ಹಾಸನ | ಹೈ ವೋಲ್ಟೇಜ್‌ ಕ್ಷೇತ್ರದಲ್ಲಿ ಸ್ವರೂಪ್‌ ಜಯಬೇರಿ; ಪ್ರೀತಂ ಗೌಡಗೆ ಮುಖಭಂಗ

Date:

ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ತ್ವರಿತವಾಗಿ ಸಾಗುತ್ತಿದೆ. ಹಾಸನ ಜಿಲ್ಲೆಯ ಜಿದ್ದಾಜಿದ್ದಿನ ಹೈವೋಲ್ಟೇಜ್‌ ಕ್ಷೇತ್ರವಾಗಿದ್ದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಸ್ವರೂಪ್‌ ಪ್ರಕಾಶ್‌ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಸಾಶಕ ಪ್ರೀತಂ ಗೌಡ ಸೋಲುಂಡಿದ್ದು, ಮುಖಭಂಗ ಅನುಭವಿಸಿದ್ದಾರೆ.

ಜೆಡಿಎಸ್ ಟಿಕೆಟ್‌ ಹಂಚಿಕೆಯಲ್ಲಿ ಗೊಂದಲಕ್ಕೊಳಗಾಗಿದ್ದ ಹಾಸನ ಕ್ಷೇತ್ರದಲ್ಲಿ ಕೊನೆ ಹಂತದಲ್ಲಿ ಗೌಡರ ಕುಟುಂಬದಿಂದ ಸ್ವರೂಪ್‌ ಪ್ರಕಾಶ್‌ ಅವರಿಗೆ ಟಿಕೆಟ್‌ ಘೋಷಣೆ ಮಾಡಿದ್ದರು. ಬಳಿಕ ಗೌಡರ ಕುಟುಂಬ ಬಿಜೆಪಿಯನ್ನು ಈ ಬಾರಿ ಸೋಲಿಸಿ ಹಾಸನ ಭದ್ರಕೋಟೆಯನ್ನು ಉಳಿಸಿಕೊಳ್ಳಲೇಬೇಕೆಂದು ಟೊಂಕಕಟ್ಟಿ ನಿಂತಿತ್ತು.

ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ, “ನಾನು ಒಂದು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ. ನಾನು ತುಂಬಾ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ನನ್ನ ಗೆಲುವಿನ ಜೈಕಾರ ಹೊಳೆನರಸೀಪುರದ ವರೆಗೂ ಕೇಳುತ್ತದೆ” ಎಂದು ಪರೋಕ್ಷವಾಗಿ ಗೌಡರ ಕುಟುಂಕ್ಕೆ ಸವಾಲು ಹಾಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಟ್ಟಾರೆಯಾಗಿ ಮೂರು ಬಾರಿ ಶಾಸಕರಾಗಿದ್ದ ದಿವಂಗತ‌ ಎಚ್.ಎಸ್‌. ಪ್ರಕಾಶ ಅವರ ಪುತ್ರ ಸ್ವರೂಪ್ ಸುಮಾರು 8 ಸಾವಿರ ಮತಗಳಿಂದ ಗೆಲುವು‌ ಸಾಧಿಸಿದ್ದಾರೆ. ಅನುಕಂಪ, ಆಡಳಿತ‌ ವಿರೋಧಿ ಅಲೆ ಕ್ಷೇತ್ರದಲ್ಲಿ‌ ಕೆಲಸ ಮಾಡಿದೆ.

ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಅವರಿಗೆ ಹಿನ್ನಡೆಯಾಗಿದ್ದು, ಮುಖಭಂಗವಾಗಿದೆ. ಅತಿಯಾದ ಆತ್ಮವಿಶ್ವಾಸ, ಅನಗತ್ಯ ಹೇಳಿಕೆಗಳಿಂದ ಗೊಂದಲ ಸೃಷ್ಟಿಸಿಕೊಂಡ ಪ್ರೀತಂ ಗೌಡ ಅವರನ್ನು ಕ್ಷೇತ್ರದ ಮತದಾರರು ತಿರಸ್ಕರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗೆಲುವಿನ ಖಾತೆ ತೆರೆದ ಕಾಂಗ್ರೆಸ್, ಹಾಸನದಲ್ಲಿ ಜೆಡಿಎಸ್‌ನ ಸ್ವರೂಪ್‌ ಗೆಲುವು; ಚಾಮರಾಜನಗರದಲ್ಲಿ ಸೋಮಣ್ಣಗೆ ಸೋಲು

ದಾಸ ಒಕ್ಕಲಿಗ ಸಮುದಾಯದ ಮತಗಳು ಬಿಜೆಪಿ, ಜೆಡಿಎಸ್‌ಗೆ ಹಂಚಿಕೆಯಾಗಿದ್ದು, ಅಲ್ಪಸಂಖ್ಯಾತರ ಮತಗಳು ಸಂಪೂರ್ಣವಾಗಿ ಜೆಡಿಎಸ್ ಪರ ಬಂದಿದ್ದರಿಂದ ಸ್ವರೂಪ್ ಗೆಲುವು ಸುಲಭವಾಯಿತು.

ಸ್ವರೂಪ್‌ಗೆ ಟಿಕೆಟ್ ಕೊಡಲು ಆರಂಭದಲ್ಲಿ ಅಪಸ್ವರ ಎತ್ತಿದ್ದ ಎಚ್.ಡಿ.ರೇವಣ್ಣ ಕುಟುಂಬ ಸ್ವರೂಪ ಪರ ನಿಂತಿದ್ದು ಹಾಗೂ ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡರ ಭಾವನಾತ್ಮಕ ಪ್ರಚಾರಗಳು ಸ್ವರೂಪ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿವೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...