ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆ ಸೇರ್ಪಡೆ: ಡಿಸಿಎಂ ಡಿ.ಕೆ.ಶಿವಕುಮಾರ್

Date:

ಮುಂಬರುವ ನಾಡಹಬ್ಬ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆಯನ್ನು ಸೇರ್ಪಡೆ ಮಾಡಲು ನಾವು ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಯವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ದ್ವಿತೀಯ ವರ್ಷದ ಹೊನಲು ಬೆಳಕಿನ ಮೂಳೂರು- ಅಡ್ಡೂರು ಜೋಡುಕೆರೆ ಕಂಬಳ ಸಮಾರಂಭದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದರು.

“ಈ ಬಾರಿಯ ದಸರಾ ಸಮಿತಿಯ ಉಪಾಧ್ಯಕ್ಷನಾಗಿದ್ದೇನೆ. ದಸರಾ ಹಬ್ಬದಲ್ಲಿ ಇನ್ನು ಮುಂದೆ ಕಂಬಳ ದಕ್ಷಿಣ ಕನ್ನಡದ ಪರಂಪರೆಯಗಿ ಮುಂದುವರೆಯಲಿದೆ. ಮೂರು ಎಕರೆ ಪ್ರದೇಶದಲ್ಲಿ ಕಂಬಳ ಕೆರೆ ನಿರ್ಮಾಣ ಮಾಡುವ ಆಲೋಚನೆಯಿದೆ. ಇದರಿಂದ 25 ಸಾವಿರಕ್ಕೂ ಹೆಚ್ಚು ‌ಜನ ಕಂಬಳ ವೀಕ್ಷಣೆ ಮಾಡಬಹುದು. ನೀವೆಲ್ಲರು ಸೇರಿದರೆ ಸರ್ಕಾರದಿಂದ ಸಹಕಾರ ನೀಡಲಾಗುವುದು. ಕಂಬಳವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಎಲ್ಲರು ಬೆಳೆಸೋಣ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಾಪನೆಯಾದ ಬ್ಯಾಂಕ್ ಗಳಿಂದ ಇಡೀ ದೇಶಕ್ಕೆ ಆರ್ಥಿಕ ಅಡಿಪಾಯ ಸೃಷ್ಟಿಯಾಯಿತು. ಸಾಂಸ್ಕೃತಿಕ, ಶೈಕ್ಷಣಿಕ, ಧಾರ್ಮಿಕವಾದ ಶ್ರೀಮಂತಿಕೆ ಯಾವ ಜಿಲ್ಲೆಯಲ್ಲಿಯೂ ಇಲ್ಲ. ಕಂಬಳದ ಮೂಲಕ ಇಡೀ ದೇಶದಲ್ಲಿಯೇ ಸಾಂಸ್ಕೃತಿಕವಾಗಿ ಸಾಕ್ಷಿಗುಡ್ಡೆಯನ್ನು ಕಂಬಳ ಕ್ರೀಡೆ ನಿರ್ಮಾಣ ಮಾಡಿದೆ” ಎಂದರು.

“ಈ ಜಿಲ್ಲೆಯ ಧಾರ್ಮಿಕಯೇ ನಿಮ್ಮ ಶಕ್ತಿ. ಹಲವಾರು ಎಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಈ ಜಿಲ್ಲೆಯಲ್ಲಿವೆ. ಈ ಜಿಲ್ಲೆಯ ಯುವಕರ ಬುದ್ಧಿವಂತಿಕೆ ಬೇರೆ ದೇಶಗಳಿಗೆ ಹೋಗುತ್ತಿದೆ. ಇದು ತಪ್ಪಬೇಕು. ಈ ಜಿಲ್ಲೆಗೆ ಪ್ರವಾಸಿ ಕ್ಷೇತ್ರದಲ್ಲಿ ಅತ್ಯಂತ ಅವಕಾಶವಿದೆ. ಇತ್ತೀಚೆಗೆ ಸದನದಲ್ಲಿ ಮಾತನಾಡುತ್ತ ಈ ಭಾಗದ ಶಾಸಕರ ಜೊತೆ ಚರ್ಚೆ ಮಾಡುವಂತೆ ತಿಳಿಸಿದ್ದೆ. ಇಡೀ ದೇಶದ ಯಾವ ರಾಜ್ಯಗಳಿಗೂ ಇಲ್ಲದ ಅತ್ಯಂತ ಉದ್ದದ ಕರಾವಳಿ ನಿಮಗಿದೆ. ಸದ್ಯದಲ್ಲಿಯೇ ಎರಡು ಜಿಲ್ಲೆಗಳ ಶಾಸಕರ ಸಭೆ ನಡೆಸಲಾಗುವುದು” ಎಂದು ಹೇಳಿದರು.

“ಪ್ರವಾಸೋದ್ಯಮ, ಧಾರ್ಮಿಕ ಕ್ಷೇತ್ರದಲ್ಲಿ ಹೊಸ ಪಾಲಿಸಿಗಳನ್ನು ತಂದು ಯುವಕರ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು. ಇದು ಒಂದು ಪಕ್ಷದ ಜಾತಿಯ,‌ ಧರ್ಮದ ವಿಚಾರವಲ್ಲ. ಇಡೀ ಜಿಲ್ಲೆಯ ಜನರ ಬದುಕಿನ ವಿಚಾರ. ನೀರಿಗೆ, ಭೂಮಿಗೆ, ಬೆಳಕಿಗೆ ಯಾವುದೇ ಜಾತಿಯಿಲ್ಲ” ಎಂದರು.

“ಮನುಷ್ಯ ಸೋಲುವುದು ಕಲಿತಾಗ ಮಾತ್ರ ಗೆಲ್ಲಲು ಸಾಧ್ಯ. ಕ್ರೀಡೆಯಲ್ಲಿ ಮನುಷ್ಯನ ಗಾತ್ರ ಮುಖ್ಯವಲ್ಲ, ಹೃದಯವಂತಿಕೆ ಮುಖ್ಯ. ಕೋಣಗಳ ಮನಸ್ಸನ್ನು ಗೆದ್ದರೆ ಮಾತ್ರ ಸ್ಪರ್ಧಿ ಕಂಬಳ ಗೆಲ್ಲಲು ಸಾಧ್ಯ. ಕಂಬಳಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲು ನಾವು ಬದ್ದ. ಕಂಬಳಕ್ಕೆ ಯಾವುದೇ ಜಾತಿ,‌ಧರ್ಮವಿಲ್ಲ ಇಲ್ಲಿರುವುದು ಧಾರ್ಮಿಕ ಆಚರಣೆ, ಕ್ರೀಡೆ ಹಾಗೂ ಸಂಸ್ಕೃತಿ” ಎಂದು ಹೇಳಿದರು.

“ಕಳೆದ ವರ್ಷ ಶಾಸಕರಾದ ಅಶೋಕ್ ರೈ ಅವರು ಬೆಂಗಳೂರು ಕಂಬಳವನ್ನು ಆಯೋಜಿಸಿ ಇತಿಹಾಸ ಸೃಷ್ಟಿಸಿದ್ದರು. ಇನಾಯತ್ ಅಲಿ ಅವರು ಸರ್ವಧರ್ಮಗಳನ್ನು ಸೇರಿಸಿ ಕಂಬಳದಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...