ರಾಜಸ್ಥಾನ | ಬೈಕ್ ಅಪಘಾತ : ಮುಸ್ಲಿಂ ಎನ್ನುವ ಕಾರಣಕ್ಕೆ ಯುವಕನನ್ನು ಬಡಿದುಕೊಂದ ಗುಂಪು

Date:

ಎರಡು ಬೈಕ್ ಪರಸ್ಪರ ಅಪಘಾತವಾದ ಬಳಿಕ ಮುಸ್ಲಿಂ ಯುವಕನೋರ್ವನನ್ನು ಗುಂಪೊಂದು ದೊಣ್ಣೆ ಹಾಗೂ ರಾಡ್‌ಗಳಿಂದ ಬಡಿದು ಕೊಂದಿರುವ ದಾರುಣ ಘಟನೆ ರಾಜಸ್ಥಾನದ ಜೈಪುರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಹಲ್ಲೆಗೊಳಗಾಗಿ ಮೃತಪಟ್ಟ ಮುಸ್ಲಿಂ ಯುವಕನನ್ನು ಜೈಪುರದ ರಾಮಗಂಜ್ ಬಜಾರ್‌ನ ಮುಹಮ್ಮದ್ ಮಜೀದ್ ಎಂಬವರ ಪುತ್ರ ಮುಹಮ್ಮದ್ ಇಕ್ಬಾಲ್(18) ಎಂದು ಗುರುತಿಸಲಾಗಿದೆ.

ಅಪಘಾತ ಬಳಿಕ ಉಂಟಾದ ವಾಗ್ವಾದದ ಬಳಿಕ ಗುಂಪಿನಲ್ಲಿ ಬಂದ ಜನರು, ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಟುಂಬದವರ ನೀಡಿರುವ ಮಾಹಿತಿಯ ಪ್ರಕಾರ, ಮೃತ ಇಕ್ಬಾಲ್ ತನ್ನ ಅಜ್ಜಿ ಮನೆಯಿಂದ ಹಿಂದಿರುಗುತ್ತಿದ್ದಾಗ ಅಪಘಾತವಾಗಿದೆ. ಈ ವೇಳೆ ಆತನ ಹೆಸರನ್ನು ಕೇಳಿದ ನಂತರ ಆತನ ಮೇಲೆ ದೊಣ್ಣೆ ಮತ್ತು ರಾಡ್‌ಗಳಿಂದ ಗುಂಪಿನಲ್ಲಿ ಬಂದ ಜನರು ಹೊಡೆದು ಕೊಂದಿರುವುದಾಗಿ ತಿಳಿಸಿದ್ದಾರೆ.

ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಗುಂಪಿನಲ್ಲಿ ಮಹಿಳೆಯರು ಕೂಡ ಇದ್ದರು ಎಂದು ವರದಿಯಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೈಕ್ ಅಪಘಾತವಾಗಿತ್ತು. ಈ ವೇಳೆ ಜಗಳ ನಡೆದಿದ್ದು, ಆಗ ಸ್ಥಳಕ್ಕೆ ಬಂದ ಕೆಲವು ವ್ಯಕ್ತಿಗಳು ಇಕ್ಬಾಲ್ ಅವರ ಮೇಲೆ ದೊಣ್ಣೆ ಮತ್ತು ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಘಟನೆಯ ಸಂಬಂಧ ಮಾಹಿತಿ ಕಲೆ ಹಾಕಿ ಕೆಲ ಶಂಕಿತರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...