ಚಂದ್ರಯಾನ- 3 | ಉಡಾವಣೆಯ ದೃಶ್ಯ ಸೆರೆ ಹಿಡಿದ ವಿಮಾನ ಪ್ರಯಾಣಿಕ; ವಿಡಿಯೋ ವೈರಲ್

Date:

ಜು. 14ರಂದು ಭಾರತದ ಬಹುಕನಸಿನ ಚಂದ್ರಯಾನ-3 ಉಡಾವಣಾ ಕ್ಷಣವನ್ನು ಇಡೀ ದೇಶವೇ ಕಣ್ತುಂಬಿಸಿಕೊಂಡಿತ್ತು. ಇಸ್ರೋ ಸಾಧನೆಯನ್ನು ಕಂಡು ಎಲ್ಲರೂ ಹೆಮ್ಮೆಯಿಂದ ಖುಷಿಪಟ್ಟಿದ್ದರು.

ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬಾಹ್ಯಾಕಾಶ ನೌಕೆಯು ಟೇಕಾಫ್ ಆದ ಕ್ಷಣವನ್ನು ಹೆಚ್ಚಿನವರು ನೇರಪ್ರಸಾರದ ಮೂಲಕ ವೀಕ್ಷಿಸಿ ಖುಷಿಗೊಂಡಿದ್ದರು.

ಈ ಮಧ್ಯೆ ಚಂದ್ರಯಾನ-3ರ ಈ ಉಪಗ್ರಹ ಹೊತ್ತ ಬಾಹ್ಯಾಕಾಶ ನೌಕೆ ಚಂದ್ರನತ್ತ ಸಾಗುತ್ತಿರುವ ಅದ್ಭುತ ದೃಶ್ಯವೊಂದನ್ನು ವಿಮಾನ ಪ್ರಯಾಣಿಕರೋರ್ವರು ಕಿಟಕಿ ಬದಿಯ ಸೀಟಿನಲ್ಲಿ ಕುಳಿತು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, ಆ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಂಗ್ಲಾದೇಶದ ಢಾಕಾಗೆ ಇಂಡಿಗೋ ವಿಮಾನವು ತಮಿಳುನಾಡಿನ ಚೆನ್ನೈನಿಂದ ಹೊರಟಿತ್ತು. ಈ ವೇಳೆ ಚಂದ್ರಯಾನ-3 ಗಗನಕ್ಕೇರುತ್ತಿತ್ತು. ಈ ದೃಶ್ಯವನ್ನು ಕಿಟಕಿಯಿಂದ ವೀಕ್ಷಿಸುವಂತೆ ವಿಮಾನದ ಪೈಲಟ್ ಘೋಷಿಸಿದರು.

ಈ ವೇಳೆ ಕಿಟಕಿ ಬದಿಯ ಸಿಟ್‍ನಲ್ಲಿ ಕುಳಿತಿದ್ದ ಪ್ರಯಾಣಿಕ ಪೊನ್ನುರಾಜ್ ಎಂಬುವವರು ತಮ್ಮ ಮೊಬೈಲ್‍ನಲ್ಲಿ ದೃಶ್ಯವನ್ನು ಸೆರೆ ಹಿಡಿದಿದ್ದು, ಅದನ್ನು ತಮ್ಮ ಟ್ವಿಟರ್‍‌ನಲ್ಲಿ ಪೋಸ್ಟ್‌ ಮಾಡಿದ್ದರು.

“ಚೆನ್ನೈನಿಂದ ಢಾಕಾಕ್ಕೆ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಈ ಐತಿಹಾಸಿಕ ಘಟನೆಯನ್ನು ವೀಕ್ಷಿಸಲು ಘೋಷಿಸಿದರು. ಚಂದ್ರಯಾನ 3ರ ಐತಿಹಾಸಿಕ ಉಡಾವಣೆಯನ್ನು ವಿಮಾನದಿಂದ ವೀಕ್ಷಿಸಲು ನಾನು ಅದೃಷ್ಟ ಪಡೆದಿದ್ದೆ” ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೋದಿ ವಿರುದ್ಧ ಒಂದಾಗಲು ಪ್ರತಿಪಕ್ಷಗಳಿಂದ ಸಭೆ; ಖಾಸಗಿ ಹೋಟೆಲ್​ನಲ್ಲಿ ಭರದ ಸಿದ್ಧತೆ

ಬಳಿಕ ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನು ಇಸ್ರೋ ಮೆಟೀರಿಯಲ್ಸ್‌ನ ನಿವೃತ್ತ ನಿರ್ದೇಶಕ ಮತ್ತು ರಾಕೆಟ್ ತಯಾರಿಕಾ ತಜ್ಞ ಡಾ ಪಿ.ವಿ ವೆಂಕಟಕೃಷ್ಣನ್ ಹಾಗೂ ಇಂಡಿಗೋ ಸಂಸ್ಥೆ ಕೂಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...