ರಾಮನಗರ‌ | ಮಕ್ಕಳಿಗೆ ಸೂಕ್ತ ಪ್ರೇರಣೆ ದೊರೆತರೆ ಪ್ರತಿಭೆಗಳು ಅರಳುತ್ತವೆ: ಆರ್ ಕೆ ಭೈರಲಿಂಗಯ್ಯ

Date:

ಮಕ್ಕಳಿಗೆ ಸೂಕ್ತ ಪ್ರೇರಣೆ ದೊರೆತರೆ ಪ್ರತಿಭೆಗಳು ಅರಳುತ್ತವೆ ಮತ್ತು ಸಾಧಿಸುವ ಛಲ ಮೂಡುತ್ತದೆ ಎಂದು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಆರ್ ಕೆ ಭೈರಲಿಂಗಯ್ಯ ಅಭಿಮತ ವ್ಯಕ್ತಪಡಿಸಿದರು.

ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಹೋಲಿಕ್ರೆಸೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಧಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಮಕ್ಕಳಲ್ಲಿ ಪ್ರತಿಭೆಯನ್ನು ಗುರುತಿಸುವುದು ತಂದೆ-ತಾಯಿ ಹಾಗೂ ಶಿಕ್ಷಕರ ಪ್ರಮುಖ ಕರ್ತವ್ಯವಾಗಿದೆ. ಅಂಕಗಳಿಗಿಂತ ಸಂಸ್ಕಾರಗಳನ್ನು ಬೆಳೆಸುವುದು ಮುಖ್ಯ” ಎಂದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸನ್ಮಾನ 1 1

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ‌ ಟಿ ದಿನೇಶ್ ಬಿಳಗುಂಬ ಮಾತನಾಡಿ, “ಪ್ರತಿ ವರ್ಷ ಕನ್ನಡದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುತ್ತಿದ್ದೇವೆ. ಕನ್ನಡ ಸಾಹಿತ್ಯ ಪರಿಷತ್ ಕನ್ನಡವನ್ನು ಅಜರಾಮರ ಮಾಡಲು ಶ್ರಮಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಗೌರವ ನೀಡಲು ಮುಂದಾಗಿದೆ” ಎಂದು ಹೇಳಿದರು.

ಪ್ರಧಾನ ಅತಿಥಿಯಾಗಿ ಆಗಮಿಸಿದ್ದ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ ಟಿ ನಾಗೇಶ್ ಮಾತನಾಡಿ, “ಸಂಸ್ಕೃತಿಯನ್ನು ಉಳಿಸುವ ಕೆಲಸ ಮುಂದಿನ ತಲೆಮಾರುಗಳಾದ ಇಂದಿನ ವಿದ್ಯಾರ್ಥಿಗಳಿಂದಲೇ ಸಾಧ್ಯ” ಎಂದು ಹೇಳಿದರು.

ಸನ್ಮಾನ 2

ಹೋಲಿಕ್ರೆಸೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅಲ್ತಾಫ್ ಅಹಮದ್ ಮಾತನಾಡಿ, “ಖಾಸಗಿ ಶಾಲೆಗಳಲ್ಲಿ ಕನ್ನಡಕ್ಕೆ ಸೂಕ್ತ ಪ್ರಾಮುಖ್ಯತೆ ಕೊಡಲಾಗುತ್ತಿಲ್ಲ. ಕನ್ನಡವನ್ನು ಜೀವಂತವಾಗಿ ಉಳಿಸಲು ಕನ್ನಡಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹತ್ತು ಮಂದಿ ಫ್ರೌಡಶಾಲಾ ಕನ್ನಡ ಶಿಕ್ಷಕರನ್ನು, 14 ಮಂದಿ ದ್ವಿತೀಯ ಪಿಯುಸಿ ಕನ್ನಡ ವಿದ್ಯಾರ್ಥಿಗಳನ್ನು, 18 ಮಂದಿ ಎಸ್‌ಎಸ್‌ಎಲ್‌ಸಿ ಕನ್ನಡ ವಿದ್ಯಾರ್ಥಿಗಳನ್ನು ಮತ್ತು ಚಿನ್ನದ ಪದಕ ಪಡೆದ ಆರು ಸಾಧಕರನ್ನು ಸನ್ಮಾನಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಅಪಘಾತದ ವೇಳೆ ತಾಯಿಯನ್ನು ರಕ್ಷಿಸಿದ್ದ ಬಾಲಕಿಗೆ ಜಿಲ್ಲಾಧಿಕಾರಿ ಸನ್ಮಾನ

ಗೌರವ ಕಾರ್ಯದರ್ಶಿಗಳಾದ ಅರುಣ್ ಕವಣಾಪುರ, ಕಿರಣ್ ಎನ್, ಕೋಶಾಧ್ಯಕ್ಷ ನಂಜುಂಡಪ್ಪ ಬಿ ಕೆ, ಸಾಹಿತಿಗಳಾದ ಜಿ ಎಚ್ ರಾಮಯ್ಯ, ವನರಾಜು, ಕರೀಗೌಡರು, ರಾಮಕೃಷ್ಣ ಡಿ, ಸ್ಟ್ಯಾನ್ಲಿ ಪಾಲ್, ನಗರ ಘಟಕದ ಅಧ್ಯಕ್ಷ ಡೈರಿ ವೆಂಕಟೇಶ್, ಕಸಬಾ ಹೋಬಳಿ ಅಧ್ಯಕ್ಷ ಮಹಾದೇವು ಲಕ್ಕಸಂದ್ರ ದೇವರಾಜು ಕ್ಯಾಸಾಪುರ, ಬಿ ಟಿ ರಾಜೇಂದ್ರ, ಸಮಧ್, ಅರುಣ್ ಆನುಮಾನಹಳ್ಳಿ, ಡಾ ಕೃಷ್ಣ ಕೆ ಎಂ, ಮತ್ತಿಕೆರೆ ಚಲುವರಾಜು, ಲೋಕೇಶ್ ಬಿಡದಿ ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...