ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ. ಗಟ್ಟಿ ನಿಧನ

Date:

ಕಾದಂಬರಿಕಾರ, ಭಾಷಾತಜ್ಞ, ನಿವೃತ್ತ ಪ್ರಾಧ್ಯಾಪಕ ಕೆ.ಟಿ. ಗಟ್ಟಿ(86) ಇಂದು ನಿಧನರಾಗಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ 1938ರ ಜುಲೈ 22ರಂದು ಜನಿಸಿದ ಶ್ರೀಯುತರು, ಪ್ರಾಥಮಿಕ ಶಿಕ್ಷಣವನ್ನು ಕಾಸರಗೋಡಿನ ಹೈಯರ್ ಎಲಿಮೆಂಟರಿ ಶಾಲೆಯಲ್ಲಿ ಕಲಿತರು. ತಂದೆ ಧೂಮಪ್ಪಗಟ್ಟಿಯವರು ಕೃಷಿಕರಾದರೂ ಯಕ್ಷಗಾನ ಕಲೆಯ ಬಗ್ಗೆ ಅಪಾರ ಒಲವಿದ್ದವರು. ತಾಯಿ ಪರಮೇಶ್ವರಿ ತುಳು-ಮಲಯಾಳಂ ಪಾಡ್ದನ ಹಾಡುಗಳನ್ನು ಕಲಿತವರು.

ಉತ್ತಮ ಭಾಷೆ, ಆಕರ್ಷಕ ಶೈಲಿ, ಹೊಸ ಹೊಸ ವಸ್ತು, ಸರಳ ನಿರೂಪಣೆಗಳ ಮೂಲಕ ಕನ್ನಡ ಸಾರಸ್ವತ ಲೋಕದಲ್ಲಿ ಮನೆ ಮಾತಾದ ಹಿರಿಯ ಕಥೆಗಾರ ಕೆ.ಟಿ.ಗಟ್ಟಿ ಅವರು ಎಲ್ಲಾ ಓದುಗರಿಗೆ ಚಿರಪರಿಚಿತರು. ಕೇರಳ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿಎಡ್ ಪದವಿ ಪಡೆದಿರುವ ಕೆ.ಟಿ.ಗಟ್ಟಿ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯವರು. ಸದ್ಯ ಮಂಗಳೂರಿನಲ್ಲಿ ನೆಲೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಹದಿನೇಳರ ಹರೆಯದಲ್ಲಿ ಶಿಕ್ಷಕರಾಗಿ ಕೆಲಸಕ್ಕೆ ಸೇರಿದ ಇವರು ಇಥಿಯೋಪಿಯಾದಲ್ಲಿ ಒಂಬತ್ತು ವರ್ಷ ಸೇರಿದಂತೆ ಒಟ್ಟು 25 ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿ ದುಡಿದವರು. 1957ರಿಂದ ಲೇಖನಿ ಹಿಡಿದು ಸಾಹಿತ್ಯ ಕೃಷಿ ಆರಂಭಿಸಿದ ಈ ಹಿರಿಯ ಕಥೆಗಾರ ನಿರಂತರವಾಗಿ ಕಥೆ, ಕಾದಂಬರಿ, ಕವನ, ಪ್ರಬಂಧ ಸಂಕಲನ, ನಾಟಕಗಳನ್ನು ಬರೆಯುತ್ತಲೇ ಬಂದವರು.

ಇವರ ಮೊದಲ ಕಾದಂಬರಿ ‘ಶಬ್ದಗಳು’ 1973ರಲ್ಲಿ ಪ್ರಕಟವಾಯಿತು. ಈವರೆಗೆ 48 ಕಾದಂಬರಿಗಳು 5 ಕಥಾಸಂಕಲನಗಳು, 6 ಪ್ರಬಂಧ ಸಂಕಲನಗಳು, 22 ನಾಟಕಗಳು, 14 ಬಾನುಲಿ ನಾಟಕಗಳು, 2 ಕವನ ಸಂಕಲನಗಳಲ್ಲದೆ ಆತ್ಮಕಥೆ, ವ್ಯಕ್ತಿಚಿತ್ರ ಹಾಗೂ ಪ್ರವಾಸ ಕಥನಗಳನ್ನೂ ಬರೆದು ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಹೆಗ್ಗಳಿಕೆ ಇವರದು. ತುಳು ಭಾಷೆಯಲ್ಲೂ ಒಂದು ಕವನ ಸಂಕಲನ ಹಾಗೂ ಕಾದಂಬರಿ ಪ್ರಕಟಿಸಿದ್ದಾರೆ.

ಕೆ.ಟಿ.ಗಟ್ಟಿಯವರು ರಚಿಸಿದ 30 ಮಕ್ಕಳ ನಾಟಕಗಳು ಕನ್ನಡ ಅಂತರ್ಜಾಲ ಮ್ಯಾಗಜಿನ್ ನಲ್ಲಿ ಪ್ರಕಟಗೊಂಡಿವೆ. ಇತರ 10 ಮಕ್ಕಳ ನಾಟಕಗಳು ಪುಸ್ತಕ ರೂಪದಲ್ಲಿ ಪ್ರಕಟವಾಗಿವೆ. ಮಂಗಳೂರು ಆಕಾಶವಾಣಿಯಲ್ಲಿ ಹಲವು ಭಾಷಣಗಳು, 50 ಚಿಂತನಗಳು, ಕಥೆಗಳು ಪ್ರಸಾರವಾಗಿವೆ. ಕಳೆದ 40 ವರ್ಷಗಳಿಂದ ನಾಡಿನ ಹೆಸರಾಂತ ದಿನಪತ್ರಿಕೆಗಳು, ವಾರ ಹಾಗೂ ಮಾಸಪತ್ರಿಕೆಗಳಲ್ಲಿ ಇವರ ಹಲವಾರು ಲೇಖನಗಳು, ಕವನಗಳು ಪ್ರಕಟವಾಗಿವೆ. ಹೆಸರಿಗೆ ತಕ್ಕಂತೆ ಸಾಹಿತ್ಯ ಕ್ಷೇತ್ರದಲ್ಲಿ ಗಟ್ಟಿ ಕುಳ ಎನಿಸಿರುವ ಕೆ.ಟಿ.ಗಟ್ಟಿ ಅವರ ಒಟ್ಟು 16 ಕಾದಂಬರಿಗಳು ಸುಧಾ ವಾರಪತ್ರಿಕೆ ಒಂದರಲ್ಲೇ ಪ್ರಕಟವಾಗಿವೆ.

ಇಥಿಯೋಪಿಯಾದಲ್ಲಿದ್ದಾಗ ಒಮ್ಮೆ ನಡೆದ ಘಟನೆ ಇವರ ಮನಸ್ಸಿನ ಮೇಲೆ ಅಚ್ಚೊತ್ತಿತು. ಇವರು ಪ್ರೀತಿಯಿಂದ ಬೆಳೆಸಿದ ನಿಂಬೆಗಿಡವನ್ನೂ ಕುರಿಯೊಂದು ಬಂದು ತಿನ್ನತೊಡಗಿದಾಗ ಕೋಪಗೊಂಡು ಓಡಿಸಿದ ಮೇಲೆ ಗಟ್ಟಿಯವರೆಗೆ ಕಾಡಿದ ಪ್ರಶ್ನೆ. ಬೇರೆಯವರ ದೇಶ, ಅವರ ಮಣ್ಣು, ಅವರ ಗಿಡ, ಅವರ ಕುರಿ-ನಾನು ಓಡಿಸಿದ್ದು ಸರಿಯಾ? ಅನುಭವಿಸಿದ ಈ ಗೊಂದಲದಿಂದ ಹುಟ್ಟಿ ಬಂದದ್ದೇ ‘ಅರಗಿನ ಅರಮನೆ’ ಕಾದಂಬರಿ. 1982ರಲ್ಲಿ ಸ್ವದೇಶಕ್ಕೆ ಮರಳಿಬಂದ ಗಟ್ಟಿಯವರು ಪೂರ್ಣಾವಧಿ ಲೇಖಕರಾಗಿ ಬದುಕಲು ನಿರ್ಧರಿಸಿ, ದ.ಕ. ಜಿಲ್ಲೆಯ ಉಜಿರೆಯ ಬಳಿ ಜಮೀನು ಖರೀದಿಸಿ ‘ವನಸಿರಿ’ಯಲ್ಲಿ ಕೃಷಿ, ಸಾಹಿತ್ಯ ಕೃಷಿ ಎರಡರಲ್ಲೂ ತೊಡಗಿಸಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...