷೆಗೆ ಗುರಿಯಾಗಿರುವ ಅಪಾದಿತ ಪೊಲೀಸರು. ತನ್ನ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ನ್ಯಾಯಾಲಯವು 90 ದಿನಗಳ ತಡೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್ ಸುಹಿಯಾ ಮತ್ತು ಗೀತಾ ಗೋಪು ಅವರಿದ್ದ ಪೀಠವು, “ದೂರುದಾರರ ವಿರುದ್ಧ ಪೊಲೀಸ್ ಅಧಿಕಾರಿಗಳ ಕ್ರಮವು ಮಾನವೀಯತೆ ವಿರುದ್ಧದ ಅಪರಾಧವಾಗಿದೆ. ದೂರುದಾರರನ್ನು ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಥಳಿಸಿರುವುದನ್ನು ಇಡೀ ಜನಸಮೂಹವೇ ಕಣ್ಣಾರೆ ಕಂಡಿದೆ. ಅಲ್ಲದೆ, ಘಟನೆಯು ಉಂಡೇಲ ಗ್ರಾಮಕ್ಕೆ ಸೀಮಿತವಾಗಿರದೆ ಗ್ರಾಮದ ಆಚೆಗೂ ವ್ಯಾಪಿಸಿದೆ ಎಂಬುದು ಗಮನಾರ್ಹ” ಎಂದು ಹೇಳಿದೆ.

“ಸರ್ಕಾರಿ ಅಧಿಕಾರಿಗಳು ಕಾನೂನನ್ನು ಉಲ್ಲಂಘಿಸಿದರೆ, ಅದು ಕಾನೂನಿನ ತಿರಸ್ಕಾರವನ್ನು ಸೂಚಿಸುತ್ತದೆ. ಕಾನೂನುಬಾಹಿರತೆಯನ್ನು ಉತ್ತೇಜಿಸುತ್ತದೆ ಮತ್ತು ಪ್ರತಿಯೊಬ್ಬ ವ್ಯಕ್ತಿಯು ತನಗೆ ತಾನೇ ಕಾನೂನಾಗುವ ಪ್ರಚೋದನೆ ನೀಡುತ್ತದೆ. ಇದು ಅರಾಜಕತೆಗೆ ಕಾರಣವಾಗುತ್ತದೆ. ಯಾವುದೇ ಸುಸಂಸ್ಕೃತ ರಾಷ್ಟ್ರವು ಅಂತಹ ಘಟನೆಯನ್ನು ಅನುಮತಿಸುವುದಿಲ್ಲ”ಎಂದು ಹೈಕೋರ್ಟ್ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...