ಮಹಾರಾಷ್ಟ್ರ | ಛತ್ರಿ ಹಿಡಿದುಕೊಂಡೇ ಬಸ್ ಚಲಾಯಿಸಿದ ಸರ್ಕಾರಿ ಚಾಲಕ : ವಿಡಿಯೋ ವೈರಲ್

Date:

  • ‘ಆಹೇರಿ ಡಿಪೋಗೆ ಸೇರಿದ ಬಸ್‌’ ಎಂದು ವಿಡಿಯೋ ಹಂಚಿಕೊಂಡ ಮಹಾರಾಷ್ಟ್ರ ಕಾಂಗ್ರೆಸ್
  • ಕಳಪೆ ಬಸ್‌ಗಳು ಸಾಕಷ್ಟಿದೆ ಎಂದು ದೂರಿದ ನೆಟ್ಟಿಗರು; ಶಿಂಧೆ ಸರ್ಕಾರದ ವಿರುದ್ಧ ಆಕ್ರೋಶ

ಮಹಾರಾಷ್ಟ್ರದ ಸರ್ಕಾರಿ ಬಸ್ಸೊಂದರ ಚಾಲಕ ಛತ್ರಿ ಹಿಡಿದುಕೊಂಡೇ ಬಸ್ ಚಲಾಯಿಸುತ್ತಿರುವ ಆಘಾತಕಾರಿ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಸೋರುತ್ತಿರುವ ಮೇಲ್ಛಾವಣಿಯಿಂದ ತಪ್ಪಿಸಿಕೊಳ್ಳಲು ಬಸ್ ಚಾಲಕ ಒಂದು ಕೈಯಲ್ಲಿ ಛತ್ರಿ ಮತ್ತು ಇನ್ನೊಂದು ಕೈಯಲ್ಲಿ ಸ್ಟೀರಿಂಗ್ ಹಿಡಿದು ಬಸ್ ಓಡಿಸುತ್ತಿರುವುದು ದಾಖಲಾಗಿದೆ.

ಪ್ರಯಾಣಿಕರಿದ್ದಾಗಲೇ ಚಾಲಕ ಈ ರೀತಿ ಚಲಾಯಿಸಿರುವುದು ವರದಿಯಾಗಿದೆ. ಗಡ್‌ಚಿರೋಲಿ ಜಿಲ್ಲೆಯ ಆಹೇರಿ ಡಿಪೋಗೆ ಸೇರಿದ ಬಸ್‌ ಎಂದು ತಿಳಿದುಬಂದಿದ್ದು, ಸರ್ಕಾರಿ ಬಸ್‌ನ ಈ ಅವ್ಯವಸ್ಥೆಗೆ ನೆಟ್ಟಿಗರು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಟ್ವೀಟ್ ಮಾಡಿರುವ ಮಹಾರಾಷ್ಟ್ರ ಕಾಂಗ್ರೆಸ್, ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರನ್ನು ದೇವರೇ ಕಾಪಾಡಬೇಕು ಎಂದು ತಿಳಿಸಿದೆ.

ಈ ವಿಡಿಯೋ ವೈರಲ್ ಆದ ಬಳಿಕ ಪ್ರತಿಕ್ರಿಯಿಸಿರುವ ಹಲವರು, ಈ ದೃಶ್ಯವು ಸಾರ್ವಜನಿಕ ಸಾರಿಗೆಯನ್ನು ನಿರ್ವಹಿಸುವಲ್ಲಿ ಸರ್ಕಾರದ ನಿರ್ಲಕ್ಷ್ಯ ಎಷ್ಟಿದೆ ಎಂಬುದಕ್ಕೆ ಸಾಕ್ಷಿ ಎಂದು ಶಿಂಧೆ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಅಲ್ಲದೇ, ಇಂತಹ ದುಸ್ಥಿತಿಯಲ್ಲಿ ಬಸ್ ಚಲಾಯಿಸಿ ಏನಾದರೂ ಅವಘಡ ಸಂಭವಿಸಿದರೆ ಯಾರು ಹೊಣೆ? ಜನರ ಜೀವದ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯ ಏಕೆ ಎಂದು ಪ್ರಶ್ನಿಸಿದ್ದಾರೆ.

ಕೆಲ ದಿನಗಳ ಹಿಂದೆ, ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನ ಮೇಲ್ಛಾವಣಿಯು ಚಲಿಸುತ್ತಿರುವಾಗಲೇ ಹಾರುತ್ತಿದ್ದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಬಸ್‌ಗಳನ್ನೇ ಸಾರ್ವಜನಿಕ ಪ್ರಯಾಣಕ್ಕೆ ಬಳಸಲಾಗುತ್ತಿದೆ ಎಂಬ ದೂರುಗಳು ಹೆಚ್ಚುತ್ತಿವೆಯಾದರೂ, ಬಿಜೆಪಿ ಹಾಗೂ ಎನ್‌ಸಿಪಿ ಬೆಂಬಲಿತ ಶಿವಸೇನೆಯ ಶಿಂಧೆ ಸರ್ಕಾರ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...