ಮುಂಗಾರು ಮಳೆ ಆರ್ಭಟ ಜೋರು; 14 ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

Date:

ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ರಾಜ್ಯದ 14 ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಕೆಎಸ್‌ಎನ್‌ಡಿಎಂಸಿ ಮಾಹಿತಿ ಪ್ರಕಾರ, ಕಾವೇರಿ ನದಿ ಜಲಾಶಯಗಳು ಶೇ.66 ರಷ್ಟು ತುಂಬಿದ್ದು, ಕೃಷ್ಣಾ ನದಿಯ ಜಲಾಶಯಗಳು ಶೇ. 51ರಷ್ಟು ಭರ್ತಿಯಾಗಿವೆ.

ನೀರು ಹೆಚ್ಚು ಸಂಗ್ರಹವಿರುವ ಜಲಾಶಯಗಳ ಪೈಕಿ ಕಾವೇರಿ ಜಲಾನಯನ ಪ್ರದೇಶದ ಡ್ಯಾಂಗಳೇ ಮುಂಚೂಣಿಯಲ್ಲಿದ್ದು, ನೀರಿನ ಮಟ್ಟ ಚೆನ್ನಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃಷ್ಣಾ ಜಲಾನಯನ ಪ್ರದೇಶದ ಡ್ಯಾಂಗಳು ಅರ್ಧದಷ್ಟು ಭರ್ತಿಯಾಗಿವೆ. ಮಲೆನಾಡಿನ ಡ್ಯಾಂಗಳು ಶೇ. 35 ರಷ್ಟು ಮಾತ್ರ ಭರ್ತಿಯಾಗಿವೆ.

ದುಪ್ಪಟ್ಟು ನೀರು ಸಂಗ್ರಹ

2023 ಜುಲೈ 15 ಕ್ಕೆ ಹೋಲಿಸಿದರೆ ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಮಟ್ಟವು ಈ ವರ್ಷ ದುಪ್ಪಟ್ಟು ಸಂಗ್ರಹವಾಗಿದೆ. ಕಳೆದ ವರ್ಷ ಈ ಸಂದರ್ಭದಲ್ಲಿ 14 ಜಲಾಶಯಗಳಲ್ಲಿ ಒಟ್ಟು 220 ಟಿಎಂಸಿ ನೀರಿತ್ತು. ಈ ವರ್ಷ 421 ಟಿಎಂಸಿ ನೀರು ಸಂಗ್ರಹವಿದೆ.

ಇನ್ನೂ ಎರಡೂವರೆ ತಿಂಗಳು ಮಳೆ

ರಾಜ್ಯಕ್ಕೆ ಮುಂಗಾರು ಆಗಮಿಸಿ ಒಂದೂವರೆ ತಿಂಗಳಾಗಿದ್ದು, ಮುಂದಿನ ಎರಡೂವರೆ ತಿಂಗಳು ಮಳೆಯಾಗಲಿದ್ದು, ಜಲಾಶಯಗಳೆಲ್ಲಾ ಪೂರ್ತಿಯಾಗಿ ಭರ್ತಿಯಾಗುವ ಸಾಧ್ಯತೆ ಹೆಚ್ಚಿದೆ.

ಕೃಷ್ಣಾ ಜಲಾನಯನ ಪ್ರದೇಶದ ಜಲಾಶಯಗಳು ನೀರಿನ ಮಟ್ಟ

ಭದ್ರಾ – ಶೇ.39 ಭರ್ತಿ
ತುಂಗಭದ್ರಾ – ಶೇ.31 ಭರ್ತಿ
ಘಟಪ್ರಭಾ – ಶೇ.52 ಭರ್ತಿ
ಮಲಪ್ರಭಾ – ಶೇ.34 ಭರ್ತಿ
ಆಲಮಟ್ಟಿ – ಶೇ.74 ಭರ್ತಿ
ನಾರಾಯಣಪುರ – ಶೇ. 68 ಭರ್ತಿ

ಕಾವೇರಿ ಜಲಾಶಯಗಳು

ಹಾರಂಗಿ – ಶೇ. 83 ಭರ್ತಿ
ಹೇಮಾವತಿ – ಶೇ.61 ಭರ್ತಿ
ಕೆಆರ್‌ಎಸ್‌ – ಶೇ. 55 ಭರ್ತಿ
ಕಬಿನಿ – ಶೇ.95 ಭರ್ತಿ

ಮಲೆನಾಡಿನ ಜಲಾಶಯಗಳು

ಲಿಂಗನಮಕ್ಕಿ – ಶೇ.34 ಭರ್ತಿ
ಸೂಪ – ಶೇ. 36 ಭರ್ತಿ
ವರಾಹಿ – ಶೇ. ಭರ್ತಿ

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...