ಪಶ್ಚಿಮ ಬಂಗಾಳ | ಸಿಖ್ ಐಪಿಎಸ್ ಅಧಿಕಾರಿಯನ್ನು ‘ಖಲಿಸ್ತಾನಿ’ ಎಂದ ಬಿಜೆಪಿಗರು; ಒಂದಾದ ಸಿಖ್ಖರು

Date:

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ವಿವಾದಿತ ಸಂದೇಶಖಲಿ ಪ್ರದೇಶಕ್ಕೆ ಪ್ರವೇಶಿಸಲು ಯತ್ನಿಸಿದ ವಿಪಕ್ಷ ಬಿಜೆಪಿ ನಾಯಕರನ್ನು ತಡೆದಾಗ ಗುಂಪಿನಲ್ಲಿದ್ದವರು ಸಿಖ್ ಐಪಿಎಸ್ ಅಧಿಕಾರಿಯನ್ನು ‘ಖಲಿಸ್ತಾನಿ’ ಎಂದು ಕರೆದಿರುವುದು ಹೊಸ ವಿವಾದಕ್ಕೆ ನಾಂದಿ ಹಾಡಿದೆ.

ಸಿಖ್ ಐಪಿಎಸ್ ಅಧಿಕಾರಿಯನ್ನು ‘ಖಲಿಸ್ತಾನಿ’ ಎಂದಿರುವ ಹಿನ್ನೆಲೆಯಲ್ಲಿ ಬಿಜೆಪಿಯ ವಿರುದ್ಧ ಸಿಖ್ ಸಮುದಾಯ ಒಂದಾಗಿದ್ದು, ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದೆ.

ವಿವಾದಿತ ಸಂದೇಶಖಲಿ ಪ್ರದೇಶಕ್ಕೆ ಪ್ರವೇಶಿಸಲು ಬಿಜೆಪಿಯ ನಿಯೋಗವೊಂದು ಯತ್ನಿಸುತ್ತಿತ್ತು. ಈ ವೇಳೆ ಸ್ಥಳದಲ್ಲಿ ಸಿಖ್ ಐಪಿಎಸ್ ಅಧಿಕಾರಿ ಜಸ್‌ಪ್ರೀತ್‌ ಸಿಂಗ್ ಎಂಬುವವರು ಭದ್ರತೆಗೆ ನಿಯೋಜನೆಗೊಂಡಿದ್ದರು. ಬಿಜೆಪಿ ನಾಯಕರು ಮುಂದೆ ಹೋಗದಂತೆ ಜಸ್‌ಪ್ರೀತ್‌ ಸಿಂಗ್ ತಡೆದಾಗ ಬಿಜೆಪಿಯ ನಿಯೋಗದಲ್ಲಿದ್ದವರೊಬ್ಬರು ಖಲಿಸ್ತಾನಿ ಎಂದು ಹೇಳಿರುವುದು ಅಧಿಕಾರಿಗೆ ಕೇಳಿಸಿದೆ. ಅಲ್ಲದೇ, ಸ್ಥಳದಲ್ಲಿದ್ದ ಮಾಧ್ಯಮ ಪ್ರತಿನಿಧಿಗಳ ಕ್ಯಾಮರಾಗಳಲ್ಲಿ ಇದು ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಆಕ್ರೋಶಗೊಂಡ ಜಸ್‌ಪ್ರೀತ್‌ ಸಿಂಗ್, ತಮ್ಮನ್ನು ಖಾಲಿಸ್ತಾನಿ ಎಂದು ಕರೆದದ್ದೇಕೆ ಎಂದು ಪ್ರಶ್ನಿಸಿದರು. “ನಾನು ಸಿಖ್ ಪೇಟ ಧರಿಸಿದ್ದೇನೆಂಬ ಮಾತ್ರಕ್ಕೆ ಖಾಲಿಸ್ತಾನಿ ಎನ್ನುತ್ತೀರಾ?” ಎಂದು ಪ್ರಶ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ನಾನು ಪೇಟ ಧರಿಸಿದ್ದೇನೆಂಬ ಮಾತ್ರಕ್ಕೆ ನನ್ನನ್ನು ಖಾಲಿಸ್ತಾನಿ ಎಂದು ಕರೆಯುತ್ತೀರಾ? ನಿಮಗೆ ಇಷ್ಟೊಂದು ಧೈರ್ಯವೇ? ಪೇಟ ಧರಿಸಿ ಯಾವುದೇ ಪೊಲೀಸ್‌ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದರೆ ಅವರು ಖಾಲಿಸ್ತಾನಿ ಆಗುತ್ತಾರೆಯೇ?” ಎಂದು ಅವರು ಸುವೇಂದು ಅಧಿಕಾರಿ ಸಹಿತ ಬಿಜೆಪಿ ಶಾಸಕರಿದ್ದ ತಂಡಕ್ಕೆ ಹೇಳುವುದು ವಿಡಿಯೋದಲ್ಲಿ ದಾಖಲಾಗಿದೆ.

“ನಾನು ನಿಮ್ಮ ಧರ್ಮದ ಬಗ್ಗೆ ಏನೂ ಹೇಳುವುದಿಲ್ಲ. ನೀವೂ ನನ್ನ ಧರ್ಮದ ಬಗ್ಗೆ ಏನೂ ಹೇಳಬಾರದು. ಏಕೆ ಹೀಗೆ ಮಾಡುತ್ತೀರಿ? ನಿಮ್ಮ ವಿರುದ್ಧ ಖಂಡಿತವಾಗಿಯೂ ಕ್ರಮ ಕೈಗೊಳ್ಳುವೆ” ಎಂದು ಆಕ್ರೋಶಗೊಂಡ ಸಿಖ್ ಐಪಿಎಸ್ ಅಧಿಕಾರಿ ಜಸ್‌ಪ್ರೀತ್‌ ಸಿಂಗ್ ಹೇಳಿದ್ದಾರೆ.

ಈ ವೇಳೆ ಅಧಿಕಾರಿ ಜೊತೆಗಿದ್ದ ಬಿಜೆಪಿ ಶಾಸಕ ಅಗ್ನಿಮಿತ್ರ ಪೌಲ್ ಅವರು ಸಿಂಗ್‌ ಅವರನ್ನು ಉದ್ದೇಶಿಸಿ, “ನಿಮ್ಮ ಕರ್ತವ್ಯ ನಿರ್ವಹಿಸಿ, ಯಾರೋ ಒಬ್ಬರ ಪರ ಏಕೆ ವಹಿಸುತ್ತಿದ್ದೀರಿ?” ಎಂದು ಹೇಳುವುದು ಕೂಡ ಕೇಳಿಸಿದೆ.

ಈ ಘಟನೆಯ ಬಗ್ಗೆ ಸ್ವತಃ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದು, ಬಿಜೆಪಿಯ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.

ಒಂದಾದ ಸಿಖ್ ಸಮುದಾಯದಿಂದ ಪ್ರತಿಭಟನೆ

ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಒಂದಾದ ಸಿಖ್ ಸಮುದಾಯದ ಮುಖಂಡರು, ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊಲ್ಕತ್ತಾದಲ್ಲಿರುವ ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವ ಸಿಖ್ ಸಮುದಾಯದ ಜನರು, ಸಿಖ್ ವಿರೋಧಿ ಬಿಜೆಪಿಗರಿಗೆ ಧಿಕ್ಕಾರ ಎಂದು ಕೂಗಿ ಪ್ರತಿಭಟಿಸುತ್ತಿದ್ದಾರೆ.

“ಕರ್ತವ್ಯನಿರತ ಐಪಿಎಸ್ ಅಧಿಕಾರಿಯನ್ನು ಜಸ್‌ಪ್ರೀತ್ ಸಿಂಗ್‌ ಅವರನ್ನು ಖಲಿಸ್ತಾನಿ ಎಂದು ಕರೆಯುವ ಮೂಲಕ ದೇಶಪ್ರೇಮಿಗಳಾದ ಸಿಖ್ ಸಮುದಾಯವನ್ನು ಅವಮಾನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸಿಖ್ ಸಮುದಾಯದವರಲ್ಲಿ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...