ತೀರ್ಪು ತಪ್ಪಾಗಿದೆ ಎಂದು ನೇರವಾಗಿ ರದ್ದುಪಡಿಸುವ ಅಧಿಕಾರ ಶಾಸಕಾಂಗಕ್ಕೆ ಇಲ್ಲ: ಸಿಜೆಐ ಚಂದ್ರಚೂಡ್

Date:

ನ್ಯಾಯಾಲಯಗಳು ನೀಡುವ ತೀರ್ಪನ್ನು ನೇರವಾಗಿ ರದ್ದುಗೊಳಿಸುವ ಅಧಿಕಾರ ಶಾಸಕಾಂಗಕ್ಕೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹೇಳಿಕೆ ನೀಡಿದ್ದಾರೆ.

‘ಹಿಂದೂಸ್ಥಾನ್ ಟೈಮ್ಸ್’ ಹಮ್ಮಿಕೊಂಡಿದ್ದ ನಾಯಕತ್ವ ಶೃಂಗಸಭೆಯಲ್ಲಿ ಮಾತನಾಡಿದ ಅವರು, ‘ನ್ಯಾಯಾಲಯಗಳು ನೀಡುವ ತೀರ್ಪಿನಲ್ಲಿನ ನ್ಯೂನತೆ ಸರಿಪಡಿಸುವುದಕ್ಕಾಗಿ ಹೊಸ ಕಾನೂನು ರೂಪಿಸಬಹುದು. ಈ ವಿಷಯದಲ್ಲಿ ನೇರವಾಗಿ ಅಧಿಕಾರ ಚಲಾಯಿಸಲು ಶಾಸಕಾಂಗಕ್ಕೆ ಅವಕಾಶ ಇಲ್ಲ’ ಎಂದು ಸಿಜೆಐ ತಿಳಿಸಿದ್ದಾರೆ.

‘ತಾವು ನೀಡಿದ ತೀರ್ಪಿನ ಬಗ್ಗೆ ಸಮಾಜ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬ ಬಗ್ಗೆ ನ್ಯಾಯಮೂರ್ತಿಗಳು ಚಿಂತಿಸುವುದಿಲ್ಲ. ಇದು ಚುನಾಯಿತ ಸರ್ಕಾರ ಹಾಗೂ ನ್ಯಾಯಾಂಗದ ನಡುವೆ ಇರುವ ಸ್ಪಷ್ಟವಾದ ವ್ಯತ್ಯಾಸವಾಗಿದೆ’ ಎಂದು ಚಂದ್ರಚೂಡ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ನ.​ 24ರೊಳಗೆ ಕಾಂತರಾಜು ಜಾತಿ ಗಣತಿ ವರದಿ ಸಲ್ಲಿಸುತ್ತೇನೆ: ಜಯಪ್ರಕಾಶ್​ ಹೆಗ್ಡೆ

ನ್ಯಾಯಾಲಯಗಳು ತೀರ್ಪು ಪ್ರಕಟಿಸಿದ ಬಳಿಕ ಶಾಸಕಾಂಗ ಏನನ್ನು ಮಾಡಬೇಕು ಮತ್ತು ಯಾವುದನ್ನು ಮಾಡಬಾರದು ಎಂಬ ಬಗ್ಗೆ ಸ್ಪಷ್ಟವಾದ ಗೆರೆ ಎಂಬುದು ಇದೆ. ನ್ಯಾಯಾಲಯವು ಯಾವುದೇ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಗುರುತಿಸುವ ನ್ಯೂನತೆಯನ್ನು ಸರಿಪಡಿಸಲಷ್ಟೇ ಕಾನೂನು ರೂಪಿಸುವ ಅಧಿಕಾರ ಶಾಸಕಾಂಗಕ್ಕೆ ಇದೆ ಎಂದು ಹೇಳಿದರು.

‘ತೀರ್ಪು ತಪ್ಪಾಗಿದೆ ಎಂದು ಶಾಸಕಾಂಗ ಸಮರ್ಥಿಸಿಕೊಂಡು ಅದನ್ನು ನೇರವಾಗಿ ರದ್ದುಪಡಿಸುವ ಅಧಿಕಾರ ಇಲ್ಲ. ಯಾವುದೇ ಪ್ರಕರಣ ಕುರಿತು ನಿರ್ಣಯ ಕೈಗೊಳ್ಳುವಾಗ ಸಂವಿಧಾನದ ನೀತಿ ನಿಯಮಗಳನ್ನಷ್ಟೇ ನ್ಯಾಯಮೂರ್ತಿಗಳು ಅನುಸರಿಸುತ್ತಾರೆ. ಸಾರ್ವಜನಿಕ ನೀತಿ-ನಿಯಮಗಳನ್ನು ಪರಿಗಣಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸ್ಪಷ್ಟಪಡಿಸಿದರು.

ಇನ್ನೂ ನಮಗೆ ಒಂದೂವರೆ ತಿಂಗಳುಗಳ ಕಾಲ ಅವಕಾಶವಿದೆ. ಈ ವರ್ಷಾಂತ್ಯಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಕನಿಷ್ಠ 72 ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡಲು ನಿರ್ಧರಿಸಿದ್ದೇವೆ ಎಂದು ಇದೇ ವೇಳೆ ತಿಳಿಸಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ , ಸಮಾನವಾದ ಅವಕಾಶಗಳು ಸಿಕ್ಕಿದರೆ ಹೆಚ್ಚಿನ ಮಹಿಳೆಯರು ಕೂಡ ನ್ಯಾಯಾಂಗ ಕ್ಷೇತ್ರಕ್ಕೂ ಪ್ರವೇಶಿಸುತ್ತಾರೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...