ಮೂರು ರಾಜ್ಯಗಳಲ್ಲಿ ಮುಂದುವರೆದ ಐಟಿ ದಾಳಿ: ಪತ್ತೆಯಾಯ್ತು ಬರೋಬ್ಬರಿ ₹290 ಕೋಟಿ

Date:

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೂರು ರಾಜ್ಯಗಳಲ್ಲಿ ದಾಳಿ ನಡೆಸಿದ್ದು, ಈವರೆಗೆ ಬರೋಬ್ಬರಿ 290 ಕೋಟಿ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.

ಒಡಿಶಾ ಮೂಲದ ಡಿಸ್ಟಿಲ್ಲರಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿಗಳಲ್ಲಿ ಈವರೆಗೆ ಕನಿಷ್ಠ ₹290 ಕೋಟಿ ನಗದು ವಶಪಡಿಸಿಕೊಳ್ಳಲಾಗಿದ್ದು ದಾಳಿ ಮುಂದುವರಿದಿರುವುದರಿಂದ ಇನ್ನಷ್ಟು ನಗದು ವಶಪಡಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಇದು ಈವರೆಗಿನ ಆದಾಯ ತೆರಿಗೆ ದಾಳಿಗಳಲ್ಲಿ ವಶಪಡಿಸಿಕೊಳ್ಳಲಾದ ಗರಿಷ್ಠ ಪ್ರಮಾಣದ ನಗದು ಎಂದು ಹೇಳಲಾಗುತ್ತಿದೆ. ಮೂರು ರಾಜ್ಯಗಳ ಮೂರು ಸ್ಥಳಗಳಲ್ಲಿನ ಒಂಬತ್ತು ಲಾಕರ್‌ಗಳು ಮತ್ತು ಏಳು ಕೊಠಡಿಗಳ ಪರಿಶೀಲನೆ ಇನ್ನಷ್ಟೇ ನಡೆಯಬೇಕಿದೆ ಎಂದು ಐಟಿ ಇಲಾಖೆ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಪಾಟುಗಳು ಮತ್ತು ಇತರ ಪೀಠೋಪಕರಣಗಳಲ್ಲಿ ನಗದು ಅಡಗಿಸಿಡಲಾಗಿತ್ತು. ಕಪಾಟಿನಲ್ಲಿ ನಗದು ಶೇಖರಿಸಿಟ್ಟಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಒಡಿಶಾ ಮೂಲದ ಬೌದ್ ಡಿಸ್ಟಿಲ್ಲರಿ, ಈ ಕಂಪನಿಗೆ ಸೇರಿದ ಬಲದೇವ್ ಸಾಹು ಇನ್‌ಫ್ರಾ ಕಚೇರಿಗಳು ಹಾಗೂ ಸಂಸ್ಥೆಗೆ ಸೇರಿದ ಅಕ್ಕಿ ಮಿಲ್‌ನಲ್ಲಿ ಶೋಧ ನಡೆದಿದೆ. ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಸಂಸದ ಧೀರಜ್ ಕುಮಾರ್ ಸಾಹು ಅವರಿಗೆ ಸೇರಿದ ಸ್ಥಳಗಳಲ್ಲಿ ಕೋಟ್ಯಂತರ ನಗದು ಪತ್ತೆಯಾಗಿದೆ.

ಡಿಸ್ಟಿಲರೀಸ್ ಕಂಪನಿ ಮೇಲೆ ದಾಳಿ ಮಾಡಿದ ವೇಳೆ ಪತ್ತೆಯಾದ ಹಣವನ್ನು ಎಣಿಸಲು ಅಧಿಕಾರಿಗಳು ಬಳಸಿದ ನಗದು ಯಂತ್ರವೇ ಕೆಟ್ಟು ಹೋಗಿರುವುದಾಗಿಯೂ ವರದಿಯಾಗಿದೆ. ಈ ಎಲ್ಲ ದಾಳಿಗಳಲ್ಲಿ ಸುಮಾರು 150ರಷ್ಟು ಅಧಿಕಾರಿಗಳು ಭಾಗಿಯಾಗಿರುವುದಾಗಿ ವರದಿಯಾಗಿದೆ,

ಆದಾಯ ತೆರಿಗೆ ಅಧಿಕಾರಿಗಳ ಪ್ರತ್ಯೇಕ ತಂಡಗಳು ಎರಡನೇ ದಿನವೂ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿವೆ. ತೆರಿಗೆ ವಂಚನೆ ಆರೋಪದ ಮೇಲೆ ಬೋಲಂಗಿರ್, ಬೌಧ್, ಸಂಬಲ್ಪುರ, ಭುವನೇಶ್ವರ, ಸುಂದರ್ಗಢ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ. ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ನಗದು ವಶಪಡಿಸಿಕೊಂಡಿದ್ದಾರೆ.

ಇನ್ನೊಂದೆಡೆ ಶಿವಗಂಗಾ ಎಂಬ ಕಂಪನಿ ಮೇಲೂ ಐಟಿ ದಾಳಿ ನಡೆದಿದೆ. ರಾಜ್ಯಾದ್ಯಂತ ತನ್ನ ಮಳಿಗೆಗಳ ಮೂಲಕ ಕಂಪನಿಯು ಬಿಲ್‌ಗಳು ಹಾಗೂ ವೋಚರ್‌ಗಳನ್ನು ನಿರ್ವಹಿಸದೆ ದೇಶೀಯ ಮದ್ಯವನ್ನು ಮಾರಾಟ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಶಿವಗಂಗಾ ಕಂಪನಿಗೆ ಸಂಬಂಧಿಸಿದ ಆಸ್ತಿಯ ಮೇಲೆ ದಾಳಿ ನಡೆಸಲಾಗಿದೆ. ಕಂಪನಿಯ ಸುಳ್ಳು ಲೆಕ್ಕ ಸೇರಿದಂತೆ ಮಹತ್ವದ ಮಾಹಿತಿ ಕಲೆ ಹಾಕಲಾಗಿದೆ.

ಒಂದೇ ಕಚೇರಿಯಲ್ಲಿ ಬರೋಬ್ಬರಿ 150 ಕೋಟಿ ನಗದ ಪತ್ತೆ!
ಜಾರ್ಖಂಡ್‌ನ ರಾಂಚಿಯಲ್ಲಿರುವ ಮದ್ಯ ತಯಾರಿಕೆ ಮತ್ತು ಮಾರಾಟ ಸಂಸ್ಥೆಯಾದ ಬೌಧ್ ಡಿಸ್ಲಿಲರೀಸ್ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ ಹಲವು ಕಡೆಗಳಲ್ಲಿ ನಡೆಸಿದ ದಾಳಿ ವೇಳೆ ಒಂದೇ ಕಡೆ ಕಂತೆ ಕಂತೆ ಹಣವನ್ನು ನೋಡಿ ಐಟಿ ಅಧಿಕಾರಿಗಳಿಗೆ ದಂಗಾಗಿದ್ದಾರೆ.

500, 200 ಹಾಗೂ 100 ಮುಖ ಬೆಲೆಯ 150 ಕೋಟಿ ರೂಪಾಯಿ ಒಂದೇ ಕಡೆ ಪತ್ತೆಯಾಗಿದೆ. ಎಲ್ಲ ಕಡೆಗಳಿಂದ ಸೇರಿ ಈವರೆಗೆ ವಶಪಡಿಸಿಕೊಂಡಿರುವ 300 ಕೋಟಿ ರೂಪಾಯಿಗೂ ಅಧಿಕ ನಗದನ್ನು ಚೀಲಗಳಲ್ಲಿ ತುಂಬಿದ ನಂತರ ಟ್ರಕ್‌ನಲ್ಲಿ ಬೋಲಂಗಿರ್‌ನ ಎಸ್‌ಬಿಐ ಬ್ಯಾಂಕ್‌ಗೆ ಜಮಾ ಮಾಡಲಾಗಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...