ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ ಕಳೆದ ಮೂರು ತಿಂಗಳಿಂದ ಫಲಾನುಭವಿಗಳಿಗೆ ಪಾವತಿಯಾಗಿಲ್ಲ ಎಂದು ವೆಲ್ಫೇರ್ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್ ಹೇಳಿದ್ದಾರೆ.
ಜನರಿಗೆ ಭರವಸೆ ನೀಡಿದ ಕಾಂಗ್ರೆಸ್ ಸರ್ಕಾರ ಇದೀಗ ಮೂರು ತಿಂಗಳಿಂದ ಗೃಹಲಕ್ಷ್ಮಿ ಹಣ ಪಾವತಿಸದೆ ಇರುವುದರಿಂದ ಜನರು ಕಾದು ನೋಡುವಂತಾಗಿದೆ. ಇದು ಪ್ರಜಾಪ್ರಭುತ್ವದ ಹಾಗೂ ಮಹಿಳಾ ಸಬಲೀಕರಣದ ಧೋರಣೆಯ ವಿರುದ್ಧದ ನಡೆಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಂಚ ಗ್ಯಾರಂಟಿ ಯೋಜನೆಗೆ ಸಾಕಷ್ಟು ಹಣ ಇದೆ. ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಕಾಂಗ್ರೆಸ್ ಮುಖ್ಯಮಂತ್ರಿಗಳು ಸೇರಿದಂತೆ ನಾಯಕರು ಹೇಳುತ್ತಾರೆ. ಹಾಗಾದರೆ ಮೂರು ತಿಂಗಳಿಂದ ಹಣ ಪಾವತಿಸದೇ ಇರುವುದು ಯಾಕೆ ಎಂಬ ಅನುಮಾನ ಕಾಡುತ್ತದೆ. ಪ್ರತಿ ತಿಂಗಳು ನಿಗದಿಪಡಿಸಿದ ದಿನದಂದು ಗೃಹಲಕ್ಷ್ಮೀ ಹಣ ಪಾವತಿಸಬೇಕುʼ ಎಂದರು.
ಕೂಡಲೇ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಮೂವರು ತಿಂಗಳಿಂದ ಬಾಕಿ ಉಳಿಸಿಕೊಂಡ ಗೃಹಲಕ್ಷ್ಮೀ ಹಣವನ್ನು ಬಿಡುಗಡೆಗೊಳಿಸಿ ಕೊಟ್ಟ ಭರವಸೆ ಉಳಿಸಿಕೊಳ್ಳಬೇಕು ಎಂದು ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಈ ದಿನ ಸಂಪಾದಕೀಯ | ಪಾಠ ಕಲಿಯದ ಪ್ರಜ್ವಲ್, ಕಲಿಸಿದ್ದು ಯಾರಿಗೆ?





