‘ಡ್ಯೂಟಿ ಮುಗಿಯಿತು’ ಎಂದು ರೈಲು ನಿಲ್ಲಿಸಿ ಹೊರಟುಹೋದ ಚಾಲಕ: ಕಕ್ಕಾಬಿಕ್ಕಿಯಾದ ಪ್ರಯಾಣಿಕರು!

Date:

  • ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಬುರ್ವಾಲ್ ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಘಟನೆ
  • ಸುಮಾರು ಮೂರೂವರೆ ಗಂಟೆ ಹಸಿವು, ಬಾಯಾರಿಕೆಯಿಂದ ಕಂಗೆಟ್ಟ ಪ್ರಯಾಣಿಕರು

‘ಡ್ಯೂಟಿ ಮುಗಿಯಿತು’ ಎಂದು ಹೇಳಿ ಚಾಲಕ (ಲೋಕೊ ಪೈಲಟ್) ರೈಲನ್ನು ಮಧ್ಯದಲ್ಲಿ ನಿಲ್ಲಿಸಿ ಹೊರಟು ಹೋದ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಬುರ್ವಾಲ್ ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಇದರಿಂದಾಗಿ ಎರಡು ಎಕ್ಸ್‌ಪ್ರೆಸ್ ರೈಲುಗಳ ಸುಮಾರು 2,500ಕ್ಕೂ ಹೆಚ್ಚು ಪ್ರಯಾಣಿಕರು ಮೂರುವರೆ ಗಂಟೆಗಳ ಕಾಲ ಅನ್ನ, ನೀರಿಲ್ಲದೇ ರೈಲು ನಿಲ್ದಾಣದಲ್ಲೇ ಉಳಿದು ಹೈರಾಣಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈಲಿನೊಳಗೆ ನೀರು, ಆಹಾರ ಹಾಗೂ ವಿದ್ಯುತ್ ಸರಬರಾಜು ಕೂಡ ಇಲ್ಲದೆ, ಯಾತನೆಗೊಳಗಾಗಿದ್ದ ಪ್ರಯಾಣಿಕರು ಆಕ್ರೋಶಗೊಂಡು ಪ್ರತಿಭಟನೆ ನಡೆಸಿದ್ದಲ್ಲದೇ, ಇನ್ನೊಂದು ಎಕ್ಸ್‌ಪ್ರೆಸ್ ರೈಲು ಹೋಗದಂತೆ ತಡೆದಿದ್ದಾರೆ.

ಎರಡೂ ರೈಲುಗಳು ರೈಲು ನಿಲ್ದಾಣದಲ್ಲೇ ನಿಂತ ಪರಿಣಾಮ ಸುಮಾರು 2,500 ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ವಿಷಯ ತಿಳಿದ ನಂತರ ರೈಲ್ವೇ ಇಲಾಖೆಯು ಬೇರೆ ಲೋಕೊಪೈಲಟ್ ಮತ್ತು ಸಿಬ್ಬಂದಿಯನ್ನು ಕಳುಹಿಸಿ ರೈಲನ್ನು ನಿಗದಿತ ಸ್ಥಾನಕ್ಕೆ ತಲುಪಿಸಿದೆ. ಚಾಲಕನ ವರ್ತನೆಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯನ್ನು ದೃಢೀಕರಿಸಿ ಮಾಹಿತಿ ನೀಡಿರುವ ಈಶಾನ್ಯ ರೈಲ್ವೆಯ ಅಧಿಕಾರಿಗಳು, “ರೈಲು ಸಂಖ್ಯೆ 15203 ಬರೌನಿ-ಲಕ್ನೋ ಎಕ್ಸ್‌ಪ್ರೆಸ್ ಬುರ್ವಾಲ್ ಜಂಕ್ಷನ್‌ ರೈಲು ನಿಲ್ದಾಣವನ್ನು ತಲುಪಿದ ನಂತರ ಲೋಕೋ ಪೈಲಟ್ ಡ್ಯೂಟಿ ಮುಂದುವರಿಯಲು ನಿರಾಕರಿಸಿದರು. ಆ ಬಳಿಕ ಬೇರೊಬ್ಬ ಲೊಕೋ ಪೈಲಟ್ ಅನ್ನು ಸ್ಥಳಕ್ಕೆ ಕರೆಸಿ ನಿಗದಿತ ಸ್ಥಳಕ್ಕೆ ಪ್ರಯಾಣಿಕರನ್ನು ಕರೆದೊಯ್ಯುವಂತೆ ವ್ಯವಸ್ಥೆ ಮಾಡಲಾಯಿತು. ಈ ಘಟನೆಯಿಂದ ರೈಲು ಲಕ್ನೋಗೆ ತಡವಾಗಿ ತಲುಪಿತು” ಎಂದು ತಿಳಿಸಿದ್ದಾರೆ.


ಈ ನಡುವೆ ಲೋಕೋ ಪೈಲಟ್ ಕೆಲಸ ಮುಂದುವರಿಸಲು ನಿರಾಕರಿಸಿದ್ದಾರೆ ಎಂದು ಪ್ರಯಾಣಿಕರಿಗೆ ಸ್ಟೇಷನ್ ಮಾಸ್ಟರ್ ತಿಳಿಸುವ ವಿಡಿಯೋ ವೈರಲಾಗಿದೆ. ರೈಲು ಬುಧವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ನಿಲ್ದಾಣಕ್ಕೆ ತಲುಪಿತ್ತು ಎಂದು ಕೂಡ ಅಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನಮ್ಮ ಪ್ರಯಾಣವು ಗರಿಷ್ಠ 25 ಗಂಟೆ 20 ನಿಮಿಷಗಳಲ್ಲಿ ಕೊನೆಗೊಳ್ಳಬೇಕಿತ್ತು. ಆದರೆ ಈ ವಿಶೇಷ ರೈಲಿನಲ್ಲಿ ನಮಗೆ ಇದು ಮೂರನೇ ದಿನ. ಇದು ನಮ್ಮಂತಹ ಬಡ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ನೀಡಿದ ಚಿತ್ರಹಿಂಸೆಯಾಗಿದೆ. ಲೋಕೋ ಪೈಲಟ್‌ಗಳು ನಿದ್ರೆ ಇಲ್ಲದ ಕಾರಣಕ್ಕೆ ಡ್ಯೂಟಿ ಮುಗಿಸಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ಉತ್ತರಿಸಿದ್ದಾರೆ. ಆದರೆ ನಮ್ಮ ಅವಸ್ಥೆಯನ್ನು ಅಧಿಕಾರಿಗಳು ಯೋಚಿಸಿದ್ದಾರ? ಅನ್ನ ನೀರಿಲ್ಲದೆ ಮೂರೂವರೆ ಗಂಟೆ ರೈಲಲ್ಲೇ ಕೊಳೆಯುವಂತೆ ಮಾಡಿದ್ದಾರೆ. ಇದಕ್ಕೆ ಯಾರು ಹೊಣೆ?” ಎಂದು ಪ್ರಯಾಣಿಕರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...