ನನಗೆ ಬದುಕಲು ಆಸಕ್ತಿ ಇಲ್ಲ: ಸಿಜೆಐಗೆ ಬಹಿರಂಗ ಪತ್ರ ಬರೆದ ಲೈಂಗಿಕ ಕಿರುಕುಳಕ್ಕೊಳಗಾದ ಜಿಲ್ಲಾ ನ್ಯಾಯಾಧೀಶೆ!

Date:

ಕೆಲಸದ ಸ್ಥಳಗಳಲ್ಲಿ ಮಹಿಳಾ ಉದ್ಯೋಗಿಗಳಿಗೆ ಆಗುತ್ತಿರುವ ಲೈಂಗಿಕ ಕಿರುಕುಳ ಪ್ರಕರಣ ಈಗ ನ್ಯಾಯಾಂಗ ಕೂಡ ಹೊರತಾಗಿಲ್ಲ, ಅಲ್ಲಿಯೂ ಕೂಡ ಲೈಂಗಿಕ ಕಿರುಕುಳ ನಡೆಯುತ್ತಿದೆ ಎಂಬ ಅಂಶ ಬಹಿರಂಗಗೊಂಡಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಇಂಥದ್ದೊಂದು ಘಟನೆ ಬೆಳಕಿಗೆ ಬಂದಿದೆ.

ನ್ಯಾಯದಾನ ಮಾಡುವ ಹಾಗೂ ಆರೋಪಿಗಳಿಗೆ ಶಿಕ್ಷೆ ವಿಧಿಸುವ ನ್ಯಾಯಾಧೀಶೆಯೇ ಲೈಂಗಿಕ ಕಿರುಕುಳಕ್ಕೆ ಒಳಗಾಗಿ, ದಾರಿ ಕಾಣದಾಗದೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರಿಗೆ ಬಹಿರಂಗ ಪತ್ರ ಬರೆದಿರುವ ಸಂಗತಿ ವರದಿಯಾಗಿದ್ದು, “ನನಗೆ ಬದುಕಲು ಆಸಕ್ತಿ ಇಲ್ಲ, ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ನೀಡಿ” ಎಂಬ ಆಘಾತಕಾರಿ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮ್ಮ ಹಿರಿಯ ನ್ಯಾಯಾಧೀಶರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿರುವ ಉತ್ತರ ಪ್ರದೇಶದ ನ್ಯಾಯಾಧೀಶೆಯೊಬ್ಬರು, ಆತ್ಮಹತ್ಯೆ ಮಾಡಿಕೊಳ್ಳಲು ನನಗೆ ಅನುಮತಿ ನೀಡುವಂತೆ ಕೋರಿ ಬರೆದಿರುವ ಬಹಿರಂಗ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಚಾರ ಮಾಧ್ಯಮಗಳಲ್ಲೂ ಕೂಡ ಭಾರೀ ಸದ್ದು ಮಾಡುತ್ತಿರುವ ನಡುವೆಯೇ, ಈ ಸಂಬಂಧ ಶೀಘ್ರವೇ ವರದಿ ನೀಡುವಂತೆ ಸಿಜೆಐ ಡಿವೈ ಚಂದ್ರಚೂಡ್ ಆದೇಶಿಸಿದ್ದಾರೆ.

196664 tsqjewywvw 1702617051

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನಿರ್ದೇಶನದ ಮೇರೆಗೆ, ಸುಪ್ರೀಂ ಕೋರ್ಟ್‌ನಿಂದ ಸದ್ಯ ಪ್ರಕರಣವಿರುವ ಅಲಹಾಬಾದ್ ಉಚ್ಚ ನ್ಯಾಯಾಲಯಕ್ಕೆ ಈ ಬಗ್ಗೆ ಮಾಹಿತಿ ವರದಿ ನೀಡುವಂತೆ ತಿಳಿಸಲಾಗಿದೆ. ಮಹಿಳಾ ನ್ಯಾಯಾಧೀಶೆ ಸಲ್ಲಿಸಿದ ಎಲ್ಲ ದೂರುಗಳ ಪ್ರಸ್ತುತ ಸ್ಥಿತಿಯನ್ನು ಸಿಜೆಐ ಕೋರಿದ್ದಾರೆ. ಸದ್ಯ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕೂಡ ಬಹಿರಂಗ ಪತ್ರದ ಬಗ್ಗೆ ಗಮನಹರಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್‌ನ ಪ್ರಧಾನ ಕಾರ್ಯದರ್ಶಿ ಸುಪ್ರೀಂಕೋರ್ಟ್ ಪ್ರಧಾನ ಕಾರ್ಯದರ್ಶಿ ಅತುಲ್ ಎಂ ಕುರ್ಹೇಕರ್ ಮಾಹಿತಿ ನೀಡಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

‘ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ’ ಎಂದ ನ್ಯಾಯಾಧೀಶೆ
ತಾವು ಎದುರಿಸಿದ ಲೈಂಗಿಕ ಕಿರುಕುಳದ ಬಗ್ಗೆ 2023ರ ಜುಲೈ ತಿಂಗಳಿನಲ್ಲಿಯೇ ಹೈಕೋರ್ಟ್‌ನ ಆಂತರಿಕ ದೂರು ಸಮಿತಿಯಲ್ಲಿ ದೂರು ಸಲ್ಲಿಸಿದ್ದೆ. ಈ ಸಂಬಂಧ ತನಿಖೆಗೆ ಆರೋಪಿಸಲಾಗಿತ್ತು. ಆದರೆ ಆ ತನಿಖೆಯು ಒಂದು ಪ್ರಹಸನ ಮತ್ತು ನಟನೆಯಂತಿತ್ತು. ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ನ್ಯಾಯಾಧೀಶೆ ಸಿಜೆಐಗೆ ಬರೆದ ಪತ್ರದಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

“ಈ ವಿಚಾರಣೆಯಲ್ಲಿನ ಸಾಕ್ಷಿದಾರರು ಜಿಲ್ಲಾ ನ್ಯಾಯಾಧೀಶರ ಅಧೀನದಲ್ಲಿ ಕೆಲಸ ಮಾಡುವವರು. ತಮ್ಮ ಮೇಲಾಧಿಕಾರಿಗಳ ವಿರುದ್ಧ ಸಾಕ್ಷ್ಯ ಹೇಳುವುದನ್ನು ಸಮಿತಿ ಹೇಗೆ ನಿರೀಕ್ಷಿಸುತ್ತದೆ ಎನ್ನುವುದು ನನಗೆ ಅರ್ಥವಾಗುತ್ತಿಲ್ಲ” ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.

“ತುಂಬಾ ನೋವು ಅನುಭವಿಸಿದ್ದೇನೆ. ಹಾಗಾಗಿ, ಘನತೆಯುಳ್ಳ ಮಾರ್ಗದಲ್ಲಿ ನನ್ನ ಜೀವ ಅಂತ್ಯಗೊಳಿಸಲು ದಯವಿಟ್ಟು ನನಗೆ ಅನುಮತಿ ನೀಡಿ” ಎಂದು ಸಿಜೆಐ ಅವರನ್ನು ಉಲ್ಲೇಖಿಸಿ ಬಾಂದದ ಮಹಿಳಾ ನ್ಯಾಯಾಧೀಶರು ಪತ್ರ ಬರೆದಿದ್ದಾರೆ.

ಬಾರಾಬಂಕಿಯಲ್ಲಿ ಕೆಲಸದ ಮಾಡುತ್ತಿದ್ದ ವೇಳೆ ಜಿಲ್ಲಾ ನ್ಯಾಯಾಧೀಶ ಹಾಗೂ ಅವರ ಸಹವರ್ತಿಗಳು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸದ್ಯ ಬಾಂದಾದಲ್ಲಿ ಸೇವೆಯಲ್ಲಿರುವ ಜಿಲ್ಲಾ ನ್ಯಾಯಾಧೀಶೆ ಪತ್ರದಲ್ಲಿ ಆರೋಪಿಸಿದ್ದಾರೆ.

“ನಾನು ತೀವ್ರ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನನ್ನನ್ನು ತೀರಾ ಕಸದಂತೆ ನಡೆಸಿಕೊಳ್ಳಲಾಗಿದೆ. ನಾನೊಬ್ಬಳು ಅನಗತ್ಯ ಕ್ರಿಮಿಯಂತೆ ಭಾಸವಾಗುತ್ತಿದೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಡಿಸೆಂಬರ್ 13 ರಂದು ನ್ಯಾಯಾಧೀಶೆಯು ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆಯನ್ನು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದಾಗ್ಯೂ, ನ್ಯಾಯಮೂರ್ತಿ ಹೃಷಿಕೇಶ್ ರಾಯ್ ನೇತೃತ್ವದ ಪೀಠವು ಆಕೆಯ ಮನವಿಯನ್ನು ವಜಾಗೊಳಿಸಿತ್ತು ಎಂದು ಬಾರ್ & ಬೆಂಚ್ ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...