ಹಾಸನ l ಮಹಿಳಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು; ಎಸ್ ಎಫ್ ಐ ಸಂಘಟನೆ

Date:

ಹಾಸನದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೋಸ್ಟ್‌ ಮೆಟ್ರಿಕ್‌ ಹಾಸ್ಟೆಲ್ ನಲ್ಲಿ ಸಾವಿತ್ರಿ ಬಾಯಿಪುಲೆ ಅವರ ಜನ್ಮ ದಿನದ ಅಂಗವಾಗಿ ಎಸ್ ಎಫ್ ಐ ಸಂಘಟನೆಯ ವತಿಯಿಂದ ಗುರುವಾರದಂದು ವಿಚಾರ ಸಂಕೀರ್ಣವನ್ನು ಹಮ್ಮಿಕೊಳ್ಳಲಾಗಿತ್ತು.

ಮಹಿಳಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಏಕೆಂದರೆ ಶತಮಾನಗಳಿಂದ ಶೋಷಣೆಗೆ ಒಳ ಪಟ್ಟು ಮಹಿಳಾ ಸಮುದಾಯ ಇಂದಿಗೂ ಅದೆ ಸಮಸ್ಯೆ ಎದುರಿಸುತ್ತಿದೆ, ಸಾವಿತ್ರಿ ಬಾಪುಲೆ ಅವರು ಮಹಿಳಾ ಶಿಕ್ಷಣಕ್ಕೆ ಒತ್ತು ಕೊಟ್ಟಷ್ಟು ಯಾರು ಕೊಟ್ಟಿರುವುದಿಲ್ಲ, ನೂರಾರು ವರ್ಷಗಳ ಹಿಂದೆಯೇ, ಈ ವೈದಿಕಶಾಹಿ ಪರಂಪರೆ ಮಹಿಳೆಯನ್ನು ಅಸ್ಪೃಶ್ಯಳಾಗಿ ನೋಡುವ ಪದ್ದತಿಗಳ ವಿರುದ್ಧ ಹೋರಾಟ ಮಾಡಿದ್ದರಿಂದ ಮಹಿಳೆಯರಿಗೆ ಸಮಾನವಾದ ಶಿಕ್ಷಣ ಸಿಗುತ್ತಿದೆ. ಸಾವಿತ್ರಿ ಬಾಯಿಪುಲೆ ಅವರು ಮಾಡಿರುವುದು ಶಿಕ್ಷಣ ಕ್ರಾಂತಿ “ಸಾವಿತ್ರಿ ಬಾಯಿ ತುಂಬ ಉದಾರಿಯಾಗಿದ್ದರು. ಅವರ ಹೃದಯ ಕರುಣಾಭರಿತವಾಗಿತ್ತು. ಬಡವರು, ಅಸಹಾಯಕರ ಕುರಿತು ಬಹಳ ಅನುಭೂತಿ ಹೊಂದಿದ್ದರು ಎಂದು ಮಹಿಳಾ ಸಂಘಟನೆಯ ಸೌಮ್ಯಾ ಮಾತಾಡಿದರು.

ಸಾವಿತ್ರಿಬಾಯಿ ನಸುನಗುತ್ತ, “ನಾವು ಸತ್ತು ಹೋಗುವಾಗ ಏನನ್ನಾದರೂ ಜೊತೆಗೆ ಒಯ್ಯುತ್ತೇವೆಯೇ?” ಎಂದು ಕೇಳುತ್ತಿದ್ದರು. ಮನೆಗೆ ಯಾರಾದರೂ ಅತಿಥಿಗಳು ಬಂದರೆ ಅವರಿಗೆ ತುಂಬ ಸಂತೋಷ, ತಾವೇ ಅಡಿಗೆ ಮಾಡಿ ಬಡಿಸುತ್ತಾರೆ. ಅವರು ಸದಾ ಮಹಿಳೆಯರ ಶಿಕ್ಷಣ ಮತ್ತು ಉನ್ನತಿಯ ಬಗ್ಗೆಯೇ ಯೋಚಿಸುತ್ತಾರೆ. ಸೌಂದರ್ಯ, ಸಿರಿಸಂಪತ್ತು ಕುರಿತಾದ ನಿಗ್ರಹವನ್ನು ಎಳೆಯ ವಯಸ್ಸಿನಲ್ಲೇ ದಕ್ಕಿಸಿಕೊಂಡ ಕಾರಣ ಹಾಗೂ ತಾನು ಮಾಡುವ ಕೆಲಸದಲ್ಲಿ ಶ್ರದ್ಧೆ ಬೆಳೆಸಿಕೊಂಡ ಕಾರಣ ಸಾವಿತ್ರಿ ತನ್ನ ಕಾಲದ ಉಳಿದ ಮಹಿಳೆಯರಿಗಿಂತ ತೀರಾ ಭಿನ್ನವಾಗಿ ಯೋಚಿಸಲು, ಕಾರ್ಯಪ್ರವೃತ್ತರಾಗಲು ಸಾಧ್ಯವಾಯಿತು. ಇಂತಹ ಮನೋಭಾವವೇ ಎಲ್ಲ ಮಕ್ಕಳನ್ನೂ ತನ್ನವೇ ಎಂದುಕೊಂಡು ಅವರಿಗೆ ಅಕ್ಷರದ ಅನ್ನ ಉಣಬಡಿಸಲು, ಎಲ್ಲರಿಗೂ ತಾಯಿಯಾಗಲು ಸಾಧ್ಯವಾಗಿದೆ ಎಂದು ಮಹಿಳಾ ಸಂಘದ ಸೌಮ್ಯ ಮಾತಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫುಲೆ ದಂಪತಿಗಳ ಕೊಡುಗೆಯನ್ನು ನಾವು ಸ್ಮರಿಸಬೇಕು. ಮಹಿಳೆಯರಿಗೆ ಶಿಕ್ಷಣ ಸಿಗಬೇಕು, ಅವರಿಗೂ ಘನೆತೆಯ ಬದುಕಿದೆ ಎಂಬುದನ್ನು ಒತ್ತಿ ಹೇಳಿದರು ಅಂದಿನ ಕಾಲದಲ್ಲಿ ಅವರು ಅಷ್ಟು ಕೆಲಸ ಮಾಡದೆ ಹೋಗಿದ್ದರೆ ಇಂದು ನಾವು ನೆಮ್ಮದಿಯಾಗಿ ಇಲ್ಲಿ ಬದುಕಲು ಸಾದ್ಯ ಆಗುತ್ತಿರಲಿಲ್ಲ. ಹಾಗಾಗಿ ಅವರು ನಮಗೆ ಆದರ್ಶ ಎಂದು ಸಮಾಜ ಕಲ್ಯಾಣ ಅಧಿಕಾರಿಗಳಾದ ಆಶಾ ಅವರು ಮಾತಾಡಿದರು.

ಇದನ್ನೂ ಓದಿದ್ದೀರಾ?ಹಾಸನ l ಎಫ್ ಡಿಎ ವಿರುದ್ದ ಲಂಚ ಆರೋಪ, ಅಮಾನತು ಆಗಿದ್ದರೂ ಕರ್ತವ್ಯ ನಿರ್ವಹಣೆ 

 ಈ ವಿಚಾರ ಸಂಕೀರ್ಣ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ರಮೇಶ್, ಚಾಂದಿನ, ರೂಪ, ಹಾಸ್ಟೆಲ್ ವಿದ್ಯಾರ್ಥಿಗಳು ಹಾಗೂ ಇನ್ನಿತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...