ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ಯುವಕರ ನಡುವೆ ಗಲಾಟೆಯಾಗಿ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ರಾಯಚೂರು ನಗರದ ತಿಮ್ಮಾಪುರ ಪೇಟೆಯಲ್ಲಿ ನಡೆದಿದೆ.
ನಗರದ ತಿಮ್ಮಾಪುರ ಪೇಟೆ ಹಾಗೂ ಬೇಸ್ತವಾರ ಪೇಟೆ ಬಡಾವಣೆಯ ಯುವಕರ ಗುಂಪಿನ ನಡುವೆ ಕ್ಷುಲಕ ಕಾರಣಕ್ಕೆ ಜಗಳ ಉಂಟಾಗಿದೆ. ಗಲಾಟೆಯಲ್ಲಿ ಕೃಷ್ಣ ಎನ್ನುವ ಯುವಕನ ಮೇಲೆ ಹಲ್ಲೆ ಮಾಡಿದ್ದರಿಂದ ಗಾಯಗೊಂಡಿದ್ದಾನೆ. ನಂತರ ಮತ್ತೊಂದು ಗುಂಪಿನ ಯುವಕರು ಗಲಾಟೆ ಮಾಡಿ ದ್ವಿಚಕ್ರ ವಾಹನದ ಮೇಲೆ ಕಲ್ಲು ಹಾಕಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ರಸಗೊಬ್ಬರ ಪೂರೈಕೆ ಮಾಡುವಂತೆ ರೈತ ಸಂಘಟನೆ ಒತ್ತಾಯ
ಮಾಹಿತಿ ತಿಳಿಯುತ್ತಿದ್ದಂತೆ ನೇತಾಜಿ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ನಡೆಸಿದ್ದಾರೆ. ಹಲ್ಲೆ ಮಾಡಿರುವ ಕುರಿತು ದೂರು ದಾಖಸಿಲಿಕೊಂಡು ತನಿಖೆ ಮುಂದುವರೆಸಿದ್ದಾರೆ. ಈ ಕುರಿತು ನೇತಾಜಿ ನಗರ ಪೋಲಿಸ್ ಠಾಣೆಯಲ್ಲಿ ಇಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ.





