45 ದಿನಗಳಿಗಿಂತ ಹೆಚ್ಚು ಅವಧಿಯ ತಾತ್ಕಾಲಿಕ ಗುತ್ತಿಗೆಗಳಿಗೂ ಮೀಸಲಾತಿ ಅನ್ವಯ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ

Date:

45 ದಿನಗಳಿಗಿಂತ ಹೆಚ್ಚು ಅವಧಿಯ ತಾತ್ಕಾಲಿಕ ಗುತ್ತಿಗೆಗಳಿಗೂ ಮೀಸಲಾತಿ ಅನ್ವಯವಾಗುತ್ತದೆ. ಈ ಸಂಬಂಧ ಈಗಾಗಲೇ ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಆದೇಶ ಹೊರಡಿಸಿದ್ದು, ಜಾರಿಗೊಳಿಸಲು ತಿಳಿಸಿರುವುದಾಗಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಸರ್ಕಾರಿ ಗುತ್ತಿಗೆ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೀಸಲಾತಿ ಅನುಷ್ಠಾನದ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ವೇಳೆ ಕೇಂದ್ರ ಸರ್ಕಾರವು ಈ ರೀತಿಯ ಹೇಳಿಕೊಂಡಿದೆ.

45 ದಿನ ಅಥವಾ ಅದಕ್ಕಿಂತ ಹೆಚ್ಚಿನ ಸೇವೆ ಇರುವ ತಾತ್ಕಾಲಿಕ ಗುತ್ತಿಗೆ ಹುದ್ದೆ ಇದ್ದರೆ ಅದಕ್ಕೂ ಮೀಸಲಾತಿ ಕೋಟಾ ಅನ್ವಯವಾಗುತ್ತದೆ ಎಂಬ ನೀತಿಯನ್ನು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರವು ತಿಳಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌, ಅದು ಸರಿಯಾಗಿ ಅನುಷ್ಠಾನವಾಗುವಂತೆ ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಕಾರ್ಯಕರ್ತ ಇಮ್ರಾನ್ ಅಹ್ಮದ್ ಎಂಬುವವರು ಸುಪ್ರೀಂ ಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸಿದ್ದರು. ಇವರ ಪರವಾಗಿ ಹಿರಿಯ ವಕೀಲ ಸಂಜಯ್ ಹೆಗ್ಡೆ ವಾದಿಸಿದರಲ್ಲದೇ, ‘ವಿವಿಧ ಸರ್ಕಾರಿ ಇಲಾಖೆಗಳು, ಡೀಮ್ಡ್ ವಿಶ್ವವಿದ್ಯಾಲಯಗಳು ಇತ್ಯಾದಿಗಳಲ್ಲಿನ ಹೊರಗುತ್ತಿಗೆ/ಗುತ್ತಿಗೆ ಹುದ್ದೆಗಳನ್ನು ಮೀಸಲಾತಿ ನೀತಿಯಡಿ ಭರ್ತಿ ಮಾಡುತ್ತಿಲ್ಲ. ಅಲ್ಲದೇ, ಅಧಿಕೃತ ಮಾಹಿತಿಯ ಪ್ರಕಾರ, ಸರ್ಕಾರಿ ವಲಯದಲ್ಲಿ ಗುತ್ತಿಗೆ-ಹೊರಗುತ್ತಿಗೆ (ತಾತ್ಕಾಲಿಕ) ಉದ್ಯೋಗಿಗಳಿಗೆ ಸಂಬಂಧಿಸಿದಂತೆ ವರ್ಗವಾರು ಅಂಕಿ-ಸಂಖ್ಯೆಯೂ ಸರ್ಕಾರದ ಬಳಿ ಇಲ್ಲ’ ಎಂದು ಸುಪ್ರೀಂ ಕೋರ್ಟಿನ ಗಮನಕ್ಕೆ ತಂದಿದ್ದರು.

ಹಿಂಸಾಚಾರ

ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರವು, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ರಚಿಸಲಾಗಿರುವ ಸಂಸದೀಯ ಸಮಿತಿಯು ಕಳೆದ ವರ್ಷ ಈ ಬಗ್ಗೆ ಪರಿಶೀಲನೆ ನಡೆಸಿದೆ. ಈಗಾಗಲೇ ನೀಡಿದ್ದ ಸರ್ಕಾರಿ ಸೂಚನೆಗಳನ್ನು ಅನುಸರಿಸುತ್ತಿಲ್ಲ ಎಂಬುದನ್ನು ಗಮನಿಸಿದೆ. ಹಾಗಾಗಿ, 45 ದಿನ ಅಥವಾ ಅದಕ್ಕಿಂತ ಹೆಚ್ಚಿನ ಸೇವೆ ಇರುವ ತಾತ್ಕಾಲಿಕ ಗುತ್ತಿಗೆ ಹುದ್ದೆ ಇದ್ದರೆ ಅದಕ್ಕೂ ಮೀಸಲಾತಿ ಕೋಟಾ ಅನ್ವಯವಾಗುತ್ತದೆ ಎಂಬ ನೀತಿಯ ಸೂಚನೆಗಳನ್ನು ಅನುಸರಿಸಲು ನಿರ್ದೇಶಿಸಿದೆ. ಅಲ್ಲದೇ, ಈ ಸಂಬಂಧ ಈಗಾಗಲೇ ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಆದೇಶ ಹೊರಡಿಸಲಾಗಿದೆ” ಎಂದು ತಿಳಿಸಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರನ್ನೊಳಗೊಂಡ ಪೀಠವು ಈ ಸಂಬಂಧ ಕಳೆದ ಅಕ್ಟೋಬರ್ 3 ರಂದು ಆದೇಶ ಕೂಡ ಹೊರಡಿಸಿದೆ. ಆದೇಶದಲ್ಲಿ, ‘ಮೀಸಲಾತಿ ಸಂಬಂಧ ಸರ್ಕಾರ ನೀಡಿರುವ ಮಾರ್ಗಸೂಚನೆಯನ್ನು ಸಂಬಂಧಪಟ್ಟವರು ಉಲ್ಲಂಘಿಸಿದ್ದು ಕಂಡುಬಂದರೆ, ಅರ್ಜಿದಾರರು ಅಥವಾ ಬಾಧಿತರು ಕಾನೂನಿನ ಪ್ರಕಾರ ಸೂಕ್ತ ಪರಿಹಾರ ಪಡೆದುಕೊಳ್ಳಲು ಮುಂದಾಗಬಹುದು’ ಎಂದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...