ಕುಣಿಗಲ್ ರಸ್ತೆಯ ಕೆಳ ಸೇತುವೆ ಬಂದ್ : ಕಾಮಗಾರಿ ಸ್ಥಗಿತಗೊಳಿಸಲು ಒತ್ತಾಯ

Date:

ತುಮಕೂರು ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ ಕುಣಿಗಲ್ ರಸ್ತೆಯಲ್ಲಿರುವ ರೈಲ್ವೆ ಅಂಡರ್ ಪಾಸ್ ದುರಸ್ಥಿ ಕಾಮಗಾರಿ ಮಾಡುವ ಉದ್ದೇಶದಿಂದ ಮಳೆಗಾಲದಲ್ಲಿ ಒಂದು ತಿಂಗಳ ಕಾಲ ಈ ಮಾರ್ಗ ಬಂದ್ ಮಾಡುವ ಜಿಲ್ಲಾಡಳಿತ ನಿರ್ಧಾರದಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಲಿದೆ. ಕೂಡಲೇ ಜಿಲ್ಲಾಡಳಿತ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಮುಖಂಡ ಹೆತ್ತೇನಹಳ್ಳಿ ಮಂಜುನಾಥ್ ಒತ್ತಾಯಿಸಿದ್ದಾರೆ.

ಕುಣಿಗಲ್ ಅಂಡರ್ ಪಾಸ್ ದುರಸ್ಥಿ ಕಾಮಗಾರಿಯಿಂದಾಗಿ ಔಟರ್ ರಿಂಗ್ ರೋಡ್‌ನಲ್ಲಿ ತುಂಬಾ ವಾಹನಗಳು ಸಂಚಾರಿಸುವ ಕಾರಣ ಮಕ್ಕಳನ್ನು ಶಾಲೆಗೆ ಬಿಡಲು, ವಯೋವೃದ್ಧರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತುಂಬಾ ಸಮಸ್ಯೆಯಾಗುತ್ತಿದೆ. ಜಿಲ್ಲಾಡಳಿತ ಮುಂದಾಲೋಚನೆ ಇಲ್ಲದೆ ನಗರದ ಅಮಾನಿಕೆರೆ ಕೋಡಿ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿ ಸಲುವಾಗಿ ಶಿರಾ ಗೇಟ್ ರಸ್ತೆ ಬಂದ್ ಮಾಡಿದ್ದಾಗ ಸಂಚಾರ ಮಾಡಲು ಜನರು ಪರದಾಡಿದ್ದು ಮಾಸುವ ಮುನ್ನವೇ ಸಾರ್ವಜನಿಕರ ಅಭಿಪ್ರಾಯ ಪಡೆಯದೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಶಾಲೆ, ಕಾಲೇಜುಗಳು ಆರಂಭವಾಗಿದ್ದು ಮಕ್ಕಳನ್ನು ಶಾಲೆಗೆ ಬಿಡಲು ತೊಂದರೆಯಾಗುತ್ತದೆ. ಇಂತಹ ಕಾಮಗಾರಿಗಳನ್ನು ಶಾಲೆ, ಕಾಲೇಜುಗಳು ರಜೆ ಇರುವಾಗ ಮತ್ತು ಮಳೆ ಇಲ್ಲದ ಸಂದರ್ಭದಲ್ಲಿ ಮಾಡಿದರೆ ಸಾರ್ವಜನಿಕರಿಗೆ ಅನುಕೂಲಕರವಾಗಿರುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
img 20250501 wa00084641945590644986442

ಈ ಹಿನ್ನೆಲೆಯಲ್ಲಿ ಸುಮಾರ 50 ಲಕ್ಷ ರೂ. ವೆಚ್ಚದಲ್ಲಿ ಅಂಡರ್‌ಪಾಸ್ ರಸ್ತೆ, ಚರಂಡಿ ವ್ಯವಸ್ಥೆ, ಫುಟ್‌ಪಾತ್ ಹಾಗೂ ರೈಲಿಂಗ್ಸ್ ನವೀಕರಣ ಮಾಡುವುದು, ಗ್ರಾಂಟಿಗ್ಸ್ ಅಳವಡಿಸುವುದು, ರಸ್ತೆ ದುರಸ್ಥಿ, ತಡೆಗೋಡೆ ದುರಸ್ಥಿ, ಚರಂಡಿ ದುರಸ್ಥಿ ಕಾಮಗಾರಿ, ಆರ್‌ಸಿಸಿ ರೈಲಿಂಗ್ಸ್ ಅಳವಡಿಕೆ ಸೇರಿದಂತೆ ಹಲವು ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗವನ್ನು ಬಂದ್ ಮಾಡಲಾಗಿದೆ. ಸಾರ್ವಜನಿಕರ ಸುಗಮ ಸಂಚಾರದ ದೃಷ್ಠಿಯಿಂದ ಕಾಮಗಾರಿಯನ್ನು ದಸರ ರಜೆ, ಮತ್ತು ಬೇಸಿಗೆ ರಜೆ ಸಮಯದಲ್ಲಿ ಮಾಡಬೇಕು. ಮಳೆಗಾಲದಲ್ಲಿ ಇಂತಹ ಕಾಮಗಾರಿ ಮಾಡಬಾರದು ಎಂದರು.

ಒಂದು ತಿಂಗಳಲ್ಲಿ ಕಾಮಗಾರಿ ಮುಗಿಸುವುದಾಗಿ ಹೇಳಿದ್ದಾರೆ. ಅದು ಸಾಧ್ಯವೇ ಎಂಬುದನ್ನು ಜಿಲ್ಲಾಡಳಿತ ಸ್ಪಸ್ಟಪಡಿಸಬೇಕು. ಕುಣಿಗಲ್, ಹೆಬ್ಬೂರು, ನಾಗವಲ್ಲಿ, ಗೂಳೂರು ಸೆರಿದಂತೆ ತುಮಕೂರು ನಗರದ ವಿವಿಧ ಬಡಾವಣೆಯ ನಾಗರಿಕರಿಗೆ ಮಳೆಗಾಲದಲ್ಲಿ ಈ ಕಾಮಾಗಾರಿ ಮಾಡುವುದರಿಂದ ತೀವ್ರ ತೊಂದರೆಯಾಗುತ್ತದೆ. 

ಅಂಡರ್ ಪಾಸ್ ಕಾಮಗಾರಿಯಿಂದಾಗಿ ಒಂದು ತಿಂಗಳ ಕಾಲ ಭಾನುವಾರ ಬೆಳಿಗ್ಗೆಯಿಂದ ಈ ಅಂಡರ್‌ಪಾಸ್ ಬಂದ್ ಮಾಡಲಾಗಿದೆ. ಕುಣಿಗಲ್ ಕಡೆಗೆ ಹೋಗುವ ಮತ್ತು ಕುಣಿಗಲ್ ಕಡೆಯಿಂದ ತುಮಕೂರು ನಗರಕ್ಕೆ ಬರುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಅದರೆ ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಪಡೆಯದೆ ಏಕಮುಖವಾಗಿ ಈ ರೀತಿ ನಿರ್ಧಾರ ಮಾಡುವುದು ಸಾರ್ವಜನಿಕ ಹಿತದೃಷ್ಠಿಯಿಂದ ಒಳ್ಳೆಯದಲ್ಲ.ಕೂಡಲೇ ಈ ಭಾಗದ ಸಾರ್ವಜನಿಕರ ಸಭೆ ನಡೆಸಿ ಅಭಿಪ್ರಾಯ ಪಡೆದು ಕಾಮಗಾರಿ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...