ಉದ್ರೇಕಕಾರಿ ಭಾಷಣ ಆರೋಪ: ಖ್ಯಾತ ಮುಸ್ಲಿಂ ವಾಗ್ಮಿ ಮುಫ್ತಿ ಸಲ್ಮಾನ್ ಅಝ್ಹರಿ ಬಂಧನ

Date:

ಉದ್ರೇಕಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರ ಮತ್ತು ಗುಜರಾತ್ ಪೊಲೀಸರು ಖ್ಯಾತ ಮುಸ್ಲಿಂ ವಾಗ್ಮಿ ಮುಫ್ತಿ ಸಲ್ಮಾನ್ ಅಝ್ಹರಿ ಅವರನ್ನು ಮುಂಬೈನಲ್ಲಿ ಭಾನುವಾರ ರಾತ್ರಿ ಬಂಧಿಸಿದ್ದಾರೆ.

ಮುಫ್ತಿ ಸಲ್ಮಾನ್ ಅವರನ್ನು ಘಾಟ್‌ಕೋಪರ್ ಪೊಲೀಸ್ ಠಾಣೆಯಲ್ಲಿ ಅವರನ್ನು ಬಂಧಿಸಿಡಲಾಗಿತ್ತು. ಈ ಮಾಹಿತಿ ಅರಿತ ತಕ್ಷಣವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನೂರಾರು ಬೆಂಬಲಿಗರು ಠಾಣೆಯ ಹೊರಗೆ ಜಮಾಯಿಸಿದ್ದರು.

ಈ ವೇಳೆ ಮೌಲ್ವಿಗಳು ಪೊಲೀಸ್ ಠಾಣೆಯ ಒಳಗಿನಿಂದ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಪ್ರತಿಭಟನೆ ಮಾಡದಂತೆ ಕೇಳಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನೇನೂ ಕ್ರಿಮಿನಲ್ ಅಲ್ಲ. ಅಥವಾ ಅಪರಾಧ ಎಸಗಿದ್ದಕ್ಕಾಗಿ ನನ್ನನ್ನು ಇಲ್ಲಿಗೆ ಕರೆತರಲಾಗಿಲ್ಲ. ಅವರು ಅಗತ್ಯವಿರುವ ತನಿಖೆಯನ್ನು ಮಾಡುತ್ತಿದ್ದಾರೆ ಮತ್ತು ನಾನು ಸಹ ಅವರಿಗೆ ಸಹಕರಿಸುತ್ತಿದ್ದೇನೆ. ನಾನು ತಪ್ಪು ಮಾಡಿದ್ದರೆ ಬಂಧಿಸಲಿ. ಯಾರೂ ಕೂಡ ಪ್ರಚೋದನೆಗೊಳಗಾಗಡಬೇಡಿ. ಶಾಂತಿ ಕಾಪಾಡಿ” ಎಂದು ಮುಫ್ತಿ ಸಲ್ಮಾನ್ ಅಝ್ಹರಿ ಹೇಳಿದ್ದಾರೆ.

ಏನಿದು ಪ್ರಕರಣ?

ಕೆಲ ದಿನಗಳ ಹಿಂದೆ ಗುಜರಾತ್ ನ ಜುನಾಗಢದಲ್ಲಿ ದ್ವೇಷಭಾಷಣ ಮಾಡಿದ್ದರು ಎಂಬ ಆರೋಪ ಮುಫ್ತಿ ಸಲ್ಮಾನ್ ಅಝರಿ ಅವರ ಮೇಲೆ ಹೊರಿಸಲಾಗಿದೆ.

ಇದನ್ನು ಓದಿದ್ದೀರಾ? ಬೃಹತ್‌ ಸಾಲದ ಹೊರೆ; ಖಾಸಗಿ ಕಾರ್ಯಕ್ರಮಕ್ಕೂ ಸರ್ಕಾರಿ ಹಣ ಬಳಸಿದ ಅಸ್ಸಾಂ ಸಿಎಂ

ಅಝರಿ ಮತ್ತು ಇತರ ಇಬ್ಬರು ಧಾರ್ಮಿಕ ಮುಖಂಡರ ವಿರುದ್ಧ ಎಫ್‌ಐಆ‌ರ್ ದಾಖಲಿಸಲಾಗಿದೆ. ಜುನಾಗಢ ಬಿ. ಡಿವಿಷನ್ ಠಾಣೆಯ ಬಳಿ ಅಝರಿ ಅವರು ಜನವರಿ 31ರಂದು ಉದ್ರೇಕಕಾರಿ ಭಾಷಣ ಮಾಡಿದ್ದಾರೆ ಎನ್ನಲಾಗಿದೆ. ಈ ಭಾಷಣದ ವಿಡಿಯೊ ವೈರಲ್ ಆದ ಬಳಿಕ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಸ್ಥಳೀಯ ಸಂಘಟಕ ಮುಹಮ್ಮದ್ ಯೂಸುಫ್ ಮಲೀಕ್ ಮತ್ತು ಅಝೀಮ್ ಹಬೀಬ್ ವಡೇದರ ವಿರುದ್ಧವೂ ಐಪಿಸಿ ಸೆಕ್ಷನ್ 153ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...