ಜೂನಿಯರ್‌ಗಳಿಗೆ ಮನಬಂದಂತೆ ಬಡಿಗೆಯಿಂದ ಥಳಿಸಿದ ಎನ್‌ಸಿಸಿ ಸೀನಿಯರ್ : ವಿಡಿಯೋ ವೈರಲ್

Date:

  • ಮುಂಬೈ ಸಮೀಪದ ಥಾಣೆಯ ಬಂದೋಡ್ಕರ್ ಕಾಲೇಜಿನಲ್ಲಿ ನಡೆದ ಘಟನೆ
  • ‘ಇಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ’ ಎಂದ ಕಾಲೇಜಿನ ಪ್ರಾಂಶುಪಾಲೆ

ಶಾಲಾ-ಕಾಲೇಜುಗಳಲ್ಲಿ ಪಠ್ಯೇತರ ಚಟುವಟಿಕೆಯ ಭಾಗವಾಗಿರುವ ನ್ಯಾಷನಲ್ ಕೆಡೆಟ್ ಕಾರ್ಪ್ಸ್‌(ಎನ್‌ಸಿಸಿ)ನ ಸೀನಿಯರ್ ವಿದ್ಯಾರ್ಥಿಯೊಬ್ಬ ಜೂನಿಯರ್‌ಗಳಿಗೆ ಮನಬಂದಂತೆ ಬಡಿಗೆಯಿಂದ ಥಳಿಸಿ, ಶಿಕ್ಷೆ ನೀಡಿದ ಘಟನೆಯ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಮುಂಬೈ ಸಮೀಪದ ಥಾಣೆಯ ಬಂದೋಡ್ಕರ್ ಕಾಲೇಜಿನಲ್ಲಿನ ಎನ್‌ಸಿಸಿ ತರಬೇತಿಯ ವೇಳೆ ಈ ಬೆಳವಣಿಗೆ ನಡೆದಿದ್ದು, ಘಟನೆಯನ್ನು ದೂರದ ಕಿಟಕಿ ಬಳಿ ನಿಂತು ನೋಡುತ್ತಿದ್ದ ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಮಳೆ ಬರುತ್ತಿದ್ದರೂ ನೆಲದಲ್ಲಿ ತಲೆ ಕೆಳಗಾಗಿಸಿ ಮಲಗಿಸಿದ್ದ ಸುಮಾರು ಏಳರಿಂದ ಎಂಟು ಮಂದಿ ವಿದ್ಯಾರ್ಥಿಗಳ ಕುಂಡೆಗೆ ಮನಬಂದಂತೆ ಥಳಿಸಿದ್ದಾನೆ. ಒಬ್ಬೊಬ್ಬ ವಿದ್ಯಾರ್ಥಿಗೂ ಸುಮಾರು ನಾಲ್ಕೈದು ಬಾರಿ ಬಡಿಗೆಯಿಂದ ಥಳಿಸಲಾಗಿದೆ. ಓರ್ವ ವಿದ್ಯಾರ್ಥಿ ನಿರಂತರ ಹೊಡೆತದ ನೋವು ಸಹಿಸಲಾರದೆ, ಹೊಡೆಯದಂತೆ ಕೈ ಅಡ್ಡ ಇಟ್ಟು ಅಂಗಲಾಚುವ ದೃಶ್ಯವೂ ವಿಡಿಯೋದಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋದಲ್ಲಿ ಕೋಲು ಹಿಡಿದು ಥಳಿಸಿರುವ ವ್ಯಕ್ತಿಯನ್ನು ಹಿರಿಯ ಎನ್‌ಸಿಸಿ ಕೆಡೆಟ್ ಎಂದು ಗುರುತಿಸಲಾಗಿದೆ. ಡ್ರಿಲ್ ನಡೆಸಲು ವಿಫಲರಾದ ಹಿನ್ನೆಲೆಯಲ್ಲಿ ಈ ರೀತಿಯಾಗಿ ನಡೆಸಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ?

ವಿಡಿಯೋ ವೈರಲ್ ಆದ ಬಳಿಕ ಪ್ರತಿಕ್ರಿಯೆ ನೀಡಿರುವ ಕಾಲೇಜಿನ ಪ್ರಾಂಶುಪಾಲೆ ಸುಚಿತ್ರಾ ನಾಯ್ಕ್, ‘ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಇಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ. ತಪ್ಪಿತಸ್ಥ ಹಿರಿಯ ವಿದ್ಯಾರ್ಥಿಯ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.

‘ಸುಮಾರು 40 ವರ್ಷಗಳಿಂದ ನಮ್ಮ ಕಾಲೇಜಿನಲ್ಲಿ ಎನ್ ಸಿಸಿ ತರಬೇತಿ ನಡೆಯುತ್ತಿದೆ. ಎನ್‌ಸಿಸಿಯ ಜವಾಬ್ದಾರಿ ಇರುವ ಶಿಕ್ಷಕರ ಅನುಪಸ್ಥಿತಿಯ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿ ಮಾಡಿರುವ ಕೃತ್ಯ ಕೇವಲ ಮಾನಸಿಕ ಅಸ್ವಸ್ಥರು ಮಾತ್ರ ಮಾಡಲು ಸಾಧ್ಯ’ ಎಂದು ಪ್ರಾಂಶುಪಾಲೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...