ಕಾಸರಗೋಡು | ಬಸ್‌ ನಿಲ್ಲಿಸದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರ ಪ್ರತಿಭಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

Date:

ಬಸ್‌ ನಿಲ್ಲಿಸದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರು ಒಟ್ಟಾಗಿ ಪ್ರತಿಭಟಿಸಿದ್ದ ವಿಡಿಯೋವೊಂದನ್ನು ತಪ್ಪಾಗಿ ಹಂಚಿಕೊಂಡು, ಬಲಪಂಥೀಯರು ಸೋಷಿಯಲ್ ಮೀಡಿಯಾದಲ್ಲಿ ಕೋಮು ಬಣ್ಣ ಹಚ್ಚಿ, ವೈರಲ್ ಮಾಡುತ್ತಿದ್ದಾರೆ.

“ಕೇರಳದಲ್ಲಿ ಮುಸ್ಲಿಂ ಮಹಿಳಾ ಪ್ರಯಾಣಿಕರು ಬುರ್ಖಾ ಇಲ್ಲದೆ ಇತರ ಸಮುದಾಯದ ಮಹಿಳೆಯರನ್ನು ಬಸ್‌ನಲ್ಲಿ ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ. ಈಗ, ಹಿಂದೂಗಳು ತಮ್ಮ ತಲೆಯನ್ನು ಮುಚ್ಚಿಕೊಳ್ಳಬೇಕು ಮತ್ತು ನಂತರ ಮಾತ್ರ ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಬಹುದು. ಆಶ್ಚರ್ಯಕರ ವಿಷಯ ಏನೆಂದರೆ, ಈ ಘಟನೆಯನ್ನು ಯಾವುದೇ ಟಿವಿ ಚಾನೆಲ್ ಮತ್ತು ಯಾವುದೇ ಪತ್ರಿಕೆಯು ವರದಿ ಮಾಡಿಲ್ಲ. ಮಾಧ್ಯಮಗಳು ನಿಗೂಢವಾಗಿ ಮೌನವಾಗಿವೆ” ಎಂದು ಬಸ್‌ನೊಳಗೆ ನಡೆದ ಜಗಳವೊಂದರ ನಡೆಯುವ ವಿಡಿಯೋವೊಂದನ್ನು ಬಲಪಂಥೀಯರು ಹಂಚಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ ಈ ವಿಡಿಯೋದ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚಿರುವ ಫ್ಯಾಕ್ಟ್‌ ಚೆಕ್ ವೆಬ್‌ಸೈಟ್ ಆಲ್ಟ್‌ ನ್ಯೂಸ್, ‘ಬಲಪಂಥೀಯರು ಆರೋಪಿಸಿ ಹಂಚುತ್ತಿರುವ ವಿಡಿಯೋ ಸುಳ್ಳು. ಅದು ವಿದ್ಯಾರ್ಥಿಗಳು ಬಸ್ ನಿಲ್ಲಿಸದಿದ್ದಕ್ಕೆ ಪ್ರತಿಭಟನೆ ನಡೆಸಿದ ವೇಳೆ ಬಸ್‌ನೊಳಗೆ ಇದ್ದ ಸೀರೆಯುಟ್ಟ ಮಹಿಳೆ ವಿದ್ಯಾರ್ಥಿಗಳ ಪ್ರತಿಭಟನೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಬಸ್ ನಿಲ್ಲಿಸದೇ ಇರುವುದರಿಂದ ತಾವು ಅನುಭವಿಸುತ್ತಿರುವ ಕಷ್ಟವನ್ನು ಮಹಿಳೆಗೆ ವಿವರಿಸಿದ್ದಾರೆ. ಈ ವೇಳೆ ವಾಗ್ವಾದವಾಗಿದೆ ಅಷ್ಟೇ. ಬುರ್ಖಾ ಇಲ್ಲದ್ದಕ್ಕೆ ಅಥವಾ ಬುರ್ಖಾ ಧರಿಸುವಂತೆ ಒತ್ತಾಯಿಸಿಲ್ಲ’ ಎಂದು ವರದಿ ಮಾಡಿದೆ.

ಅಷ್ಟಕ್ಕೂ ಆಗಿದ್ದೇನು?
ಕೇರಳದ ಕಾಸರಗೋಡಿನ ಕುಂಬಳೆ-ಮುಳ್ಳೇರಿಯಾ ಭಾಗದಲ್ಲಿರುವ ಮಹಿಳಾ ಕಾಲೇಜು ಬಳಿ ಹೊಸದಾಗಿ ಬಸ್ ನಿಲ್ದಾಣವೊಂದನ್ನು ನಿರ್ಮಿಸಲಾಗಿತ್ತು. ಅಕ್ಟೋಬರ್ 22ರಂದು ಭಾಸ್ಕರ ನಗರದಲ್ಲಿ ಬಸ್‌ ನಿಲ್ಲಿಸದ ವಿಚಾರಕ್ಕೆ ನಡೆದ ಘಟನೆ.

ಭಾಸ್ಕರ ನಗರದಲ್ಲಿ ಹೊಸದಾಗಿ ಬಸ್ ನಿಲ್ದಾಣವನ್ನು ಕೇರಳ ಸಾರಿಗೆ ಇಲಾಖೆಯು ಅನುಮೋದಿಸಿದೆ. ಆದರೂ ಕೆಲ ಖಾಸಗಿ ಬಸ್‌ಗಳು ನಿಲ್ಲಿಸದೇ ಇದ್ದುದ್ದರಿಂದ ಸಮೀಪದ ಖನ್ಸ ಕಾಲೇಜು ವಿದ್ಯಾರ್ಥಿಗಳು ಎರಡು ಬಸ್‌ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಈ ಪ್ರತಿಭಟನೆಯ ಸಂದರ್ಭದಲ್ಲಿ ಬಸ್ ಒಳಗಿದ್ದ ಹಿಂದೂ ಮಹಿಳೆಯೊಬ್ಬರು ತನಗೆ ತಡವಾಗುತ್ತಿದೆ ಎಂದು ದೂರುತ್ತಾ, ಬಸ್ ತಡೆದು ಪ್ರತಿಭಟನೆ ನಡೆಸಿದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಹಾಗಾಗಿ ಅಲ್ಲಿದ್ದ ವಿದ್ಯಾರ್ಥಿನಿಯರು ಆ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ಮಕ್ಕಳಿಗೂ ಇದೇ ರೀತಿ ಬಸ್ ನಿಲ್ಲಿಸದೇ ಇದ್ದಿದ್ದರೆ ನೀವು ಸುಮ್ಮನಿರುತ್ತೀರಾ? ಎಂದು ಪ್ರಶ್ನಿಸಿ, ತರಾಟೆಗೆ ತೆಗೆದುಕೊಂಡಿದ್ದಾರೆ. ಇಲ್ಲಿ ಬುರ್ಖಾದ ವಿಷಯವೇ ಪ್ರಸ್ತಾಪವಾಗಿರಲಿಲ್ಲ.

ಅಲ್ಲದೇ, ಈ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯ ಅಧಿಕಾರಿಗಳು ಕೂಡ ಸ್ಪಷ್ಟೀಕರಣ ನೀಡಿದ್ದು, ‘ಬಸ್ ನಿಲ್ಲಿಸದ ವಿಚಾರಕ್ಕೆ ಪ್ರತಿಭಟನೆ ನಡೆದಿದೆ. ಬಸ್‌ನೊಳಗಿದ್ದ ಮಹಿಳೆ ಅದರಿಂದ ಕಿರಿಕಿರಿ ಮಾಡಿದ್ದಾರೆ. ಉಳಿದ ವಿದ್ಯಾರ್ಥಿನಿಯರು ಅದು ಸರಿಯಲ್ಲ ಎಂದು ವಾದಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಕೋಮು ಆಯಾಮವಿಲ್ಲ ಮತ್ತು ಯಾವುದೇ ದೂರು ಬಂದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

news file

ಆದರೆ ಬಲಪಂಥೀಯರು ಇದಕ್ಕೆ ಕೋಮು ಆಯಾಮ ನೀಡಿ, ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೇ, ಇದನ್ನೇ ನಂಬಿಕೊಂಡು, ವಿಡಿಯೋವನ್ನು ಪರಿಶೀಲನೆ ನಡೆಸದೆ ಕೆಲವೊಂದು ಗೋದಿ ಮಾಧ್ಯಮಗಳೂ ಅದೇ ರೀತಿ ಸುದ್ದಿ ಪ್ರಕಟಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...