ಸುರಂಗ ಘಟನೆ | ಕಾರ್ಮಿಕನ ಕುಟುಂಬದ ದುಸ್ಥಿತಿ ಬಗ್ಗೆ ವರದಿ ಮಾಡಿದ ಪತ್ರಕರ್ತರ ವಿರುದ್ಧ ಎಫ್ಐಆರ್!

Date:

ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಜಾರ್ಖಂಡ್‌ನ ಕಾರ್ಮಿಕನೋರ್ವನ ಕುಟುಂಬವೊಂದರ ದುಸ್ಥಿತಿಯನ್ನು ವರದಿ ಮಾಡಿದ್ದ ಇಬ್ಬರು ಪತ್ರಕರ್ತರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಜಾರ್ಖಂಡ್‌ನ ಸ್ಥಳೀಯ ಇಬ್ಬರು ಪತ್ರಕರ್ತರ ವಿರುದ್ಧ ಖುಂತಿ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಬ್ಲಾಕ್ ಡೆವಲಪ್‌ಮೆಂಟ್ ಅಧಿಕಾರಿ ಸ್ಮಿತಾ ನಾಗೇಸಿಯಾ ಮತ್ತು ವೃತ್ತ ಅಧಿಕಾರಿ ವಂದನಾ ಭಾರತಿ ಅವರ ದೂರಿನ ಆಧಾರದ ಮೇಲೆ ಕರ್ರಾ ಪೊಲೀಸ್ ಠಾಣೆಯಲ್ಲಿ ಪತ್ರಕರ್ತ ಸೋನು ಅನ್ಸಾರಿ ಮತ್ತು ಯೂಟ್ಯೂಬರ್ ಗುಂಜನ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತೋರ್ಪಾ ಉಪವಿಭಾಗೀಯ ಪೊಲೀಸ್ ಅಧಿಕಾರಿ ಓಂಪ್ರಕಾಶ್ ತಿವಾರಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಅವರು ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ ಮತ್ತು ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಅಧಿಕಾರಿಗಳು ಕಾರ್ಮಿಕನ ಮನೆಗೆ ಭೇಟಿ ನೀಡಿದಾಗ, ಇಬ್ಬರು ವರದಿಗಾರರು ಆಗಲೇ ಅಲ್ಲಿದ್ದರು. ಅವರು ಸತ್ಯವನ್ನು ಪರಿಶೀಲಿಸದೆ ರೆಕಾರ್ಡಿಂಗ್ ಪ್ರಾರಂಭಿಸಿದರು. ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಕೇಳಿದಾಗ ಅವರು ನಮ್ಮ ಕೆಲಸಕ್ಕೆ ಅಡ್ಡಿಪಡಿಸಿ ನಮ್ಮೊಂದಿಗೆ ಅನುಚಿತವಾಗಿ ವರ್ತಿಸಿದರು’ ಎಂದು ನ.30ರಂದು ದಾಖಲಿಸಿದ ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ.

SILKYARA

ಸಿಆರ್‌ಪಿಸಿಯ ನಿಬಂಧನೆಗಳ ಪ್ರಕಾರ ಇಬ್ಬರಿಗೂ ನೋಟಿಸ್ ನೀಡಲಾಗುವುದು ಮತ್ತು ಅವರ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿವಾರಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಸುರಂಗದಲ್ಲಿ ಸಿಕ್ಕಿಬಿದ್ದ ಕಾರ್ಮಿಕರು ಬದುಕಿದ್ದೇವೆಂದು ತಿಳಿಸಲು ಕಳಿಸಿದ್ದು ಈ ‘ಜಲಸಂದೇಶ’!

ಅನ್ಸಾರಿ ಮತ್ತು ಕುಮಾರ್ ತಮ್ಮ ವರದಿಗಳ ಮೂಲಕ ವಿಜಯ್ ಹೊರೋ ಕುಟುಂಬದ ದುಸ್ಥಿತಿಯನ್ನು ಎತ್ತಿ ತೋರಿಸಿದ್ದರು. ನ.12ರಂದು ಸುರಂಗ ಕುಸಿತದ ಎರಡು ವಾರಗಳ ನಂತರ ಆಡಳಿತವು ಬಡ ಕುಟುಂಬಕ್ಕೆ ಪಡಿತರವನ್ನು ಒದಗಿಸಿಲ್ಲ ಎಂದು ಅವರು ತಮ್ಮ ವರದಿಗಳಲ್ಲಿ ಆರೋಪಿಸಿದ್ದರು.

jharkhand cm 1
ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ ಕಾರ್ಮಿಕರೊಮದಿಗೆ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್

ಎಫ್‌ಐಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪತ್ರಕರ್ತ ಗುಂಜನ್‌, ‘ವಿಜಯ್‌ ಕುಟುಂಬದ ಪರಿಸ್ಥಿತಿಯನ್ನು ಹೊರಜಗತ್ತಿಗೆ ತಿಳಿಸಲು ವರದಿ ಮಾಡಿದ್ದೇವೆ. ಸುರಂಗ ಕುಸಿತವಾದ ಎರಡು ವಾರಗಳ ನಂತರ ಬಡ ಕುಟುಂಬಕ್ಕೆ ಅಧಿಕಾರಿಗಳು ಪಡಿತರ ಒದಗಿಸಿದ್ದರು’ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಚಾರ್‌ಧಾಮ್ ಸರ್ವಋತು ರಸ್ತೆ ಯೋಜನೆಯಡಿ ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಿಸುತ್ತಿದ್ದ ಸುರಂಗದ ಕೆಳಭಾಗಗಳು ನ.12ರಂದು ಕುಸಿದು 41 ಕಾರ್ಮಿಕರು ಸುರಂಗದೊಳಗೆ ಸಿಲುಕಿದ್ದರು. ಈ ಘಟನೆ ನಡೆದ 17 ದಿನಗಳ ನಂತರ ನ.28ರಂದು ಕಾರ್ಮಿಕರನ್ನು ರಕ್ಷಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...