ರಾಜಸ್ಥಾನ | ಸರ್ಕಾರಿ ವಾಹನದಲ್ಲಿ ಬಂದು ಮುಸ್ಲಿಂ ಯುವಕರ ಮೇಲೆ ಗುಂಪು ಹಲ್ಲೆ : ಓರ್ವ ಮೃತ್ಯು

Date:

  • ಕಡಿದಿದ್ದ ಮರವನ್ನು ವಾಹನಕ್ಕೆ ತುಂಬಲು ಬಂದಿದ್ದಾಗ ಘಟನೆ
  • ರಾಜಸ್ಥಾನದ ಆಲ್ವಾರ್‌ನಲ್ಲಿ ಘಟನೆ; 10 ಮಂದಿಯ ವಿರುದ್ಧ ಎಫ್‌ಐಆರ್

ರಾಜಸ್ಥಾನದ ಆಲ್ವಾರ್‌ನಲ್ಲಿ ಎಂಟರಿಂದ ಹತ್ತು ಮಂದಿಯಿದ್ದ ಗುಂಪೊಂದು ಸರ್ಕಾರಿ ವಾಹನದಲ್ಲಿ ಬಂದು ಮೂವರು ಮುಸ್ಲಿಂ ಯುವಕರ ಮೇಲೆ ದೊಣ್ಣೆ ಮತ್ತು ರಾಡ್‌ಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಓರ್ವ ಯುವಕ ಮೃತಪಟ್ಟಿದ್ದು, ಮೃತಪಟ್ಟವನನ್ನು ವಸೀಮ್ (27) ಎಂದು ಗುರುತಿಸಲಾಗಿದೆ.

ಮೂವರು ಯುವಕರು ಕಡಿದು ಹಾಕಲಾಗಿದ್ದ ಮರವೊಂದನ್ನು ಪಿಕಪ್‌ನಲ್ಲಿ ತುಂಬಲು ಹೋಗಿದ್ದ ವೇಳೆ ಅರಣ್ಯ ಇಲಾಖೆ ವಾಹನ ಹಾಗೂ ಜೆಸಿಬಿಯಲ್ಲಿ ಅಲ್ಲಿಗೆ ಆಗಮಿಸಿದ ಗುಂಪೊಂದು, ‘ಮುಲ್ಲೋಂಕೊ ಮಾರೋ, ಮುಲ್ಲೊಂಕೋ ಕಾಟೋ'(ಮುಸಲ್ಮಾನರಿಗೆ ಹೊಡೆಯಿರಿ, ಮುಸಲ್ಮಾನರನ್ನು ಕೊಲ್ಲಿ) ಎಂದು ಬೊಬ್ಬೆ ಹೊಡೆಯುತ್ತಾ ಹಲ್ಲೆ ನಡೆಸಿದ್ದಾರೆ ಎಂದು ಮುಸ್ಲಿಂ ಕುಟುಂಬದ ಸಂಬಂಧಿಕರು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಲ್ವಾರ್ ಜಿಲ್ಲೆಯ ಹರ್ಸೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಸೀಮ್ ಹಾಗೂ ಆತನ ಇಬ್ಬರು ಸಹಚರರು ಮನೆ ಮಾಲೀಕನ ಒಪ್ಪಿಗೆಯೊಂದಿಗೆ ಬಾನ್ಸೂರಿಗೆ ತೆರಳಿದ್ದರು. ಮನೆಯ ಹೊರಗೆ ಕಡಿದು ಹಾಕಿದ್ದ ಮರಗಳನ್ನು ವಾಹನಕ್ಕೆ ತುಂಬಲು ಹೋಗಿದ್ದರು. ಈ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ತಿರುಗುತ್ತಿದ್ದಾರೆ. ಈಗ ಮರಗಳನ್ನು ತೆಗೆದುಕೊಂಡು ಹೋಗಬೇಡಿ ಎಂದು ಕೆಲವು ಗ್ರಾಮಸ್ಥರು ಮಾಹಿತಿ ನೀಡಿದ್ದರು. ಹಾಗಾಗಿ, ಖಾಲಿ ವಾಹನದಲ್ಲಿ ಮತ್ತೆ ಹಿಂತಿರುಗುವಾಗ ಬಂದ ಗುಂಪು, ವಿನಾಕಾರಣ ದಾಳಿ ಮಾಡಿದ್ದಾರೆ ಎಂದು ಕುಟುಂಬಿಕರು ತಿಳಿಸಿದ್ದಾರೆ.

ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯೂ ಭಾಗಿಯಾಗಿದ್ದಾರೆ ಎಂಬುದನ್ನು ಪೊಲೀಸರು ಇನ್ನೂ ಖಚಿತಪಡಿಸಿಲ್ಲ. ಆದರೆ ವಾಹನದ ನೋಂದಣಿ ಸಂಖ್ಯೆಯನ್ನು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಕುಟುಂಬಸ್ಥರು ದಾಖಲಿಸಿದ್ದಾರೆ.

ಪೊಲೀಸರು ಹೇಳಿದ್ದೇನು?
ಜಗಳದ ಮಾಹಿತಿಯ ಮೇರೆಗೆ ಪೊಲೀಸರು ಗ್ರಾಮಕ್ಕೆ ತಲುಪಿದಾಗ ಅಲ್ಲಿ ಮೂವರು ಗಾಯಗೊಂಡಿರುವುದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೂವರನ್ನೂ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಯುವಕ ವಸೀಮ್‌ನನ್ನು ಕೊಟ್‌ಪುಟ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

ಘಟನೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದರು. ಈಗಾಗಲೇ ಹತ್ತು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿ, ಎರಡು-ಮೂರು ಶಂಕಿತರನ್ನು ವಶಕ್ಕೆ ಪಡೆದಿದ್ದೇವೆ. ಅವರನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...