10 ನಿಮಿಷದ ಆಝಾನ್‌ನಿಂದ ಶಬ್ದ ಮಾಲಿನ್ಯ ಎನ್ನುವುದಾದರೆ ಡಿಜೆ ಕತೆ ಏನು?: ಗುಜರಾತ್ ಹೈಕೋರ್ಟ್

Date:

‘ಹತ್ತು ನಿಮಿಷದ ಆಝಾನ್‌ನಿಂದ ಶಬ್ದ ಮಾಲಿನ್ಯ ಎನ್ನುವುದಾದರೆ ನಿಮ್ಮ ಡಿಜೆ, ಭಜನೆಗಳ ಕತೆ ಏನು?’ ಹೀಗಂತ ಪ್ರಶ್ನಿಸಿದ್ದು ಗುಜರಾತ್ ಹೈಕೋರ್ಟ್.

“ಮುಸ್ಲಿಮರು ದಿನಕ್ಕೆ ಐದು ಬಾರಿ ಪ್ರಾರ್ಥನೆ ಮಾಡುವ ಉದ್ದೇಶದಿಂದ ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಿ ಆಝಾನ್ ಕರೆ ನೀಡಿದ ಮಾತ್ರಕ್ಕೆ ಶಬ್ದ ಮಾಲಿನ್ಯ ಉಂಟಾಗುವುದಿಲ್ಲ” ಎಂದು ಗುಜರಾತ್ ಹೈಕೋರ್ಟ್ ಹೇಳಿರುವುದಾಗಿ ‘ಬಾರ್ & ಬೆಂಚ್’ ವರದಿ ಮಾಡಿದೆ.

gujarat high court 2

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಸೀದಿಗಳಲ್ಲಿ ಆಝಾನ್ ನೀಡಲು ಬಳಸಲಾಗುವ ಧ್ವನಿವರ್ಧಕದಿಂದ ಶಬ್ದ ಮಾಲಿನ್ಯವಾಗುತ್ತಿದೆ. ಹಾಗಾಗಿ, ಅದನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡ ಗುಜರಾತ್ ಹೈಕೋರ್ಟ್, ಅರ್ಜಿಯನ್ನು ವಜಾಗೊಳಿಸಿತು.

“ಧ್ವನಿವರ್ಧಕಗಳ ಮೂಲಕ ಹೊರಡಿಸಲಾಗುವ ಮನುಷ್ಯ ಧ್ವನಿಯು ಅನುಮತಿಸಲಾದ ಮಿತಿಯನ್ನು ಮೀರುತ್ತಿದೆ ಎಂಬುದನ್ನು ಸಾಬೀತುಪಡಿಸಲು ಪಿಐಎಲ್ ಸಲ್ಲಿಸಿದವರಿಗೆ ಸಾಧ್ಯವಾಗಿಲ್ಲ. ಇದು ಸಂಪೂರ್ಣ ತಪ್ಪು ತಿಳಿವಳಿಕೆಯಿಂದ ಕೂಡಿದೆ” ಎಂದು ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್‌ವಾಲ್‌ ಮತ್ತು ನ್ಯಾಯಮೂರ್ತಿ ಅನಿರುದ್ಧ ಮಯಿ ಅವರಿದ್ದ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸುತ್ತಾ ಉಲ್ಲೇಖಿಸಿದೆ.

‘ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆ ತೊಂದರೆ ಮತ್ತು ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತದೆ. ಅವುಗಳಿಗೆ ನಿಷೇಧ ಹೇರಬೇಕು’ ಎಂದು ವೃತ್ತಿಯಲ್ಲಿ ವೈದ್ಯರೆಂದು ಹೇಳಿಕೊಂಡಿರುವ ಧರ್ಮೇಂದ್ರ ಪ್ರಜಾಪತಿ ಎಂಬುವವರು ಗುಜರಾತ್ ಹೈಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಪೀಠ, ‘ಅರ್ಜಿದಾರರು ಯಾವ ಆಧಾರದಲ್ಲಿ ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎನ್ನುತ್ತಿದ್ದಾರೆ’ ಎಂದು ಪ್ರಶ್ನಿಸಿತು. ಅಲ್ಲದೇ ಇದೇ ವೇಳೆ, “ವಿಪರೀತ ಶಬ್ದಮಾಲಿನ್ಯ ಉಂಟು ಮಾಡುವ ನಿಮ್ಮ ಡಿಜೆ ಬಗ್ಗೆ ಏನು ಹೇಳುತ್ತೀರಿ? ಅದರಿಂದ ಬಹಳಷ್ಟು ಮಾಲಿನ್ಯವಾಗುತ್ತದೆಯಲ್ಲವೇ? ನಾವು ಈ ರೀತಿಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಪುರಸ್ಕರಿಸುವುದಿಲ್ಲ. ಆಝಾನ್ ಧಾರ್ಮಿಕ ನಂಬಿಕೆಯಾಗಿದ್ದು ವರ್ಷಗಳಿಂದ ನಡೆದುಕೊಂಡು ಬಂದಿದೆ. ಒಂದು ದಿನದಲ್ಲಿ ಐದು ಬಾರಿ ಕೂಗುವ ಅದಕ್ಕೆ(ಆಝಾನ್) 10 ನಿಮಿಷವೂ ಹಿಡಿಯದು” ಎಂಬುದನ್ನು ಹೈಕೋರ್ಟ್‌ ಉಲ್ಲೇಖಿಸಿತು.

ದೇವಾಲಯಗಳ ಆರತಿಗಿಂತಲೂ ಆಝಾನ್‌ ದಿನಕ್ಕೆ ಐದು ಬಾರಿ ನಡೆಯುತ್ತದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು. ಆಗ ನ್ಯಾಯಾಲಯವು, “ದೇವಾಲಯಗಳಲ್ಲಿ ಆರತಿಯೊಂದಿಗೆ ಬಡಿಯುವ ಘಂಟೆ, ಡೋಲು ಮತ್ತಿತರ ವಾದ್ಯಘೋಷಗಳು, ಭಜನೆಗಳಿಂದ ಯಾರಿಗೂ ತೊಂದರೆ ಉಂಟಾಗುವುದಿಲ್ಲವೇ? ಆ ಶಬ್ದ ದೇಗುಲಕ್ಕಷ್ಟೇ ಸೀಮಿತ, ಹೊರಗಡೆ ದಾಟುವುದಿಲ್ಲ ಎಂದು ನೀವು ಹೇಳಲು ಸಾಧ್ಯವೇ?” ಎಂದು ಮುಖ್ಯ ನ್ಯಾಯಮೂರ್ತಿ ಸುನೀತಾ ವಕೀಲರನ್ನು ಪ್ರಶ್ನಿಸುತ್ತಾ, ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡರು.

‘ದಿನದ ಬೇರೆ ಬೇರೆ ಅವಧಿಗಳಲ್ಲಿ 10 ನಿಮಿಷಗಳ ಕಾಲ ಆಝಾನ್ ಕೂಗುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಕುರಿತು ವೈಜ್ಞಾನಿಕ ರೀತಿಯ ಆಧಾರ ಒದಗಿಸಲು ಅರ್ಜಿದಾರರು ವಿಫಲವಾಗಿದ್ದಾರೆ. ಹಾಗಾಗಿ ಇದು ಸಂಪೂರ್ಣ ತಪ್ಪು ತಿಳಿವಳಿಕೆಯಿಂದ ಕೂಡಿದೆ. ಈ ರೀತಿಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಪುರಸ್ಕರಿಸುವುದಿಲ್ಲ’ ಎಂದು ಉಲ್ಲೇಖಿಸುತ್ತಾ ಗುಜರಾತ್ ಹೈಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...