ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ‘ಸೆಟಲ್‌ಮೆಂಟ್’ ಕೇಂದ್ರಗಳಾಗಿವೆ: ಹೈಕೋರ್ಟ್ ಅಸಮಾಧಾನ

Date:

ಪೊಲೀಸ್ ಠಾಣೆಗಳಲ್ಲಿ ಸಿವಿಲ್‌ ವ್ಯಾಜ್ಯಗಳನ್ನು ‘ಸೆಟಲ್‌ಮೆಂಟ್‌’ ಮಾಡುವ ಪೊಲೀಸರ ಧೋರಣೆಯನ್ನು ಮತ್ತೊಮ್ಮೆ ಕಟುವಾಗಿ ಟೀಕಿಸಿರುವ ಹೈಕೋರ್ಟ್‌, “ಠಾಣೆಗಳು ರಿಯಲ್‌ ಎಸ್ಟೇಟ್‌ ದಂಧೆಯ ಒಪ್ಪಂದ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ” ಎಂದು ಅಸಮಾಧಾನ ಹೊರಹಾಕಿದೆ.

‘ಈ ಬಗ್ಗೆ ಕೋರ್ಟ್ ಪದೇ ಪದೇ ಸೂಚನೆ ನೀಡುತ್ತಿದ್ದರೂ ಪೊಲೀಸ್ ಠಾಣೆಗಳು ಮಾತ್ರ ನ್ಯಾಯಾಲಯದ ಸೂಚನೆಯನ್ನು ಉಲ್ಲಂಘಿಸುತ್ತಲೇ ಇವೆ’ ಎಂದು ಖಡಕ್ ಅಭಿಪ್ರಾಯ ನೀಡಿದೆ.

‘ಖಾಸಗಿ ವ್ಯಕ್ತಿಗಳು ನನ್ನಿಂದ ಹಣ ವಸೂಲಿ ಮಾಡಲು ಪ್ರಯತ್ನಿಸುತ್ತಿದ್ದು, ಅದಕ್ಕೆ ಬಾಣಸವಾಡಿ ಠಾಣಾ ಪೊಲೀಸರು ನೆರವು ನೀಡುತ್ತಿದ್ದಾರೆ’ ಎಂದು ಆರೋಪಿಸಿ ಬೆಂಗಳೂರಿನ ಗೆದ್ದಲಹಳ್ಳಿ ನಿವಾಸಿ ಜುವಿತ್ತಾ ರವಿ ಎಂಬುವವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಹೀಗೆ ತರಾಟೆಗೆ ತೆಗೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಣಸವಾಡಿ ಎಸಿಪಿ ಖುದ್ದು ಹಾಜರಾಗಲು ಸೂಚಿಸಿದ ಹೈಕೋರ್ಟ್‌
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಸಿವಿಲ್‌ ವ್ಯಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅರ್ಜಿದಾರರಿಗೆ ಪೊಲೀಸರು ವಿನಾ ಕಾರಣ ಕಿರುಕುಳ ನೀಡುತ್ತಿದ್ದಾರೆ’ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್‌, “ಠಾಣೆಗಳು ರಿಯಲ್‌ ಎಸ್ಟೇಟ್‌ ವ್ಯವಹಾರಸ್ಥರ ಸೆಟಲ್‌ಮೆಂಟ್‌ ಮಾಡುವ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ. ಸಿವಿಲ್‌ ವ್ಯಾಜ್ಯಗಳಲ್ಲಿ ಮಧ್ಯಪ್ರವೇಶ ಮಾಡದಂತೆ ಸುಪ್ರೀಂಕೋರ್ಟ್‌ ಹಾಗೂ ಹೈಕೋರ್ಟ್‌ ಪದೇ ಪದೇ ಆದೇಶಿಸಿದ್ದರೂ ಪೊಲೀಸರು ಮಾತ್ರ ಅದನ್ನು ಉಲ್ಲಂಘಿಸುತ್ತಲೇ ಇದ್ದಾರೆ” ಎಂದು ಅಸಮಾಧಾನ ಹೊರಹಾಕಿತು.

ಅಲ್ಲದೆ, ಪ್ರಕರಣ ಕುರಿತಂತೆ ಬಾಣಸವಾಡಿ ಸಹಾಯಕ ಪೊಲೀಸ್‌ ಆಯುಕ್ತರು ನವೆಂಬರ್ 29ರಂದು ಮಧ್ಯಾಹ್ನ 2.30ಕ್ಕೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ವಿವರಣೆ ನೀಡಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಏನಿದು ಪ್ರಕರಣ?
ಕೆಲವು ಖಾಸಗಿ ವ್ಯಕ್ತಿಗಳು ನನ್ನಿಂದ 12 ಲಕ್ಷ ಹಣ ವಸೂಲಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ಸಂಬಂಧ ಬಾಣಸವಾಡಿ ಪೊಲೀಸರು 2023ರ ನವೆಂಬರ್ 21ರಂದು ಠಾಣೆಗೆ ಕರೆದೊಯ್ದು ಹಣ ಪಾವತಿಸಲು ಸೂಚಿಸುತ್ತಿದ್ದರು.

ನವೆಂಬರ್ 25ರಂದು ಚೆಕ್‌ ಸಮೇತ ಠಾಣೆಗೆ ಹಾಜರಾಗಿ ಹಣ ಪಾವತಿಸುವಂತೆ ಸೂಚಿಸಿದ್ದಾರೆ. ಕೋರ್ಟಿನಲ್ಲಿ ಆಗಬೇಕಾದ ಕಾರ್ಯವನ್ನು ಪೊಲೀಸರೇ ಮುಂದಾಳತ್ವ ವಹಿಸಿ ಮಾಡುತ್ತಿದ್ದಾರೆ. ಇದು ಗಂಭೀರ ಪ್ರಕರಣವಾಗಿದ್ದು, ಪೊಲೀಸರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ.

ಸಿವಿಲ್‌ ಹಾಗೂ ಹಣಕಾಸಿಗೆ ಸಂಬಂಧಿಸಿದ ಪ್ರಕರಣಗಳನ್ನು ಠಾಣೆಯಲ್ಲಿ ‘ಸೆಟಲ್‌ಮೆಂಟ್‌’ ಮಾಡುವ ಪೊಲೀಸರ ಕಾರ್ಯವೈಖರಿಯಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುತ್ತಿದೆ. ಆದ್ದರಿಂದ ಪ್ರಕರಣ ಸಂಬಂಧ ಅರ್ಜಿದಾರರು ನವೆಂಬರ್ 22ರಂದು ನೀಡಿರುವ ಮಾಹಿತಿ ಪರಿಗಣಿಸಿ, ಕಾನೂನು ಪ್ರಕಾರ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರ ಮತ್ತು ನಗರ ಪೊಲೀಸ್‌ ಆಯುಕ್ತರಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.

ಅರ್ಜಿ ಇತ್ಯರ್ಥವಾಗುವರೆಗೆ ಅರ್ಜಿದಾರರರು ಅಥವಾ ಅವರ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಮಧ್ಯಂತರ ಮನವಿ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...