ಬಲಪಂಥೀಯರ ಒತ್ತಡ : ಭೀಷ್ಮ ಸಾಹ್ನಿಯ ‘ತಮಸ್‌’ ನಾಟಕ ಪ್ರದರ್ಶನ ಮುಂದೂಡಿದ ಎನ್ಎಸ್‌ಡಿ

Date:

  • ‘ಅನಿವಾರ್ಯ ಕಾರಣಕ್ಕಾಗಿ’ ಮುಂದೂಡಲಾಗಿದೆ ಎಂದ ಎನ್‌ಎಸ್‌ಡಿ
  • ಎರಡು ತಿಂಗಳುಗಳಿಂದ ನಿರಂತರ ಪೂರ್ವಾಭ್ಯಾಸ ಮಾಡಿದ್ದ ಕಲಾವಿದರು

ಬಲಪಂಥೀಯರಿಂದ ತೀವ್ರ ಒತ್ತಡ ಬಂದ ಹಿನ್ನೆಲೆಯಲ್ಲಿ ಭೀಷ್ಮ ಸಾಹ್ನಿ ಕಾದಂಬರಿ ಆಧಾರಿತ ‘ತಮಸ್‌’ ನಾಟಕದ ಪ್ರದರ್ಶನವನ್ನು ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವೇ ರಾಷ್ಟ್ರೀಯ ನಾಟಕ ಶಾಲೆಯು ಮುಂದೂಡಿರುವ ಸುದ್ದಿಯು ತಡವಾಗಿ ಬೆಳಕಿಗೆ ಬಂದಿದೆ.

ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ಆಗಸ್ಟ್‌ 14ರಿಂದ ಭೀಷ್ಮ ಸಾಹ್ನಿ ಬರೆದ ಕಾದಂಬರಿ ಆಧಾರಿತ ತಮಸ್ ನಾಟಕ ಪ್ರದರ್ಶನವನ್ನು ರಾಷ್ಟ್ರೀಯ ನಾಟಕ ಶಾಲೆಯ ಅಭಿಮಂಚ್ ಆಡಿಟೋರಿಯಂನಲ್ಲಿ ಆಯೋಜಿಸಲಾಗಿತ್ತು.

ಆದರೆ ತಮಸ್ ಅನ್ನು ಎಡಪಂಥೀಯರೊಬ್ಬರು ಬರೆದಿದ್ದಾರೆ ಮತ್ತು ಸ್ವಾತಂತ್ರ್ಯದ ಮೊದಲು ಪಂಜಾಬ್‌ನಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಆರ್‌ಎಸ್‌ಎಸ್ ಕಾರಣ ಎಂದು ಕಾದಂಬರಿ ಹೇಳುತ್ತದೆ ಎಂದು ಆರೋಪಿಸಿದ ಬಳಿಕ ನಾಟಕವನ್ನು ರದ್ದುಪಡಿಸಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
nation school of drama

ರಾಜ್ಯಸಭೆಯ ಮಾಜಿ ಸದಸ್ಯ ಬಿಜೆಪಿಯ ಬಲ್ಬೀರ್ ಪುಂಜ್ ಅವರು ಮೊದಲು ಈ ನಾಟಕ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಲು ಆರಂಭಿಸಿದ ನಂತರ ಬಲಪಂಥೀಯರಿಗೆ ಸೇರಿದ ವಿವಿಧ ವಾಟ್ಸಾಪ್ ಗುಂಪುಗಳಲ್ಲಿ ಇದನ್ನು ರದ್ದುಗೊಳಿಸುವ ಸಂದೇಶವನ್ನು ಹರಡಿದ್ದರು. ಅಲ್ಲದೇ, ಈ ಬಗ್ಗೆ ಟ್ವೀಟ್ ಮಾಡಿ ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಮೀನಾಕ್ಷಿ ಲೇಖಿ ಅವರನ್ನು ಟ್ಯಾಗ್ ಮಾಡಿದ್ದರು ಎಂದು ವರದಿಯಾಗಿದೆ.

ಈ ಇಬ್ಬರು ಸಚಿವರು ಆಗಸ್ಟ್ 14ರಂದು ನಡೆದಿದ್ದ ಉದ್ಘಾಟನಾ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಕಾಣಿಸಿಕೊಂಡಿದ್ದರು. ಈ ವಿಚಾರ ಬೆಳಕಿಗೆ ಬಂದ ಬಳಿಕ ‘ದಿ ಹಿಂದೂ ಪತ್ರಿಕೆ’ ಬಿಜೆಪಿಯ ಬಲ್ಬೀರ್ ಪುಂಜ್ ಅವರನ್ನು ಮಾತನಾಡಿಸಿದೆ.

”ನಾನು ವಾಟ್ಸಪ್‌ ಗ್ರೂಪಿನಲ್ಲಿ ಪೋಸ್ಟ್ ಮಾಡಿರುವ ಸಂದೇಶದಲ್ಲಿ ಹೇಳಲು ಬಯಸಿದ್ದನ್ನು ಹೇಳಿದ್ದೇನೆ. ಈ ವಿಷಯದಲ್ಲಿ ನಾನು ಬೇರೆ ಏನನ್ನೂ ಹೇಳುವುದಿಲ್ಲ’ ಎಂದು ಉತ್ತರಿಸಿದ್ದಾರೆ.

ಆರ್‌ಎಸ್‌ಎಸ್ ಮತ್ತು ಇತರ ಬಲಪಂಥೀಯ ಸಂಘಟನೆಗಳು ಈ ಕಾರ್ಯಕ್ರಮವನ್ನು ರದ್ದುಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವುದಾಗಿ ತಿಳಿದುಬಂದಿದೆ.

Bhisham Sahni

ಭೀಷ್ಮ ಸಾಹ್ನಿ

ಮುಂದೂಡಿದ ಬಗ್ಗೆ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ (ಎನ್‌ಎಸ್‌ಡಿ) ‘ಅನಿವಾರ್ಯ ಕಾರಣಕ್ಕಾಗಿ ಮುಂದೂಡಲಾಗಿದೆ’ ಎಂದು ಹೇಳಿಕೆ ನೀಡಿದ್ದು, ಯಾವುದೇ ಸ್ಪಷ್ಟವಾದ ಕಾರಣವನ್ನು ತಿಳಿಸಿಲ್ಲ. ಜೊತೆಗೆ ಮುಂದಿನ ಪ್ರದರ್ಶನದ ದಿನಾಂಕವನ್ನೂ ತಿಳಿಸಿಲ್ಲ.

ತಮಸ್ ಕಥೆಯು ಪಂಜಾಬ್‌ನಲ್ಲಿ ಸ್ವಾತಂತ್ರ್ಯದ ಮೊದಲು ನಡೆದ ಕೋಮು ಗಲಭೆಯ ಸುತ್ತ ಹೆಣೆಯಲಾಗಿದೆ. ನಾಟಕ ಪ್ರದರ್ಶನವಿದ್ದ ಹಿನ್ನೆಲೆಯಲ್ಲಿ ಒಂದೂವರೆ ತಿಂಗಳುಗಳಿಂದ ಕಲಾವಿದರು ನಿರಂತರ ಅಭ್ಯಾಸ ಮಾಡಿದ್ದರು ಎಂದು ತಿಳಿದುಬಂದಿದೆ.

“ಎರಡು ತಿಂಗಳುಗಳಿಂದ ತಮಸ್ ನಾಟಕವನ್ನು ಎಲ್ಲ ಕಲಾವಿದರು ಅಭ್ಯಾಸ ಮಾಡಿದ್ದರು. ಕಲಾವಿದರ ಶ್ರಮ ವ್ಯರ್ಥವಾಗಬಾರದು ಎಂದು ನಾವು ಬಯಸುತ್ತೇವೆ. ಆದರೆ ಸದ್ಯಕ್ಕೆ, ಪ್ರದರ್ಶನಗಳು ಯಾವಾಗ ನಡೆಯುತ್ತವೆ ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲ” ಎಂದು ಹೆಸರು ಹೇಳಲಿಚ್ಛಿಸದ ತಂಡದಲ್ಲಿದ್ದ ಕಲಾವಿದರೊಬ್ಬರು ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

ಈ ಬೆಳವಣಿಗೆಯನ್ನು ಖಂಡಿಸಿರುವ ಪ್ರಗತಿಪರ ಕಲಾವಿದರ ಒಕ್ಕೂಟವು, ‘ಆರೆಸ್ಸೆಸ್ ಮತ್ತು ಬಿಜೆಪಿಯ ಈ ಷಡ್ಯಂತ್ರವನ್ನು ಮುಚ್ಚಿಹಾಕಲು, ರಾಷ್ಟ್ರೀಯ ನಾಟಕ ಶಾಲೆಯ ಆಡಳಿತ ಮಂಡಳಿಯು ನಾಟಕವನ್ನು ಮುಂದೂಡಲು ವಿವಿಧ ಕಾರಣಗಳನ್ನು ನೀಡಿದೆ. ಇದು ಅಕ್ಷಮ್ಯ. ವಿದ್ಯಾರ್ಥಿಗಳ ಸೃಜನಶೀಲ ಅಭಿವ್ಯಕ್ತಿಯನ್ನು ಹತ್ತಿಕ್ಕಲು ಆರ್‌ಎಸ್‌ಎಸ್‌ನವರು ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಿಗೆ ನುಸುಳುತ್ತಿದ್ದಾರೆ ಎಂಬ ಸತ್ಯ ನಮಗೆ ತಿಳಿದಿದೆ. ಅವರು ತಮ್ಮ ಹಿಡಿತವನ್ನು ಬಲಪಡಿಸಲು, ತಮ್ಮ ಸಿದ್ಧಾಂತ ಮತ್ತು ರಾಜಕೀಯವನ್ನು ಪ್ರಚಾರ ಮಾಡಲು ಕಲಾ ಸಂಸ್ಥೆ ಮತ್ತು ಸಾಂಸ್ಕೃತಿಕ ಕೇಂದ್ರಗಳ ಮೂಲಕ ಪ್ರಯತ್ನಿಸುತ್ತಿದ್ದಾರೆ. ಅವರು ಐತಿಹಾಸಿಕ ಸತ್ಯಗಳನ್ನು ತಮ್ಮದೇ ಆದ ರೀತಿಯಲ್ಲಿ ಚಿತ್ರಿಸಲು ಯತ್ನಿಸುತ್ತಾರೆ. ಸತ್ಯಗಳು ಅವರ ಸುಳ್ಳು ನಿರೂಪಣೆಗೆ ಹೊಂದಿಕೆಯಾಗದಿದ್ದಾಗ, ಅವುಗಳನ್ನು ಕತ್ತಲಲ್ಲಿ ಇರಿಸುವ ಪ್ರಯತ್ನಕ್ಕೆ ಕೈ ಹಾಕುತ್ತಾರೆ. ನಿರಂಕುಶ ಮತ್ತು ಸರ್ವಾಧಿಕಾರಿ ನಡವಳಿಕೆಯನ್ನು ನಾವು ಖಂಡಿಸುತ್ತೇವೆ’ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಆಗಸ್ಟ್ 14 ಅನ್ನು ಸ್ಮರಣಾರ್ಥ ದಿನವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿಯವರ ಕರೆಯಂತೆ ವಿಭಜನೆಯ ಭೀಕರತೆ ಮತ್ತು ಸಮಾಜದಲ್ಲಿ ನಂತರದಲ್ಲಾದ ಘಟನೆಗಳನ್ನು ಎತ್ತಿ ತೋರಿಸುವ ಪ್ರಯತ್ನದ ಉದ್ದೇಶದಿಂದ ಈ ನಾಟಕವನ್ನು ಪ್ರದರ್ಶಿಸಲು ಉದ್ದೇಶಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...