ಹಾಸನ l ಬೆಂಕಿ ನಂದಿಸುವ ಅಗ್ನಿಶಾಮಕ ಠಾಣೆಯಲ್ಲೇ, ನೀರಿನ ಪರದಾಟ

Date:

ಬೆಂಕಿಯಿಂದ ಉಂಟಾಗುವ ಅನಾಹುತಗಳನ್ನು ತಡೆಯಲು ಹಾಗೂ ಅದರೊಡನೆ ಹೋರಾಡಿ.ಬೆಂಕಿಯನ್ನು ನಂದಿಸಲು ವಿಶೇಷವಾಗಿ ಆಯೋಜಿಸಿರುವುದೇ ಅಗ್ನಿಶಾಮಕ ಠಾಣೆ. ಈ ರೀತಿಯ ಠಾಣೆಗಳು ದೊಡ್ಡ ದೊಡ್ಡ ಪಟ್ಟಣಗಳಲ್ಲಿದ್ದು, ತನ್ನ ಸೇವೆಯನ್ನು ಪಟ್ಟಣಗಳಿಗೆ ಮಾತ್ರವಲ್ಲದೆ ಸುತ್ತಮುತ್ತಲ ಪ್ರದೇಶಗಳಿಗೂ ಕಾರ್ಯನಿರ್ವಹಿಸುತ್ತದೆ. ಆಕಸ್ಮಿಕದಿಂದ ಉಂಟಾದ ಬೆಂಕಿಯನ್ನು ಆರಿಸುವುದು ಮಾತ್ರವಲ್ಲದೆ ಬೇರೆಡೆ ಪ್ರದೇಶಗಳಿಗೆ ಹರಡದಂತೆಯೂ ಈ ಅಗ್ನಿ ಶಾಮಕ ದಳ ನೋಡಿಕೊಳ್ಳುತ್ತದೆ. 

Screenshot 2025 05 11 22 09 44 62 680d03679600f7af0b4c700c6b270fe7

ಆದರೇ, ಇಲ್ಲೊಂದು ವಿಚಿತ್ರ ಅನ್ನಿಸಬಹುದು. ಎಲ್ಲೇ ಬೆಂಕಿ ನಂದಿಸಲು ಬಳಸುವ ಅಗ್ನಿಶಾಮಕ ವಾಹನದಲ್ಲಿ ನೀರು ಇಲ್ಲದೆ ಪರದಾಡುತ್ತಿರುವ ಠಾಣಾ ಸಿಬ್ಬಂದಿಯವರು. ಆಕಸ್ಮಿಕವಾಗಿ ಬೆಂಕಿ ಅನಾಹುತ ಸಂಭವಿಸಿದರೂ ಅದನ್ನು ನಂದಿಸಲು ನೀರಿಲ್ಲದೆ ಕೆರೆ, ಹೊಳೆ, ಭಾಗದಿಂದ ತುಂಬಿಸಿ ಕಾರ್ಯಕ್ಕೆ ತೆಗೆದುಕೊಂಡು ಹೋಗುವ ದುಸ್ಥಿತಿ ಎದುರಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಈ ತಾಲ್ಲೂಕಿನಲ್ಲಿ ಅತಿ ತುರ್ತಾಗಿ ಅಗ್ನಿಶಾಮಕ ಠಾಣೆ ಬೇಕೆಂದು ಹಲವಾರು ಬಾರಿ ರೈತ ಸಂಘ ಹಾಗೂ ಇನ್ನೂ ಇತರೆ ಸಂಘಟನೆಗಳು ಹೋರಾಟ ನಡೆಸಿದ್ದರಿಂದ 2009ರಲ್ಲಿ ಮಾಜಿ ಶಾಸಕ ರುದ್ರೇಶಗೌಡರ ನೇತೃತ್ವದಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣ ಮಾಡಲಾಗಿತ್ತು. ಹಾಗೆಯೇ, ಸಿಬ್ಬಂದಿಗಳಿಗೆ ವಸತಿ ನಿಲಯವನ್ನು ನಿರ್ಮಾಣ ಮಾಡಲಾಗಿತ್ತು. ಸುಮಾರು 21 ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಲಾಗಿತ್ತು. ಕುಡಿಯುವ ನೀರಿಗೆ ಬೋರ ವೆಲ್ ಹಾಗೂ ತೊಳಲು ಗ್ರಾ.ಪಂ. ನಿಂದ ಕುಡಿಯುವ ನೀರಿನ ವ್ಯವಸ್ಥೆಯನ್ನು ಒದಗಿಸಲಾಗಿತ್ತು. ಅದು ಈಗ ನೀರಿಲ್ಲದೆ ಅಸ್ತವ್ಯಸ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2025 05 11 22 15 15 33 680d03679600f7af0b4c700c6b270fe7

15 ವರ್ಷ ಹಿಂದೆ ನೀಡಿದ್ದ ಎರಡು ಅಗ್ನಿ ಶಾಮಕ ವಾಹನ ಈಗ ಏನೂ ಪ್ರಯೋಜನವಿಲ್ಲದಂತಾಗಿದೆ. ಅಗ್ನಿ ಅವಘಡ ಸಂಭವಿಸಿದರೆ ಪಕ್ಕದ ತಾಲ್ಲೂಕಿನ ವಾಹನದಲ್ಲಿ ಬೆಂಕಿ ನಿಲ್ಲಿಸುವ ಕಾರ್ಯವನ್ನು ಮಾಡಬೇಕಿದೆ. ಬೋರ್ ವೆಲ್ ನಿಂತಿರುವುದರಿಂದ ನೀರನ್ನು ಭರ್ತಿ ಮಾಡಲು ಯಗಚಿ ಜಲಾಶಯ ಹಾಗೂ ವಿಷ್ಣು ಸಮುದ್ರ ಕೆರೆಯಲ್ಲಿ ವಾಹನವನ್ನು ಭರ್ತಿ ಮಾಡುವ ಕೆಲಸವಾಗಿತ್ತಿದೆ.

Screenshot 2025 05 11 22 03 41 17 40deb401b9ffe8e1df2f1cc5ba480b12

ನಮಗೆ ಇಲಾಖೆಯಿಂದ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಎರಡು ಬೋರ್ ವೆಲ್ ನೀಡಿದ್ದರೂ ಸಹ ನೀರಿಲ್ಲದೆ ಸಂಪೂರ್ಣ ಬತ್ತಿ ಹೋಗಿದೆ. ಎರಡು ದಿನಗಳಿಗೊಮ್ಮೆ ಗ್ರಾ.ಪಂ. ಇಂದ ನೀರನ್ನು ಒದಗಿಸುತ್ತಾರೆ. ಅದು ಸಹ ಸಾಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ಮೇಲಾಧಿಕಾರಿ ಹಾಗೂ ಶಾಸಕರಲ್ಲಿ ಈಗಾಗಲೇ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಿಕೊಡಿ ಎಂದು ಮನವಿ ಮಾಡಲಾಗಿದೆ ಎಂದು ಅಗ್ನಿಶಾಮಕ ದಳದ ಪ್ರಭಾರ ಠಾಣಾಧಿಕಾರಿ ಧರ್ಮಯ್ಯನವರು ಮಾಧ್ಯಮಗಳೊಂದಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ l ಗೌರಿ ಲಂಕೇಶ್ ವೇದಿಕೆಯಲ್ಲಿ ಸರಳ ವೈಚಾರಿಕ ವಿವಾಹ: ವಧು-ವರರಲ್ಲಿ ಹೊಸ ತೇಜಸ್ಸನ್ನು ತುಂಬಿದೆ

ಬೇಲೂರು ತಾಲೂಕಿನ ಅಗ್ನಿಶಾಮಕ ಠಾಣೆಯಲ್ಲಿ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿರುವ ಸಮಸ್ಯೆಯನ್ನು ಸಂಬಂಧಿಸಿದವರು ಆದಷ್ಟು ಬೇಗ ಬಗೆ ಅರಿಯಲಿ ಎಂದು ಆಶಿಸೋಣ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...