ಮೈಸೂರು | ಆಮರಣಾಂತ ಉಪವಾಸ ಸತ್ಯಾಗ್ರಹ; ಮತದಾನ ಬಹಿಷ್ಕಾರಕ್ಕೆ ಮುಂದಾದ ದಸಂಸ

Date:

ಶೋಷಿತ ದಲಿತರಿಗೆ ಆಗಿರುವ ಅನ್ಯಾಯ ಸರಿಪಡಿಸಿ, ಬಾಬಾ ಸಾಹೇಬ್‌ ಅಂಬೇಡ್ಕರರು ಕೊಟ್ಟ ಸಂವಿಧಾನದ ಅಡಿಯಲ್ಲಿ ನ್ಯಾಯ ನೀಡಿ ನಮ್ಮ ಬೇಡಿಕೆ ಈಡೇರಿಸಿ ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಆಮರಣಾಂತ ಪ್ರತಿಭಟನೆ ನಡೆಸುತ್ತಿದೆ.

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲೂಕು ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ದಸಂಸ ಕಾರ್ಯಕರ್ತರು ಮಂಗಳವಾರದಿಂದ ನ್ಯಾಯ ಸಿಗುವವರೆಗೂ ಆಮರಣಾಂತ ಉಪವಾಸ ಸತ್ಯಾಗ್ರಹ ಹಾಗೂ ಮತದಾನ ಬಹಿಷ್ಕಾರ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಳೆದ ಒಂದು ವರ್ಷದಿಂದ ದಸಂಸ ಮುಖಂಡರು ತಾಲೂಕು ಕಚೇರಿ ಮುಂಭಾಗದಲ್ಲಿ ಮಳೆ ಚಳಿ ಎನ್ನದೆ ಧರಣಿ ನಡೆಸುತ್ತಿದೆ. “ಈವರೆಗೆ ಸ್ಥಳೀಯ ಆಡಳಿತ, ಜಿಲ್ಲಾಡಳಿತ, ಸರ್ಕಾರ ಪತ್ರ ವ್ಯವಹಾರ ನಡೆಸಿದೆಯೇ ವಿನಃ  ದಲಿತ ಹೋರಾಟಗಾರರ ಹೋರಾಟಕ್ಕೆ ಸ್ಪಂದಿಸದೆ ಅನ್ಯಾಯ ಎಸಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮ್ಮ ಹೋರಾಟಕ್ಕೆ ಸ್ಪಂದನೆ ಸಿಗದ ಕಾರಣಕ್ಕಾಗಿ ಇಂದಿನಿಂದ ಆಮರಣಾಂತ ಉಪವಾಸ ಮಾಡುತ್ತಿದ್ದು, ನಮಗೆ ನ್ಯಾಯ ಸಿಗುವವರೆಗೂ ಪ್ರತಿಭಟನೆ ಮಾಡುತ್ತೇವೆ. ಜೊತೆಗೆ  ಮೇ 10ರಂದು ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಸಂಸ ಹಿರಿಯ ಮುಖಂಡ ಜಗದೀಶ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಹಗಲು, ಇರುಳು ಎನ್ನದೆ ಧರಣಿ ಕುಳಿತರೂ ನಮ್ಮನ್ನು ಹೀನಾಯವಾಗಿ ನಡೆಸಿಕೊಂಡಿರುವ ವ್ಯವಸ್ಥೆ ವಿರುದ್ಧ ಮತದಾನ ಬಹಿಷ್ಕಾರ ಮಾಡುತ್ತೇವೆ” ಎಂದು ತಿಳಿಸಿದರು.

ರಾಮು ಮಾತನಾಡಿ, “ಮುಮ್ಮಡಿಕಾವಲು ಗ್ರಾಮದ ಸರ್ವೆ ನಂ 01ರ ದರಖಾಸ್ತು ಜಮೀನನ್ನು ಪಕ್ಕಾ ಪೋಡು ದುರಸ್ತಿ ಮಾಡಿಕೊಡುವಂತೆ, ಕೊಣಸೂರು ಗ್ರಾಮದ ಭೂಮಿ ಸಮಸ್ಯೆಯನ್ನು ಬಗೆಹರಿಸುವಂತೆ, ಬೆಣಗಾಲು ಗ್ರಾಮದ ಬಿಡಿಒ ಜಾಗವನ್ನು ರಕ್ಷಿಸುವಂತೆ, ಕದರೇಗೌಡನಕೊಪ್ಪಲು ಗ್ರಾಮದ ಗ್ರಾಮ ಠಾಣವನ್ನು ಬಿಡಿಸಿ ಪರಿಶಿಷ್ಟ ಜಾತಿಗೆ ಸೇರಿದ ವಸತಿ ರಹಿತರಿಗೆ ನೀಡುವಂತೆ, ದೊಡ್ಡಹೊಸೂರು ಗ್ರಾಮದ ದಲಿತ ವಿಧವೆ ಮಹಿಳೆ ಚನ್ನಮ್ಮನ ಜಮೀನನ್ನು ಬಿಡಿಸಿಕೊಡುವಂತೆ ಅಧಿಕಾರಿಗಳಿಗೆ, ಸರ್ಕಾರಕ್ಕೆ ಕೋರಿದ್ದರೂ ಈವರೆಗೆ ಸ್ಪಂದಿಸಿಲ್ಲ” ಎಂದು ಆರೋಪಿಸಿದರು.

ಮಾಲಂಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಡಾ. ಆಶಾರವರು ನರೇಗಾ ಯೋಜನೆಯಲ್ಲಿ ಅಕ್ರಮವೆಸಗಿ ಮರಣ ಹೊಂದಿರುವ ವ್ಯಕ್ತಿಯ ಹೆಸರಿಗೆ ಕೂಲಿ ಹಣ ನೀಡಿ ಯೋಜನೆಯನ್ನು ದುರುಪಯೋಗ ಪಡಿಸಿಕೊಂಡಿರುವುದರಿಂದ ಮತ್ತು ಪರಿಶಿಷ್ಟ ಜಾತಿಯವರಿಗೆ ಕೂಲಿ ಕೆಲಸ ನೀಡದೆ ತೊಂದರೆ ನೀಡಿರುವುದರಿಂದ ಅವರನ್ನು ಕರ್ತವ್ಯದಿಂದ ಅಮಾನತು ಮಾಡುವಂತೆ ಹಾಗೂ ಇನ್ನೂ ಹಲವು ಸಮಸ್ಯೆಗಳನ್ನು ಬಗೆಹರಿಸಿಕೊಡುವಂತೆ 2022ರ ಮೇ 04ರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ, ಈವರೆಗೆ ದಲಿತರ ಹೋರಾಟಕ್ಕೆ ನ್ಯಾಯ ಸಿಕ್ಕಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದರು.

ದಲಿತ ಮುಖಂಡ ದೊಡ್ಡಯ್ಯ ಮಾತನಾಡಿ, “ಇನ್ನಾದರೂ ಅಧಿಕಾರಿಗಳು ನಮ್ಮ ಸಮಸ್ಯೆಗಳನ್ನು ಆಲಿಸಬೇಕು. ನಮ್ಮ ಬೇಡಿಕೆ ಈಡೇರಿಸಿ ದಲಿತರು ನೆಮ್ಮದಿಯಿಂದ ಬದುಕಲು ಅವಕಾಶ ಮಾಡಿಕೊಡಬೇಕು. ನಮಗೆ ನೀಡಬೇಕಾದ ಸಾಮಾಜಿಕ, ಆರ್ಥಿಕ, ರಾಜಕೀಯ ಹಕ್ಕನ್ನು ಕಿತ್ತುಕೊಂಡು ಅನ್ಯಾಯ ಮಾಡಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಹಾಲಿನಪುಡಿ ಪೂರೈಕೆ ಸ್ಥಗಿತ; ವಿತರಣೆಗೆ ಎಐಡಿಎಸ್‌ಒ ಆಗ್ರಹ

“ದಲಿತರಿಗೆ ಅನ್ಯಾಯ ಆಗಿರುವುದನ್ನು ದಾಖಲೆ ಸಹಿತ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಅಧಿಕಾರಿಗಳು ಏನೂ ಗೊತ್ತಿಲ್ಲದವರ ಹಾಗೆ ಆಗೊಮ್ಮೆ ಈಗೊಮ್ಮೆ ಸಭೆ ನಡೆಸಿ ಅಲ್ಲಿಗೆ ಕೈ ತೊಳೆದುಕೊಳ್ಳುತ್ತಿದ್ದಾರೆಯೇ, ಹೊರತು ದಲಿತರ ಸಮಸ್ಯೆ ಬಗೆಹರಿಸಲು ಮುಂದಾಗುತ್ತಿಲ್ಲ. ಇದಕ್ಕೆಲ್ಲ ಸ್ಥಳೀಯ ಪ್ರತಿನಿಧಿಗಳು, ಎಂಎಲ್ಎ ಕುಮ್ಮಕ್ಕು ಕೂಡ ಇದೆ” ಎಂದು ಆರೋಪಿಸಿದರು.

“ದಲಿತ ಹೋರಾಟಗಾರರಿಗೆ ನ್ಯಾಯ ಸಿಗಬೇಕು. ಅನ್ಯಾಯ ಮಾಡಿರುವ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ ಕ್ರಮ ಕೈಗೊಳ್ಳಬೇಕು” ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ದಸಂಸ ಕಾರ್ಯಕರ್ತರು ಕೃಷ್ಣಮೂರ್ತಿ, ಚಂದ್ರು, ಉಮೇಶ, ಲಕ್ಷ್ಮಿ, ಪ್ರಕಾಶ್, ಹರೀಶ, ಮೂರ್ತಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...