ಶಿಕ್ಷಕಿ ಮಾತು ಕೇಳಿ ಕೆನ್ನೆಗೆ ಏಟು; ಮುಸ್ಲಿಂ ವಿದ್ಯಾರ್ಥಿಯನ್ನು ಅಪ್ಪಿಕೊಂಡ ಹಿಂದು ವಿದ್ಯಾರ್ಥಿ

Date:

  • ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾದ ವಿದ್ಯಾರ್ಥಿಗಳಿಬ್ಬರು ಅಪ್ಪಿಕೊಂಡ ವಿಡಿಯೋ
  • ‘ದ್ವೇಷದ ಗಾಯಕ್ಕೆ ಪ್ರೀತಿಯ ಮುಲಾಮು ಹಚ್ಚಿದರೈತ ಮುಖಂಡರು : ನೆಟ್ಟಿಗರಿಂದ ಶ್ಲಾಘನೆ

ಶಿಕ್ಷಕಿಯ ಮಾತು ಕೇಳಿ ಮುಸ್ಲಿಂ ವಿದ್ಯಾರ್ಥಿಯೋರ್ವನ ಕೆನ್ನೆಗೆ ಇತರೆ ವಿದ್ಯಾರ್ಥಿಗಳು ಬಾರಿಸಿದ್ದ ಘಟನೆಯು ದೇಶಾದ್ಯಂತ ಚರ್ಚೆಗೊಳಗಾಗಿರುವ ನಡುವೆಯೇ ರೈತ ಮುಖಂಡರ ನಡೆಯು ವ್ಯಾಪಕ ಶ್ಲಾಘನೆಗೆ ಒಳಗಾಗಿದೆ.

ಸದ್ಯ ದೇಶಾದ್ಯಂತ ಚರ್ಚೆಗೊಳಗಾಗಿರುವ ಮುಝಾಫರ್ ನಗರದ ಘಟನೆಯ ವಿಡಿಯೋ ವೈರಲಾದ ವಿಷಯ ಅರಿತ ಭಾರತೀಯ ಕಿಸಾನ್ ಯೂನಿಯನ್‌ ಮುಖಂಡ ನರೇಶ್ ಟಿಕಾಯತ್ ನೇತೃತ್ವದ ರೈತ ಮುಖಂಡರ ತಂಡ, ಮುಝಾಫರ್ ನಗರದ ಖುಬ್ಬಾಪುರ ಗ್ರಾಮಕ್ಕೆ ಭೇಟಿ ನೀಡಿತು. ಬಳಿಕ ಸಂತ್ರಸ್ತ ವಿದ್ಯಾರ್ಥಿಯ ಕುಟುಂಬದೊಂದಿಗೆ ಮಾತುಕತೆ ನಡೆಸಿದರು.

ಈ ವೇಳೆ ಮಾತನಾಡಿದ ನರೇಶ್ ಟಿಕಾಯತ್, “ಈ ಘಟನೆ ನಾಚಿಕೆಗೇಡಿನ ಸಂಗತಿ. ಧರ್ಮದ ಕಾರಣಕ್ಕೆ ಪರಸ್ಪರ ಪ್ರೀತಿಯ ವಾತಾವರಣವನ್ನು ಕೆಡಲು ನಾವು ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಬಳಿಕ ಕೆನ್ನೆಗೆ ಹೊಡೆದಿದ್ದ ಹಿಂದು ವಿದ್ಯಾರ್ಥಿ ಮತ್ತು ಹೊಡೆತ ತಿಂದಿದ್ದ ಮುಸ್ಲಿಂ ವಿದ್ಯಾರ್ಥಿಯನ್ನು ಹತ್ತಿರಕ್ಕೆ ಕರೆದು ಪರಸ್ಪರ ಅಪ್ಪಿಕೊಳ್ಳುವಂತೆ ಸೂಚಿಸಿದರು.

ಆಲಿಂಗಿಸಿಕೊಂಡ ವಿದ್ಯಾರ್ಥಿಗಳಿಬ್ಬರ ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ರೈತ ಮುಖಂಡರ ನಡೆಯು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

“ಯಾವ ಟೀಚರ್ ಮಾತು ಕೇಳಿ ಒಂದು ಮಗು ಮತ್ತೊಂದು ಮಗುವಿನ ಕೆನ್ನೆಗೆ ಬಾರಿಸಿತ್ತೋ, ಇವತ್ತು ರೈತ ಮುಖಂಡರುಗಳು ಮುಂದೆ ಬಂದು ಆ ಎರಡು ಮಕ್ಕಳಿಗೆ ಬುದ್ಧಿ ಹೇಳಿ, ಇಬ್ಬರು ಆತ್ಮೀಯವಾಗಿ ತಬ್ಬಿಕೊಳ್ಳುವ ಹಾಗೆ ಮಾಡಿದರು. ಇದೆ ನಮ್ಮ ನಿಜವಾದ ಭಾರತ ದೇಶದ ಸಂಸ್ಕೃತಿ. ದ್ವೇಷದ ಗಾಯಕ್ಕೆ ಪ್ರೀತಿಯ ಮುಲಾಮು ಹಚ್ಚಿದ್ದಾರೆ’ ಎಂದು ಹಲವರು ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...