ಸಿನಿಮಾಗಿಂತ ವಾಸ್ತವ ಬದುಕು ಭಿನ್ನ : `ಚಿತ್ತರಂಗ’ ಕೃತಿ ಬಿಡುಗಡೆಯಲ್ಲಿ ಅಗ್ರಹಾರ ಕೃಷ್ಣಮೂರ್ತಿ

Date:

  • ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಚಿತ್ತರಂಗ ಕಾದಂಬರಿ ಬಿಡುಗಡೆ
  • ಕೃತಿ ಲೋಕಾರ್ಪಣೆ ಮಾಡಿದ ಹಿರಿಯ ನಟ ಶ್ರೀನಿವಾಸ ಪ್ರಭು

ಸಿನಿಮಾ ರಂಗದಲ್ಲಿ ಏನು ನಡೆದರೂ ನಾವು ಚಿಂತಿಸುವುದಿಲ್ಲ. ಏಕೆಂದರೆ ಸಿನಿಮಾಗಿಂತ ವಾಸ್ತವ ಬದುಕು ಭಿನ್ನವಾಗಿದೆ ಎಂದು ಹಿರಿಯ ಲೇಖಕ ಅಗ್ರಹಾರ ಕೃಷ್ಣಮೂರ್ತಿ ಅವರು `ಚಿತ್ತರಂಗ’ ಕಾದಂಬರಿ ಬಿಡುಗಡೆ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತ್ಯಲೋಕ ಪಬ್ಲಿಕೇಷನ್ಸ್‌ ಹಾಗೂ ಬುಕ್‌ಬ್ರಹ್ಮ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಲೇಖಕಿ ಆಶಾ ರಘು ಅವರ ‘ಚಿತ್ತರಂಗ’ ಕಾದಂಬರಿ ಲೋಕಾರ್ಪಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ನಿಜ ಜೀವನದ ಘಟನೆಗಳನ್ನೇ ನಾವು ಸಿನಿಮಾಗೆ ಕೊಂಡಿಯಾಗಿಸುತ್ತೇವೆ. ಆದ್ದರಿಂದ ಸಿನಿಮಾ ರಂಗದ ವ್ಯಕ್ತಿಗಳ ಬಗ್ಗೆ ನಾವು ಚಿಂತಿಸುವುದಿಲ್ಲ. ಅವರಿಗಿಂತ ನಮ್ಮ ಬದುಕು ಭಿನ್ನವಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿನಿಮಾ ಜಗತ್ತನ್ನು ನಾವು ದೂರ ನಿಂತೇ ನೋಡುತ್ತೇವೆ. ಸಿನಿಮಾ ರಂಗವನ್ನು ನೋಡುವ ಹಾಗೂ ಅನುಭವಿಸುವ ಮೂಲಕ ಕಲಾ ಜಗತ್ತಿನ ಸುಖ ಪಡೆಯುತ್ತೇವೆ” ಎಂದು ವಿವರಿಸಿದರು.

ಹಿರಿಯ ನಟ ಶ್ರೀನಿವಾಸ ಪ್ರಭು ಕೃತಿ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿ, “ಕೃತಿಯ ಕೇಂದ್ರ ಪಾತ್ರಗಳು ಮನೋ ಆಳಕ್ಕೆ ಇಳಿದು ಬಗೆಯುತ್ತಾ ಎಳೆ ಎಳೆಯಾಗಿ ಮನೋ ವ್ಯಾಪಾರಗಳ ಬಿಡಿಸಿ, ಅನಾವರಣಗೊಳಿಸುವ ಲೇಖಕಿಯ ನಿರೂಪಣಾ ಶೈಲಿ ಇಲ್ಲಿ ಮುಖ್ಯವಾಗಿದೆ. ರೋಚಕ ಘಟನೆಗಳಿಂದ ಹಾಗೂ ನಿರೀಕ್ಷಿತ ವಿಚಾರಗಳಿಂದ ಕೃತಿಯನ್ನು ಪಾರು ಮಾಡುವುದು ಲೇಖಕಿಗೆ ಸವಾಲಾಗಿದೆ” ಎಂದು ತಿಳಿಸಿದರು.

“ಒಬ್ಬ ನಿರ್ದೇಶಕ ತಾನು ನಿರ್ದೇಶಿಸುವ ಚಿತ್ರ ಅಥವಾ ನಾಟಕವನ್ನು ತನ್ನ ಮನೋರಂಗದಲ್ಲಿ ಪೂರ್ವಭಾವಿಯಾಗಿ ನೋಡಿರಬೇಕು. ಲೇಖಕರು ತಮ್ಮ ಮನೋರಂಗದಲ್ಲಿ ಎಲ್ಲ ಘಟನೆಗಳನ್ನು ಸಾಕ್ಷಾತ್ಕಾರ ಮಾಡಿಕೊಂಡು ಕಾದಂಬರಿ ರೂಪವನ್ನು ಕೊಟ್ಟಿದ್ದಾರೆ. ಚಿತ್ತರಂಗ ಇನ್ನಿಲ್ಲದ ಹಾಗೆ ಓದುಗರ ತೆಕ್ಕೆಗೆ ಆವರಿಸುತ್ತದೆ” ಎಂದು ಅಭಿಪ್ರಾಯಪಟ್ಟರು.

ವಿಮರ್ಶಕ ಎಚ್.ಎಸ್. ಸತ್ಯನಾರಾಯಣ, “ಲೇಖಕಿ ಮೂಲ ಕತೆಯ ಸೂಕ್ಷ್ಮತೆಯ ಬರವಣಿಗೆಯನ್ನು ಇಟ್ಟುಕೊಂಡು ಕೃತಿಗೆ ಚಿತ್ತರಂಗ ಎಂದು ಹೆಸರಿಟ್ಟಿದ್ದಾರೆ. ಸಿನಿಮಾ ಹಾಗೂ ಸಾಹಿತ್ಯಕ್ಕೆ ಶೀರ್ಷಿಕೆ ಬಹುಮುಖ್ಯ ಎಂಬುದು ಇಲ್ಲಿ ಸಾಬೀತಾಗಿದೆ. ಇದರ ವಸ್ತು ವಿಶ್ಲೇಷಣೆ, ನಿರೂಪಣೆ ಮಹತ್ವ ಪಡೆದುಕೊಂಡಿದೆ” ಎಂದು ಬಣ್ಣಿಸಿದರು.

ಹಿರಿಯ ಪತ್ರಕರ್ತ ಗಣೇಶ ಕಾಸರಗೋಡು, “ಇದು ಸುಬ್ಬಣ್ಣ ಅಲ್ಲ, ನಿರ್ದೇಶಕ ಪುಟ್ಟಣ್ಣ ಎಂದು ಘಂಟಾಘೋಷವಾಗಿ ಹೇಳಬಹುದು. ಚಿತ್ತರಂಗ ಒಳಗಿನ ಮಾನಸಿಕ ವಿಶ್ಲೇಷಣೆಯೇ ಈ ಕೃತಿ. ಸಿನಿಮಾವಾಗುವಂತಹ ಎಲ್ಲ ಸದಭಿರುಚಿಯ ವಿಚಾರಗಳು ಕೃತಿಯೊಳಗೆ ಅಡಕವಾಗಿದೆ” ಎಂದು ವಿಶ್ಲೇಷಿಸಿದರು.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ಸಂಸತ್ತಿನಿಂದ ಅನರ್ಹ | ಹತ್ತು ಗಂಭೀರ ಪ್ರಶ್ನೆಗಳು

ಲೇಖಕಿ ಆಶಾ ರಘು, “ಆಧುನಿಕ ಕಾಲಘಟ್ಟದ ನನ್ನ ಕಾದಂಬರಿ ಚಿತ್ತರಂಗ. ಇದು ನನ್ನ ಸಿನಿಮಾರಂಗದ ಕುರಿತಾದ ವಿಭಿನ್ನ ಪ್ರಯತ್ನವಾಗಿದೆ. 70-80ರ ದಶಕದ ಕನ್ನಡ ಚಿತ್ರರಂಗದ ವಾತಾವರಣವನ್ನು ಒಳಗೊಂಡಂತಹ ಕಾದಂಬರಿ ಇದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...