ಜುಲೈ 1ರಿಂದ ಜಾರಿಗೆ ಬರಲಿದೆ ಹೊಸ ಅಪರಾಧ ಕಾನೂನು: ಅಧಿಸೂಚನೆ ಪ್ರಕಟಿಸಿದ ಕೇಂದ್ರ ಸರ್ಕಾರ

Date:

ದೇಶದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮರುಪರಿಶೀಲಿಸುವ ಉದ್ದೇಶಕ್ಕೆ ಹೊಸದಾಗಿ ಜಾರಿಗೆ ತರಲಾಗಿದ್ದ ಮೂರು ಹೊಸ ಕಾನೂನುಗಳು 2024ರ ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಅಧಿಕೃತ ಹೇಳಿಕೆಯ ಮೂಲಕ ತಿಳಿಸಿದೆ.

ಭಾರತೀಯ ನ್ಯಾಯ (ದ್ವಿತೀಯ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ದ್ವಿತೀಯ) ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ (ದ್ವಿತೀಯ) ಕಾಯ್ದೆಗಳು ಜುಲೈನಿಂದ ಅನುಷ್ಠಾನಕ್ಕೆ ಬರಲಿವೆ ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಬ್ರಿಟೀಷರ ವಸಾಹತು ಕಾಲದ ಕಾನೂನುಗಳನ್ನು ಇವು ಬದಲಿಸಲಿದ್ದು, ಪ್ರಸ್ತುತ ಬಳಕೆಯಲ್ಲಿ ಇರುವ ಭಾರತೀಯ ದಂಡ ಸಂಹಿತೆ 1860, ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) 1973 ಮತ್ತು ಭಾರತೀಯ ಪುರಾವೆ ಕಾಯ್ದೆ, 1982ಗಳ ಜಾಗದಲ್ಲಿ ಇವು ಜಾರಿಯಾಗಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೂರು ಕಾನೂನುಗಳಿಗೆ ಕಳೆದ ವರ್ಷ ಡಿಸೆಂಬರ್ 21 ರಂದು ಸಂಸತ್ತಿನಲ್ಲಿ ಅನುಮೋದನೆ ನೀಡಲಾಗಿತ್ತು. ಡಿಸೆಂಬರ್ 25ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದರು.

ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆ ಪ್ರಕಾರ ಮೂರು ಹೊಸ ಕಾನೂನುಗಳ ನಿಬಂಧನೆಗಳು ಜುಲೈ 1 ರಿಂದ ಜಾರಿಗೆ ಬರಲಿವೆ. ಈ ಕಾನೂನುಗಳು ವಸಾಹತುಶಾಹಿ-ಯುಗದ ಕ್ರಮವಾಗಿ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯ್ದೆಯನ್ನು ಬದಲಾಯಿಸಿವೆ.

New Law

ಮೂರು ಕಾನೂನುಗಳು ವಿವಿಧ ಅಪರಾಧಗಳು ಮತ್ತು ಅವುಗಳ ಶಿಕ್ಷೆಗಳ ವ್ಯಾಖ್ಯಾನಗಳನ್ನು ನೀಡುವ ಮೂಲಕ ದೇಶದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಕೂಲಂಕಷವಾಗಿ ಪರಿಶೀಲಿಸುವ ಗುರಿಯನ್ನು ಹೊಂದಿವೆ ಎಂದು ಕೇಂದ್ರ ಸರ್ಕಾರ ಹೊರಡಿಸಿರುವ ಪ್ರಕರಣೆಯಲ್ಲಿ ತಿಳಿಸಿದೆ.

ಈ ಕಾನೂನಿನ ಬಗ್ಗೆ ಲೋಕಸಭೆಯಲ್ಲಿ ನಡೆದಿದ್ದ ಚರ್ಚೆಯ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, “ದೇಶದಲ್ಲಿ ವಸಾಹತುಶಾಹಿ ಯುಗದ ಕಾನೂನುಗಳನ್ನು ಕೊನೆಗೊಳಿಸಲು ಸರ್ಕಾರವು ಮೂರು ಕ್ರಿಮಿನಲ್ ಮಸೂದೆಗಳನ್ನು ತಂದಿದೆ” ಎಂದಿದ್ದರು.

ಇದನ್ನು ಓದಿದ್ದೀರಾ? ಪ್ರಶ್ನೆಪತ್ರಿಕೆ ಸೋರಿಕೆ: ಅಭ್ಯರ್ಥಿಗಳ ಪ್ರತಿಭಟನೆಗೆ ಮಣಿದು ಪೊಲೀಸ್ ಪರೀಕ್ಷೆ ಅಮಾನ್ಯಗೊಳಿಸಿದ ಯೋಗಿ ಸರ್ಕಾರ

“ಈ ಹಿಂದಿನ ಕಾನೂನಿನಲ್ಲಿ ಹಲವು ಬದಲಾವಣೆ ಮಾಡಿ, ಹೊಸ ಕಾನೂನು ಮಸೂದೆ ಮಂಡಿಸಲಾಗಿದೆ. ಐಪಿಸಿ ಸೆಕ್ಷನ್ 124 ಅಥವಾ ದೇಶದ್ರೋಹದ ಕಾನೂನನ್ನು ರದ್ದುಗೊಳಿಸಲಾಗಿದೆ. ಈಗ ಈ ಕಾನೂನಿನ ಉದ್ದೇಶ ಸರ್ಕಾರವನ್ನು ಉಳಿಸುವುದಲ್ಲ, ಆದರೆ ದೇಶವನ್ನು ಉಳಿಸುವುದು. ಆರೋಗ್ಯಕರ ಪ್ರಜಾಪ್ರಭುತ್ವದಲ್ಲಿ, ಪ್ರತಿಯೊಬ್ಬರಿಗೂ ಸರ್ಕಾರವನ್ನು ಟೀಕಿಸುವ ಹಕ್ಕಿದೆ. ಆದರೆ ಭಾರತದ ಬಗ್ಗೆ ಕೀಳಾಗಿ ಏನನ್ನೂ ಹೇಳಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ” ಎಂದು ಅಮಿತ್ ಶಾ ಹೇಳಿಕೆ ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...