ಅಯೋಧ್ಯೆಯ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯನ್ನು ಹಬ್ಬದಂತೆ ಆಚರಿಸಿ ಎಂದ ಆರ್‌ಎಸ್‌ಎಸ್

Date:

2024ರ ಜ. 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ಮೂರ್ತಿ ಪ್ರತಿಷ್ಠಾಪನೆ ದಿನವು ದೇಶದ ಜನರ ಪಾಲಿಗೆ ಅತ್ಯಂತ ಸಂತಸದ ಕ್ಷಣ. ಹಾಗಾಗಿ, ಅಂದು ದೇಶಾದ್ಯಂತ ಆ ದಿನವನ್ನು ಹಬ್ಬದಂತೆ ಆಚರಣೆ ಮಾಡಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಕರೆ ನೀಡಿದೆ.

ಗುಜರಾತ್‌ನ ಕಛ್ ಜಿಲ್ಲೆಯ ಭುಜ್‌ನಲ್ಲಿ ಇತ್ತೀಚೆಗೆ ನಡೆದ ಆರ್‌ಎಸ್‌ಎಸ್‌ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ, ರಾಮ ಮಂದಿರ ಉದ್ಘಾಟನೆ ಹಾಗೂ ಅದಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದ ಬಳಿಕ ಈ ಹೇಳಿಕೆ ನೀಡಿದೆ.

ಈ ಬಗ್ಗೆ ಮಾತನಾಡಿರುವ ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಮೂರ್ತಿ ಪ್ರತಿಷ್ಠಾಪನೆ ಸಮಾರಂಭಕ್ಕೂ ಮುನ್ನ ಜನವರಿ 1 ರಿಂದ 15ರ ವರೆಗೆ ಮನೆ ಮನೆಗೆ ತೆರಳಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಆಹ್ವಾನ ಪತ್ರಿಕೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಭವ್ಯವಾದ ಮಂದಿರ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದ್ದು, ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ವಿದೇಶದಲ್ಲಿ ಇರುವವರು ಸೇರಿ ಇದು ನಮಗೆಲ್ಲ ಸಂತಸದ ದಿನ. ಹಲವು ವರ್ಷಗಳ ಪ್ರಯತ್ನದ ಫಲವಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ದೇಶದಾದ್ಯಂತ ಜನರು ಈ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ’ ಎಂದು ಆರ್‌ಎಸ್‌ಎಸ್‌ನ ಪ್ರಚಾರ ಮುಖ್ಯಸ್ಥ ಸುನಿಲ್‌ ಅಂಬೇಕರ್ ತಿಳಿಸಿದ್ದಾರೆ.

ಅವತ್ತು ನಮಗೆಲ್ಲ ಹಬ್ಬದ ಕ್ಷಣ. ಎಲ್ಲರಿಗೂ ಅಯೋಧ್ಯೆಗೆ ಹೋಗಲು ಸಾಧ್ಯವಾಗುವುದಿಲ್ಲ. ಹಾಗಾಗಿ, ಅವರು ಹತ್ತಿರದ ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ ಸಂಭ್ರಮವನ್ನು ಆಚರಿಸಬೇಕು. ರಾತ್ರಿ, ಎಲ್ಲರೂ ಮನೆಯಲ್ಲಿ ದೀಪ ಬೆಳಗಿಸಬೇಕು. ಇದು ದೇಶದ ಪ್ರತಿಯೊಬ್ಬರಿಗೆ ಆರ್‌ಎಸ್‌ಎಸ್‌ ನೀಡುತ್ತಿರುವ ಕರೆ ಎಂದು ಅಂಬೇಕರ್ ತಿಳಿಸಿದ್ದಾರೆ.

‘ಶ್ರೀರಾಮ ಘನತೆ, ಪ್ರೀತಿ ಮತ್ತು ಧರ್ಮದ ಸಂಕೇತ. ಪ್ರತಿಷ್ಠಾಪನೆ ದಿನವನ್ನು ಹಬ್ಬದಂತೆ ಆಚರಿಸಿ. ಅದೊಂದು ಸೌಹಾರ್ದದ ಕ್ಷಣ. ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಭಾರತವು ಪ್ರಗತಿಯ ಪಥದಲ್ಲಿ ತನ್ನ ನಡಿಗೆಯನ್ನು ಮುಂದುವರಿಸಲಿದೆ’ ಎಂದು ಆರ್‌ಎಸ್‌ಎಸ್ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...