ಝೀ ನ್ಯೂಸ್‌ನ ‘ಮೆಹೆಂದಿ ಜಿಹಾದ್’ ಕಾರ್ಯಕ್ರಮ ತೆಗೆದು ಹಾಕಲು NBDSA ನಿರ್ದೇಶನ

Date:

ಕಳೆದ ವರ್ಷ ಪ್ರಸಾರಗೊಂಡ ‘ಮೆಹೆಂದಿ ಜಿಹಾದ್’ ಕುರಿತ ಕಾರ್ಯಕ್ರಮಗಳನ್ನು ತಕ್ಷಣವೇ ತೆಗೆದುಹಾಕುವಂತೆ NBDSAಯು ಝೀ ನ್ಯೂಸ್ ಚಾನೆಲ್‌ ಗೆ ಸೂಚನೆ ನೀಡಿದೆ.

ಮುಸ್ಲಿಂ ವಿರೋಧಿ ತಪ್ಪು ಮಾಹಿತಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಝೀ ನ್ಯೂಸ್ ಚಾನೆಲ್ ವಿರುದ್ಧ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಮತ್ತು ಡಿಜಿಟಲ್ ಸ್ಟಾಂಡರ್ಡ್ಸ್ ಅಥಾರಿಟಿ (NBDSA) ಈ ಕ್ರಮ ಕೈಗೊಂಡಿದೆ.

ಝೀ ನ್ಯೂಸ್ ಪ್ರಸಾರ ಮಾಡಿದ್ದ ಕಾರ್ಯಕ್ರಮದಲ್ಲಿ, ‘ಕರ್ವಾ ಚೌತ್’ ಹಬ್ಬದ ಸಂದರ್ಭ ಹಿಂದೂ ಮಹಿಳೆಯರಿಗೆ ಮೆಹೆಂದಿ ಹಚ್ಚುವ ಮೊದಲು ಮುಸ್ಲಿಂ ಕಲಾವಿದರು ಉಗುಳುತ್ತಾರೆ ಎಂಬ ಆಧಾರರಹಿತ ಹಾಗೂ ದ್ವೇಷ ಹರಡುವ ವಿಷಯಗಳನ್ನು ಒಳಗೊಂಡಿತ್ತು. NBDSA ಈ ಕಾರ್ಯಕ್ರಮವು ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಸ್ಪಷ್ಟವಾಗಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ವಿಚಾರದಲ್ಲಿ ಕರ್ನಾಟಕದಿಂದ ಬಿಹಾರಕ್ಕೆ ಬಿಜೆಪಿಯ ಬದಲಾದ ನಿಲುವು

ನ್ಯಾಯಮೂರ್ತಿ (ನಿವೃತ್ತ) ಎ.ಕೆ. ಸಿಕ್ರಿ ಅವರ ನೇತೃತ್ವದ NBDSA, ಝೀ ನ್ಯೂಸ್ ಗೆ ಎಚ್ಚರಿಕೆ ನೀಡಿದ್ದು, ಭವಿಷ್ಯದಲ್ಲಿ ಇಂತಹ ವಿಷಯಗಳನ್ನು ಪ್ರಸಾರ ಮಾಡುವಾಗ ವೃತ್ತಿಪರ ಜವಾಬ್ದಾರಿಯನ್ನು ಪಾಲಿಸಲು ಸೂಚನೆ ನೀಡಿದೆ.

2024ರ ಅಕ್ಟೋಬರ್‌ನಲ್ಲಿ ಈ ಕಾರ್ಯಕ್ರಮ ಪ್ರಸಾರವಾದ ಬಳಿಕ ಇಂದ್ರಜೀತ್ ಘೋರ್ಪಡೆ (@jeetxg) ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...